Shiva Lingam Puja: ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಹಿಂದೂ ಧರ್ಮದಲ್ಲಿ ಪ್ರಮುಖ ಪೂಜಾ ವಿಧಾನ. ನೀರು, ಹಾಲು, ಜೇನು ಮುಂತಾದ ಪದಾರ್ಥಗಳಿಂದ ಅಭಿಷೇಕ ಮಾಡುವುದರಿಂದ ಆಧ್ಯಾತ್ಮಿಕ ಮತ್ತು ದೈಹಿಕ ಪ್ರಯೋಜನಗಳಿವೆ ಎಂದು ನಂಬಲಾಗಿದೆ. ವಿವಿಧ ದಿನಗಳಲ್ಲಿ ಅಭಿಷೇಕ ಮಾಡುವುದರಿಂದ ವಿಭಿನ್ನ ಫಲಿತಾಂಶಗಳನ್ನು ಪಡೆಯಬಹುದು. ಈ ಲೇಖನವು ಅಭಿಷೇಕದ ವಿಧಾನ, ಪ್ರಯೋಜನಗಳು ಮತ್ತು ವಿವಿಧ ದಿನಗಳ ಪ್ರಾಮುಖ್ಯತೆಯನ್ನು ವಿವರಿಸುತ್ತದೆ.

Shiva Lingam Puja: ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
Shiva Lingam Abhishekam
Follow us
ಅಕ್ಷತಾ ವರ್ಕಾಡಿ
|

Updated on: Jan 07, 2025 | 8:37 AM

ಹಿಂದೂ ಧರ್ಮದಲ್ಲಿ ಶಿವಲಿಂಗವನ್ನು ಶಿವನ ಸಂಕೇತವಾಗಿ ಪೂಜಿಸಲಾಗುತ್ತದೆ. ಶಿವಲಿಂಗಕ್ಕೆ ನೀರಿನಿಂದ ಅಭಿಷೇಕ ಮಾಡಲಾಗುತ್ತದೆ. ಇದನ್ನು ಮಾಡುವುದನ್ನು ಶುದ್ಧತೆ ಮತ್ತು ಭಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ನೀರಿನ ಶುದ್ಧತೆಯು ಪ್ರಕೃತಿಯ ಜೀವ ನೀಡುವ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಸಾಮಾನ್ಯವಾಗಿ ಈ ಆಚರಣೆಯನ್ನು ಅಭಿಷೇಕ ಎಂದು ಕರೆಯಲಾಗುತ್ತದೆ. ಶಿವನಿಗೆ ಜಲಾಭಿಷೇಕ ಮಾಡುವುದರಿಂದ ಮನುಷ್ಯರಲ್ಲಿನ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂಬುದು ಆಧ್ಯಾತ್ಮಿಕ ನಂಬಿಕೆ.

ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಹೇಗೆ?

  • ಶಿವಲಿಂಗದ ದಕ್ಷಿಣ ಮತ್ತು ಪೂರ್ವ ಭಾಗದಲ್ಲಿ ನಿಂತು ಜಲ ಅಭಿಷೇಕ ಮಾಡಬಾರದು. ಶಿವಲಿಂಗಕ್ಕೆ ಉತ್ತರಾಭಿಷೇಕ ಮಾಡಬೇಕೆಂದು ಶಾಸ್ತ್ರಗಳು ಹೇಳುತ್ತವೆ.
  • ಮನೆಯಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ಕುಳಿತ ಭಂಗಿಯಲ್ಲಿಯೇ ಮಾಡಬೇಕು ಎಂದು ಶಾಸ್ತ್ರಗಳು ಹೇಳುತ್ತವೆ.
  • ಉಕ್ಕಿನ ಅಥವಾ ಕಬ್ಬಿಣದ ಪಾತ್ರೆಗಳಿಂದ ಅಭಿಷೇಕ ಮಾಡಬಾರದು. ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಶಿವಲಿಂಗಕ್ಕೆ ಅಭಿಷೇಕ ಮಾಡಿ.
  • ಆದರೆ ನೀರಿನ ಬದಲು ಹಾಲಿನಿಂದ ಅಭಿಷೇಕ ಮಾಡಿದರೆ ಈ ನಿಯಮಗಳು ಅನ್ವಯಿಸುವುದಿಲ್ಲ. ಸರಳವಾದ ಪಾತ್ರೆಯಿಂದಲೂ ಅಭಿಷೇಕವನ್ನು ಮಾಡಬಹುದು.
  • ಶಂಖಕ್ಕೆ ನೀರು ಹಾಕಿ ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ. ಏಕೆಂದರೆ ಶಂಖು ಎಂಬ ರಾಕ್ಷಸನನ್ನು ಶಿವನು ಕೊಂದನೆಂದು ಪುರಾಣಗಳು ಹೇಳುತ್ತವೆ.. ನಂತರ ಶಂಖವನ್ನು ಅವನ ಅಸ್ಥಿಯಿಂದ ಮಾಡಲಾಗಿತ್ತು.

ಯಾವುದೇ ವಸ್ತುವಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ಏನು ಫಲ?

  • ಜೇನು ತುಪ್ಪದಿಂದ ಅಭಿಷೇಕ ಮಾಡುವುದರಿಂದ ನೀವು ರೋಗಗಳಿಂದ ಗುಣಮುಖರಾಗುತ್ತೀರಿ.
  • ಗಂಗಾಜಲದಿಂದ ಅಭಿಷೇಕ ಮಾಡುವುದರಿಂದ ವಿವಿಧ ಲಾಭಗಳು ದೊರೆಯುತ್ತವೆ.
  • ಅಭಿಷೇಕ ಕಬ್ಬಿನ ರಸದಿಂದ ಮಾಡುವುದರಿಂದ ಮನೆಯಲ್ಲಿ ಶಾಂತಿಯನ್ನು ತರುತ್ತದೆ. ಲಾಭ ಇರುತ್ತದೆ.

ಇದನ್ನೂ ಓದಿ: Swapna Shastra: ಈ ರೀತಿಯ ಕನಸು ಬೀಳುವುದು ಅಶುಭದ ಸಂಕೇತ!

ಅಭಿಷೇಕ ಮಾಡಬೇಕಾದ ದಿನ, ಅವುಗಳ ಲಾಭಗಳು:

  • ಭಾನುವಾರದ ಅಭಿಷೇಕವು ಶಿವನಿಗೆ ವಿಶೇಷವಾಗಿದೆ. ಆ ದಿನ ಅಭಿಷೇಕ ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ.
  • ಶಿವನನ್ನು ಮೆಚ್ಚಿಸಲು ಸೋಮವಾರವನ್ನು ವಿಶೇಷವೆಂದು ಪರಿಗಣಿಸಲಾಗಿದೆ. ಈ ದಿನ ಶಿವಲಿಂಗಕ್ಕೆ ನೀರನ್ನು ಅರ್ಪಿಸಿದರೆ ಎಲ್ಲಾ ರೀತಿಯ ಇಷ್ಟಾರ್ಥಗಳು ಈಡೇರುತ್ತವೆ.
  • ಮಂಗಳವಾರ ಭಗವಾನ್ ಶಿವನಿಗೆ ಅಭಿಷೇಕ ಮಾಡುವುದರಿಂದ ಸರ್ವ ದೇವತೆಗಳ ಆಶೀರ್ವಾದವನ್ನು ನೀವು ಪಡೆಯುತ್ತೀರಿ.
  • ಬುಧವಾರ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರೆ ವಿವಾಹ ವಿಘ್ನಗಳು ನಿವಾರಣೆಯಾಗುತ್ತವೆ.
  • ಗುರುವಾರದ ಅಭಿಷೇಕವು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಉತ್ತಮ ಯಶಸ್ಸನ್ನು ತರುತ್ತದೆ ಎಂದು ನಂಬಲಾಗಿದೆ.
  • ಶುಕ್ರವಾರದಂದು ಶಿವಲಿಂಗಕ್ಕೆ ಜಲಾಭಿಷೇಕ ಮಾಡುವುದರಿಂದ ದಾಂಪತ್ಯ ಜೀವನದಲ್ಲಿ ಸಂತೋಷ ಸಿಗುತ್ತದೆ.
  • ಶನಿವಾರದಂದು ಭಗವಾನ್ ಶಿವನಿಗೆ ಅಭಿಷೇಕವು ಅಕಾಲಿಕ ಮರಣದ ಭಯವನ್ನು ತೊಡೆದುಹಾಕುತ್ತದೆ ಮತ್ತು ದೀರ್ಘಾಯುಷ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್