AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravan Purnima 2025: ಶ್ರಾವಣ ಹುಣ್ಣಿಮೆ ಯಾವಾಗ? ಶುಭ ಸಮಯ, ಪೂಜಾ ವಿಧಿ ವಿಧಾನವನ್ನು ತಿಳಿಯಿರಿ

ಶ್ರಾವಣ ಪೂರ್ಣಿಮೆ, ನೂಲು ಹುಣ್ಣಿಮೆ ಎಂದೂ ಕರೆಯಲ್ಪಡುವ ಈ ಪವಿತ್ರ ದಿನದಂದು ರಕ್ಷಾಬಂಧನ ಹಬ್ಬವನ್ನೂ ಆಚರಿಸಲಾಗುತ್ತದೆ. ಬ್ರಾಹ್ಮಣರು ಈ ದಿನ ಜನಿವಾರವನ್ನು ಬದಲಾಯಿಸುತ್ತಾರೆ. ಇದಲ್ಲದೇ ಈ ದಿನ ಉಪವಾಸ, ದಾನ ಮತ್ತು ಸ್ನಾನ ಇತ್ಯಾದಿ ಆಚರಣೆಗಳು ನಡೆಯುತ್ತವೆ. ವಿಷ್ಣು ಮತ್ತು ಶಿವನ ಪೂಜೆಯ ಜೊತೆಗೆ, ಗಾಯತ್ರಿ ಜಯಂತಿಯನ್ನೂ ಆಚರಿಸಲಾಗುತ್ತದೆ. ಚಂದ್ರೋದಯದ ನಂತರ ಉಪವಾಸ ಮುರಿಯಲಾಗುತ್ತದೆ.

Shravan Purnima 2025: ಶ್ರಾವಣ ಹುಣ್ಣಿಮೆ ಯಾವಾಗ? ಶುಭ ಸಮಯ, ಪೂಜಾ ವಿಧಿ ವಿಧಾನವನ್ನು ತಿಳಿಯಿರಿ
ಶ್ರಾವಣ ಮಾಸದ ಹುಣ್ಣಿಮೆ
ಅಕ್ಷತಾ ವರ್ಕಾಡಿ
|

Updated on:Aug 06, 2025 | 10:35 AM

Share

ಶ್ರಾವಣ ಮಾಸದ ಹುಣ್ಣಿಮೆಯನ್ನು ಸಾಮಾನ್ಯವಾಗಿ ಶ್ರಾವಣ ಪೂರ್ಣಿಮೆ ಅಥವಾ ನೂಲು ಹುಣ್ಣಿಮೆ ಎಂದು ಕರೆಯುತ್ತಾರೆ. ಈ ದಿನದಂದು ರಕ್ಷಾ ಬಂಧನ ಹಬ್ಬವನ್ನೂ ಆಚರಿಸಲಾಗುತ್ತದೆ ಮತ್ತು ಬ್ರಾಹ್ಮಣರು ಪವಿತ್ರ ದಾರವನ್ನು ಬದಲಾಯಿಸುವ ಆಚರಣೆ ಮಾಡುತ್ತಾರೆ. ಈ ವರ್ಷ ಶ್ರಾವಣ ಮಾಸದ ಹುಣ್ಣಿಮೆಯು ಆಗಸ್ಟ್ 9 ರಂದು ಬಂದಿದೆ. ಶ್ರಾವಣ ಪೂರ್ಣಿಮೆಯ ದಿನದಂದು ಭಕ್ತರು ಸ್ನಾನ, ದಾನ ಮತ್ತು ಉಪವಾಸವನ್ನು ಆಚರಿಸುತ್ತಾರೆ. ರಾತ್ರಿ ಚಂದ್ರನನ್ನು ನೋಡಿದ ನಂತರ ಪೂರ್ಣಿಮೆ ಉಪವಾಸವನ್ನು ಮುರಿಯಲಾಗುತ್ತದೆ. ಈ ದಿನ, ವಿಷ್ಣು ಮತ್ತು ಶಿವನನ್ನು ಪೂಜಿಸಲಾಗುತ್ತದೆ.

ಶ್ರಾವಣ ಪೂರ್ಣಿಮೆ ತಿಥಿ:

ಹುಣ್ಣಿಮೆ ದಿನಾಂಕವು ಆಗಸ್ಟ್ 8, 2025 ರಂದು ಮಧ್ಯಾಹ್ನ 02:12 ಕ್ಕೆ ಪ್ರಾರಂಭವಾಗಿ ಮರುದಿನ ಆಗಸ್ಟ್ 9 ರಂದು ಮಧ್ಯಾಹ್ನ 1.24 ಕ್ಕೆ ಕೊನೆಗೊಳ್ಳುತ್ತದೆ. ಆದ್ದರಿಂದ ಶ್ರಾವಣ ಮಾಸದ ಹುಣ್ಣಿಮೆ ಆಗಸ್ಟ್ 9, ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನ ಚಂದ್ರೋದಯದ ಸಮಯ ಸಂಜೆ 7.21 ಆಗಿರುತ್ತದೆ.

ರಕ್ಷಾಬಂಧನ ಹಬ್ಬವನ್ನು ದಿನವೇ ಆಚರಿಸಲಾಗುತ್ತದೆ. ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುತ್ತಾರೆ ಮತ್ತು ಅವರಿಗೆ ದೀರ್ಘಾಯುಷ್ಯವನ್ನು ಹಾರೈಸುತ್ತಾರೆ. ಸಹೋದರರು ತಮ್ಮ ಸಹೋದರಿಯರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡುತ್ತಾರೆ. ಇದರೊಂದಿಗೆ, ಹುಣ್ಣಿಮೆಯಂದು ಗಾಯತ್ರಿ ಜಯಂತಿ ಹಬ್ಬವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಗಾಯತ್ರಿ ದೇವಿಯ ಜನ್ಮದಿನವೆಂದು ಆಚರಿಸಲಾಗುತ್ತದೆ.

ಇದನ್ನೂ ಓದಿರಕ್ಷಾ ಬಂಧನ ಹಬ್ಬದಂದು ರಾಖಿ ಕಟ್ಟಲು ಶುಭ ಸಮಯ ಯಾವುದು?

ಶ್ರಾವಣ ಮಾಸದ ಹುಣ್ಣಿಮೆಯ ಪೂಜಾ ವಿಧಿ ವಿಧಾನ:

  • ಶ್ರಾವಣ ಮಾಸದ ಹುಣ್ಣಿಮೆಯಂದು ಬೆಳಿಗ್ಗೆ ಎದ್ದು ಉಪವಾಸ ವ್ರತ ಕೈಗೊಳ್ಳಿ.
  • ಈ ದಿನ, ಪವಿತ್ರ ನದಿಯಲ್ಲಿ ಸ್ನಾನ ಮಾಡಿ. ನೀವು ಅಲ್ಲಿಗೆ ಹೋಗಲು ಸಾಧ್ಯವಾಗದಿದ್ದರೆ, ಸ್ನಾನದ ನೀರಿಗೆ ಗಂಗಾಜಲವನ್ನು ಸೇರಿಸಿ ಸ್ನಾನ ಮಾಡಿ.
  • ಈ ದಿನ ಸತ್ಯನಾರಾಯಣ ದೇವರನ್ನು ಪೂಜಿಸಲಾಗುತ್ತದೆ. ದೇವರಕೋಣೆಯಲ್ಲಿ ನಾರಾಯಣ ದೇವರ ವಿಗ್ರಹವನ್ನು ಸ್ಥಾಪಿಸಿ ಮತ್ತು ಹೂವುಗಳು, ಹಣ್ಣುಗಳು ಇತ್ಯಾದಿಗಳನ್ನು ಅರ್ಪಿಸಿ.
  • ಸತ್ಯನಾರಾಯಣ ದೇವರ ಕಥೆಯನ್ನು ಹೇಳಿ, ಪ್ರಸಾದವನ್ನು ಅರ್ಪಿಸಿ ಮತ್ತು ಜನರಿಗೆ ಹಂಚಿ.
  • ರಾತ್ರಿ ಚಂದ್ರೋದಯದ ನಂತರ, ಚಂದ್ರನಿಗೆ ಅರ್ಘ್ಯ ಅರ್ಪಿಸಿ ಮತ್ತು ಉಪವಾಸವನ್ನು ಕೊನೆಗೊಳಿಸಿ.
  • ಈ ದಿನದಂದು ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ, ಆದ್ದರಿಂದ ನಿರ್ಗತಿಕರಿಗೆ ದಾನ ಮಾಡಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 6 August 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ