AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶುಕ್ರ ಯೋಗ: ಈ 3 ರಾಶಿಯವರಿಗೆ ಒಲಿಯಲಿದೆ ಲಕ್ಷ್ಮೀ ಕೃಪೆ!

ಸೆಪ್ಟೆಂಬರ್ ಅಂತ್ಯದಲ್ಲಿ ರೂಪುಗೊಳ್ಳುವ ಶುಕ್ರ ಯೋಗವು 3 ರಾಶಿಯವರ ಬಾಳಿನಲ್ಲಿ ಸುವರ್ಣ ಯುಗವನ್ನು ತರಲಿದೆ. ಮಹಾಲಕ್ಷ್ಮಿಯ ವಿಶೇಷ ಕೃಪೆಯಿಂದ ಸಿಂಹ, ಮೀನ, ಧನುಸ್ಸು ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ದೂರವಾಗಿ ಅಪಾರ ಧನಸಂಪತ್ತು ಲಭಿಸಲಿದೆ. ಸಾಲದ ಬಾಧೆಯಿಂದ ಮುಕ್ತಿ, ಆಕಸ್ಮಿಕ ಧನಲಾಭ ಹಾಗೂ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ. ಈ ಶುಭ ಯೋಗವು ನಿಮ್ಮ ಜೀವನದಲ್ಲಿ ಅದೃಷ್ಟ ಮತ್ತು ಪ್ರಗತಿಯನ್ನು ತರಲಿದೆ.

ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶುಕ್ರ ಯೋಗ: ಈ 3 ರಾಶಿಯವರಿಗೆ ಒಲಿಯಲಿದೆ ಲಕ್ಷ್ಮೀ ಕೃಪೆ!
ಶುಕ್ರ ಯೋಗ
ಅಕ್ಷತಾ ವರ್ಕಾಡಿ
|

Updated on: Sep 19, 2026 | 11:18 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸಂಚಾರದಿಂದಾಗಿ ಹಲವಾರು ಶುಭ ಯೋಗಗಳು ರೂಪುಗೊಳ್ಳುತ್ತವೆ. ಅದರಂತೆ ಇದೀಗ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ‘ಶುಕ್ರ ಯೋಗ’ ನಿರ್ಮಾಣವಾಗುತ್ತಿದ್ದು, ಇದರ ಶುಭ ಪ್ರಭಾವದಿಂದ ಮೂರು ರಾಶಿಯವರ ಜೀವನದಲ್ಲಿ ಸುವರ್ಣ ಯುಗ ಆರಂಭವಾಗಲಿದೆ. ಮಹಾಲಕ್ಷ್ಮಿಯ ವಿಶೇಷ ಕೃಪೆಯಿಂದಾಗಿ ಈ ರಾಶಿಯವರು ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ಪಡೆದು, ಅಪಾರ ಧನ-ಸಂಪತ್ತನ್ನು ಗಳಿಸಲಿದ್ದಾರೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬುದರ ವಿವರ ಇಲ್ಲಿದೆ.

ಸಿಂಹ ರಾಶಿಗೆ ಧನ-ಧಾನ್ಯಗಳ ಸುರಿಮಳೆ:

ಸಿಂಹ ರಾಶಿಯವರಿಗೆ ಶುಕ್ರ ಯೋಗವು ಅತ್ಯಂತ ಅದ್ಭುತ ಫಲಗಳನ್ನು ನೀಡಲಿದೆ. ಮಹಾಲಕ್ಷ್ಮಿಯ ಕೃಪಾದೃಷ್ಟಿ ಇವರ ಮೇಲಿರುವುದರಿಂದ ಧನ-ಧಾನ್ಯಕ್ಕೆ ಯಾವುದೇ ಕೊರತೆ ಎದುರಾಗುವುದಿಲ್ಲ. ದೀರ್ಘಕಾಲದ ಆರ್ಥಿಕ ಸಮಸ್ಯೆಗಳು ಬಗೆಹರಿದು, ಕೈತುಂಬಾ ಹಣ ಹರಿದು ಬರಲಿದೆ. ಇನ್ನು ವಿದ್ಯಾರ್ಥಿಗಳಿಗೆ ತಮ್ಮ ಶ್ರಮಕ್ಕೆ ತಕ್ಕಂತೆ ಉತ್ತಮ ಫಲಿತಾಂಶ ಲಭಿಸಲಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಫಲತೆ ಸಿಗಲಿದೆ.

ಮೀನ ರಾಶಿಗೆ ಸಾಲದ ಬಾಧೆಯಿಂದ ಮುಕ್ತಿ:

ಮೀನ ರಾಶಿಯವರಿಗೆ ಈ ಸಮಯವು ಅತ್ಯಂತ ಅನುಕೂಲಕರವಾಗಿದೆ. ಕಳೆದ ಕೆಲವು ದಿನಗಳಿಂದ ತೊಂದರೆ, ಕಷ್ಟಗಳಿಂದ ಬಳಲುತ್ತಿದ್ದವರಿಗೆ ಕೊನೆಗೂ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ಉತ್ತಮ ಪ್ರಗತಿ ಕಂಡುಬರಲಿದ್ದು, ಹಳೆಯ ಸಾಲದ ಬಾಧೆಯಿಂದ ಬಳಲುತ್ತಿದ್ದವರು ಸಾಲಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲಿದ್ದಾರೆ. ವಿದ್ಯಾರ್ಥಿಗಳಿಗೂ ಸಹ ಇದು ಅತ್ಯುತ್ತಮ ಸಮಯವಾಗಿದೆ.

ಇದನ್ನೂ ಓದಿ: ರವಿ ಸಿಂಹ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಧನುಸ್ಸು ರಾಶಿಗೆ ಆಕಸ್ಮಿಕ ಧನಲಾಭ ಹಾಗೂ ಶುಭ ಯೋಗ:

ಧನುಸ್ಸು ರಾಶಿಯವರಿಗೆ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಆದಾಯ ಗಣನೀಯವಾಗಿ ಹೆಚ್ಚಾಗಲಿದೆ. ಆಕಸ್ಮಿಕ ಧನಲಾಭದ ಯೋಗವಿದ್ದು, ಸಮಾಜದಲ್ಲಿ ಗೌರವ ಹಾಗೂ ವಿಶೇಷ ಗುರುತಿಸುವಿಕೆ ಸಿಗಲಿದೆ. ಕೋರ್ಟ್-ಕಚೇರಿ ಅಥವಾ ಕಾನೂನು ವ್ಯವಹಾರಗಳಲ್ಲಿ ನಿರೀಕ್ಷಿತ ಗೆಲುವು ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರಲಿದ್ದು, ಕುಟುಂಬ ಸದಸ್ಯರೊಂದಿಗೆ ತೀರ್ಥಯಾತ್ರೆಗೆ ತೆರಳುವ ಸಾಧ್ಯತೆಯಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Follow Us
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ