AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shattila Ekadashi: ಷಟ್ತಿಲ ಏಕಾದಶಿಯಂದು ಎಳ್ಳನ್ನು ದಾನ ಮಾಡುವುದರಿಂದ ನಿಮಗೆ ಈ ವಿಶೇಷ ಫಲ ಸಿಗುತ್ತೆ

ಹಿಂದೂ ಕ್ಯಾಲೆಂಡರ್ ಪ್ರಕಾರ, ಪುಷ್ಯಮಾಸದ ಕೃಷ್ಣ ಪಕ್ಷದ ಏಕಾದಶಿ ದಿನವು ಶುಕ್ರವಾರ, ಜನವರಿ 28 ರ ಮುಂಜಾನೆ 02:16 ಕ್ಕೆ ಪ್ರಾರಂಭವಾಗುತ್ತದೆ. ಹಾಗೂ ಅದೇ ದಿನ ರಾತ್ರಿ 11.35 ಕ್ಕೆ ಕೊನೆಗೊಳ್ಳುತ್ತದೆ.

Shattila Ekadashi: ಷಟ್ತಿಲ ಏಕಾದಶಿಯಂದು ಎಳ್ಳನ್ನು ದಾನ ಮಾಡುವುದರಿಂದ ನಿಮಗೆ ಈ ವಿಶೇಷ ಫಲ ಸಿಗುತ್ತೆ
ಭಗವಾನ್ ವಿಷ್ಣು
TV9 Web
| Edited By: |

Updated on: Jan 28, 2022 | 6:30 AM

Share

ಪಂಚಾಂಗದ ಪ್ರಕಾರ, 2022ರ ಜನವರಿ 28ರ ಪುಷ್ಯಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಷಟ್ತಿಲ ಏಕಾದಶಿ ಎಂದು ಕರೆಯುವ ವೈಷ್ಣವೈಕಾದಶಿಯನ್ನು ಆಚರಿಸಲಾಗುತ್ತೆ. ಷಟ್ತಿಲ ಏಕಾದಶಿಯ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸಲಾಗುತ್ತದೆ ಮತ್ತು ಎಳ್ಳನ್ನು ವಿಷ್ಣುವಿಗೆ ಅರ್ಪಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಶಟಿಲ ಏಕಾದಶಿಯಂದು ಎಳ್ಳನ್ನು ದಾನ ಮಾಡುವುದರಿಂದ ಸ್ವರ್ಗಕ್ಕೆ ದಾರಿ ಸಿಗುತ್ತದೆ. ಮತ್ತು ಎಳ್ಳನ್ನು ದಾನ ಮಾಡಿದವರಿಗೆ ಸಾವಿರ ವರ್ಷಗಳವರೆಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತದೆ ಎನ್ನಲಾಗುತ್ತೆ. ಪಾಪಗಳು ಮತ್ತು ದುಃಖಗಳು ದೂರವಾಗುತ್ತವೆ.

ಷಟ್ತಿಲ ಏಕಾದಶಿ 2022 ದಿನಾಂಕ ಮತ್ತು ಮುಹೂರ್ತ ಹಿಂದೂ ಕ್ಯಾಲೆಂಡರ್ ಪ್ರಕಾರ, ಪುಷ್ಯಮಾಸದ ಕೃಷ್ಣ ಪಕ್ಷದ ಏಕಾದಶಿ ದಿನವು ಶುಕ್ರವಾರ, ಜನವರಿ 28 ರ ಮುಂಜಾನೆ 02:16 ಕ್ಕೆ ಪ್ರಾರಂಭವಾಗುತ್ತದೆ. ಹಾಗೂ ಅದೇ ದಿನ ರಾತ್ರಿ 11.35 ಕ್ಕೆ ಕೊನೆಗೊಳ್ಳುತ್ತದೆ.

ಷಟ್ತಿಲ ಏಕಾದಶಿಯ ದಿನ ಪ್ರಾತಃಕಾಲದಲ್ಲಿ ಪೂಜೆಯನ್ನು ಮಾಡಬಹುದು. ಈ ದಿನ ಅಭಿಜಿತ್ ಮುಹೂರ್ತವು ಮಧ್ಯಾಹ್ನ 12.13 ರಿಂದ 12.56 ರವರೆಗೆ ಇರುತ್ತದೆ. ಮಧ್ಯಾಹ್ನ 02.22 ರಿಂದ 03.05 ರವರೆಗೆ ವಿಜಯ ಮುಹೂರ್ತ.

ಷಟ್ತಿಲ ಏಕಾದಶಿ 2022 ಪರಾನಾ ಷಟ್ತಿಲ ಏಕಾದಶಿಯ ಉಪವಾಸವನ್ನು ಆಚರಿಸುವವರು ಜನವರಿ 29 ರ ಶನಿವಾರದಂದು ಬೆಳಿಗ್ಗೆ 07.11 ರಿಂದ 09.20 ರವರೆಗೆ ಪಾರಣ ಮಾಡಬಹುದು. ಈ ದಿನ ದ್ವಾದಶಿ ತಿಥಿ ರಾತ್ರಿ 08:37 ಕ್ಕೆ ಮುಕ್ತಾಯವಾಗುತ್ತದೆ.

ಷಟ್ತಿಲ ಏಕಾದಶಿಯ ದಿನ ನೀರಿನಲ್ಲಿ ಎಳ್ಳು ಹಾಕಿ ಸ್ನಾನ ಮಾಡುತ್ತಾರೆ. ನಂತರ ಈ ದಿನ ಉಪವಾಸ ಮತ್ತು ವಿಷ್ಣುವಿನ ಪೂಜೆಗೆ ಮೀಸಲಿಡಲಾಗಿದೆ. ಹೂವುಗಳು, ಹಣ್ಣುಗಳು, ಅಕ್ಷತೆ, ಎಳ್ಳು ಲಡ್ಡುಗಳು, ಪಂಚಾಮೃತ, ತುಳಸಿ ಎಲೆಗಳು ಇತ್ಯಾದಿಗಳನ್ನು ವಿಷ್ಣುವಿಗೆ ಪೂಜೆಯಲ್ಲಿ ಅರ್ಪಿಸಲಾಗುತ್ತದೆ. ಪೂಜೆಯ ಸಮಯದಲ್ಲಿ, ಷಟ್ತಿಲ ಏಕಾದಶಿ ಉಪವಾಸದ ಕಥೆಯನ್ನು ಕೇಳುತ್ತಾರೆ ಮತ್ತು ಅಂತಿಮವಾಗಿ ವಿಷ್ಣುವಿಗೆ ಆರತಿಯನ್ನು ಬೆಳಗುತ್ತಾರೆ.

ಇದನ್ನೂ ಓದಿ: ಇಂದು ಮೋಕ್ಷದ ವೈಕುಂಠ ಏಕಾದಶಿ ದಿನ: ಭಗವಾನ್ ವಿಷ್ಣುವನ್ನು ಪೂಜಿಸುವುದು ಹೇಗೆ? ವಿಷ್ಣುವಿನ ಆಶೀರ್ವಾದಕ್ಕಾಗಿ ಹೀಗೆ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ