AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Lingam Puja: ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಹಿಂದೂ ಧರ್ಮದಲ್ಲಿ ಪ್ರಮುಖ ಪೂಜಾ ವಿಧಾನ. ನೀರು, ಹಾಲು, ಜೇನು ಮುಂತಾದ ಪದಾರ್ಥಗಳಿಂದ ಅಭಿಷೇಕ ಮಾಡುವುದರಿಂದ ಆಧ್ಯಾತ್ಮಿಕ ಮತ್ತು ದೈಹಿಕ ಪ್ರಯೋಜನಗಳಿವೆ ಎಂದು ನಂಬಲಾಗಿದೆ. ವಿವಿಧ ದಿನಗಳಲ್ಲಿ ಅಭಿಷೇಕ ಮಾಡುವುದರಿಂದ ವಿಭಿನ್ನ ಫಲಿತಾಂಶಗಳನ್ನು ಪಡೆಯಬಹುದು. ಈ ಲೇಖನವು ಅಭಿಷೇಕದ ವಿಧಾನ, ಪ್ರಯೋಜನಗಳು ಮತ್ತು ವಿವಿಧ ದಿನಗಳ ಪ್ರಾಮುಖ್ಯತೆಯನ್ನು ವಿವರಿಸುತ್ತದೆ.

Shiva Lingam Puja: ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
Shiva Lingam Abhishekam
ಅಕ್ಷತಾ ವರ್ಕಾಡಿ
|

Updated on: Jan 07, 2025 | 8:37 AM

Share

ಹಿಂದೂ ಧರ್ಮದಲ್ಲಿ ಶಿವಲಿಂಗವನ್ನು ಶಿವನ ಸಂಕೇತವಾಗಿ ಪೂಜಿಸಲಾಗುತ್ತದೆ. ಶಿವಲಿಂಗಕ್ಕೆ ನೀರಿನಿಂದ ಅಭಿಷೇಕ ಮಾಡಲಾಗುತ್ತದೆ. ಇದನ್ನು ಮಾಡುವುದನ್ನು ಶುದ್ಧತೆ ಮತ್ತು ಭಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ನೀರಿನ ಶುದ್ಧತೆಯು ಪ್ರಕೃತಿಯ ಜೀವ ನೀಡುವ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಸಾಮಾನ್ಯವಾಗಿ ಈ ಆಚರಣೆಯನ್ನು ಅಭಿಷೇಕ ಎಂದು ಕರೆಯಲಾಗುತ್ತದೆ. ಶಿವನಿಗೆ ಜಲಾಭಿಷೇಕ ಮಾಡುವುದರಿಂದ ಮನುಷ್ಯರಲ್ಲಿನ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂಬುದು ಆಧ್ಯಾತ್ಮಿಕ ನಂಬಿಕೆ.

ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಹೇಗೆ?

  • ಶಿವಲಿಂಗದ ದಕ್ಷಿಣ ಮತ್ತು ಪೂರ್ವ ಭಾಗದಲ್ಲಿ ನಿಂತು ಜಲ ಅಭಿಷೇಕ ಮಾಡಬಾರದು. ಶಿವಲಿಂಗಕ್ಕೆ ಉತ್ತರಾಭಿಷೇಕ ಮಾಡಬೇಕೆಂದು ಶಾಸ್ತ್ರಗಳು ಹೇಳುತ್ತವೆ.
  • ಮನೆಯಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಕುಳಿತ ಭಂಗಿಯಲ್ಲಿಯೇ ಮಾಡಬೇಕು ಎಂದು ಶಾಸ್ತ್ರಗಳು ಹೇಳುತ್ತವೆ.
  • ಉಕ್ಕಿನ ಅಥವಾ ಕಬ್ಬಿಣದ ಪಾತ್ರೆಗಳಿಂದ ಅಭಿಷೇಕ ಮಾಡಬಾರದು. ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಶಿವಲಿಂಗಕ್ಕೆ ಅಭಿಷೇಕ ಮಾಡಿ.
  • ಆದರೆ ನೀರಿನ ಬದಲು ಹಾಲಿನಿಂದ ಅಭಿಷೇಕ ಮಾಡಿದರೆ ಈ ನಿಯಮಗಳು ಅನ್ವಯಿಸುವುದಿಲ್ಲ. ಸರಳವಾದ ಪಾತ್ರೆಯಿಂದಲೂ ಅಭಿಷೇಕವನ್ನು ಮಾಡಬಹುದು.
  • ಶಂಖಕ್ಕೆ ನೀರು ಹಾಕಿ ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ. ಏಕೆಂದರೆ ಶಂಖು ಎಂಬ ರಾಕ್ಷಸನನ್ನು ಶಿವನು ಕೊಂದನೆಂದು ಪುರಾಣಗಳು ಹೇಳುತ್ತವೆ.. ನಂತರ ಶಂಖವನ್ನು ಅವನ ಅಸ್ಥಿಯಿಂದ ಮಾಡಲಾಗಿತ್ತು.

ಯಾವುದೇ ವಸ್ತುವಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ಏನು ಫಲ?

  • ಜೇನು ತುಪ್ಪದಿಂದ ಅಭಿಷೇಕ ಮಾಡುವುದರಿಂದ ನೀವು ರೋಗಗಳಿಂದ ಗುಣಮುಖರಾಗುತ್ತೀರಿ.
  • ಗಂಗಾಜಲದಿಂದ ಅಭಿಷೇಕ ಮಾಡುವುದರಿಂದ ವಿವಿಧ ಲಾಭಗಳು ದೊರೆಯುತ್ತವೆ.
  • ಅಭಿಷೇಕ ಕಬ್ಬಿನ ರಸದಿಂದ ಮಾಡುವುದರಿಂದ ಮನೆಯಲ್ಲಿ ಶಾಂತಿಯನ್ನು ತರುತ್ತದೆ. ಲಾಭ ಇರುತ್ತದೆ.

ಇದನ್ನೂ ಓದಿ: Swapna Shastra: ಈ ರೀತಿಯ ಕನಸು ಬೀಳುವುದು ಅಶುಭದ ಸಂಕೇತ!

ಅಭಿಷೇಕ ಮಾಡಬೇಕಾದ ದಿನ, ಅವುಗಳ ಲಾಭಗಳು:

  • ಭಾನುವಾರದ ಅಭಿಷೇಕವು ಶಿವನಿಗೆ ವಿಶೇಷವಾಗಿದೆ. ಆ ದಿನ ಅಭಿಷೇಕ ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ.
  • ಶಿವನನ್ನು ಮೆಚ್ಚಿಸಲು ಸೋಮವಾರವನ್ನು ವಿಶೇಷವೆಂದು ಪರಿಗಣಿಸಲಾಗಿದೆ. ಈ ದಿನ ಶಿವಲಿಂಗಕ್ಕೆ ನೀರನ್ನು ಅರ್ಪಿಸಿದರೆ ಎಲ್ಲಾ ರೀತಿಯ ಇಷ್ಟಾರ್ಥಗಳು ಈಡೇರುತ್ತವೆ.
  • ಮಂಗಳವಾರ ಭಗವಾನ್ ಶಿವನಿಗೆ ಅಭಿಷೇಕ ಮಾಡುವುದರಿಂದ ಸರ್ವ ದೇವತೆಗಳ ಆಶೀರ್ವಾದವನ್ನು ನೀವು ಪಡೆಯುತ್ತೀರಿ.
  • ಬುಧವಾರ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರೆ ವಿವಾಹ ವಿಘ್ನಗಳು ನಿವಾರಣೆಯಾಗುತ್ತವೆ.
  • ಗುರುವಾರದ ಅಭಿಷೇಕವು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಉತ್ತಮ ಯಶಸ್ಸನ್ನು ತರುತ್ತದೆ ಎಂದು ನಂಬಲಾಗಿದೆ.
  • ಶುಕ್ರವಾರದಂದು ಶಿವಲಿಂಗಕ್ಕೆ ಜಲಾಭಿಷೇಕ ಮಾಡುವುದರಿಂದ ದಾಂಪತ್ಯ ಜೀವನದಲ್ಲಿ ಸಂತೋಷ ಸಿಗುತ್ತದೆ.
  • ಶನಿವಾರದಂದು ಭಗವಾನ್ ಶಿವನಿಗೆ ಅಭಿಷೇಕವು ಅಕಾಲಿಕ ಮರಣದ ಭಯವನ್ನು ತೊಡೆದುಹಾಕುತ್ತದೆ ಮತ್ತು ದೀರ್ಘಾಯುಷ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ