AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simha Sankranti 2024 : ಆಗಸ್ಟ್ 16 ರಂದು ಸಿಂಹ ಸಂಕ್ರಾಂತಿ, ಶುಭ ಮುಹೂರ್ತ, ಪೂಜಾ ವಿಧಾನ ಹಾಗೂ ಈ ದಿನದ ಮಹತ್ವವೇನು?

ಆಗಸ್ಟ್ 16 ರಂದು ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದು, ಈ ದಿನದಂದು ಸಿಂಹ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಒಂದು ವರ್ಷದ ನಂತರದಲ್ಲಿ ಸೂರ್ಯನು ತನ್ನ ರಾಶಿಯನ್ನು ಪ್ರವೇಶಿಸುತ್ತಿದ್ದು, ಈ ದಿನದ ಶುಭ ಸಮಯ, ಪೂಜಾ ವಿಧಾನ, ಮಹತ್ವ ಹಾಗೂ ದಾನದ ಬಗೆಗಿನ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

Simha Sankranti 2024 : ಆಗಸ್ಟ್ 16 ರಂದು ಸಿಂಹ ಸಂಕ್ರಾಂತಿ, ಶುಭ ಮುಹೂರ್ತ, ಪೂಜಾ ವಿಧಾನ ಹಾಗೂ ಈ ದಿನದ ಮಹತ್ವವೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 12, 2024 | 3:00 PM

Share

ಪ್ರತಿ ತಿಂಗಳು ಸೂರ್ಯ ತನ್ನ ರಾಶಿಪಥ ಬದಲಾಯಿಸುತ್ತಲೇ ಇರುತ್ತಾನೆ. ಆಗಸ್ಟ್‌ 16 ರಂದು ಸೂರ್ಯ ದೇವನು ಕಟಕ ರಾಶಿಯನ್ನು ತೊರೆದು ತನ್ನ ರಾಶಿಯಾದ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಸಿಂಹ ಸಂಕ್ರಾಂತಿಯೆಂದು ಆಚರಿಸಲಾಗುತ್ತದೆ. ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದಂತೆ ಬುಧಾದಿತ್ಯ ಯೋಗ ಮತ್ತು ತ್ರಿಗ್ರಾಹಿ ಯೋಗವು ಈ ರಾಶಿಯಲ್ಲಿ ರೂಪುಗೊಳ್ಳುತ್ತದೆ. ಈ ವಿಶೇಷ ಸಿಂಹ ಸಂಕ್ರಾಂತಿಯಂದು ಈ ಕೆಲವು ರೀತಿಯ ಆಚರಣೆಯ ಮೂಲಕ ಶುಭ ಫಲಗಳನ್ನು ಪಡೆಯಬಹುದು.

ಸಿಂಹ ಸಂಕ್ರಾಂತಿ ಶುಭ ಮುಹೂರ್ತ

ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುವ ಸಮಯ ಸಂಜೆ 7:53

ಪುಣ್ಯ ಕಾಲ – ಮಧ್ಯಾಹ್ನ 12:13 ರಿಂದ 6:29 ರವರೆಗೆ

ಮಹಾ ಪುಣ್ಯ ಕಾಲ – ಸಂಜೆ 4:24 ರಿಂದ 6:29 ರವರೆಗೆ

ಸಿಂಹ ಸಂಕ್ರಾಂತಿಯ ಪೂಜಾ ವಿಧಾನ ಹೇಗೆ?

ಸಿಂಹ ಸಂಕ್ರಾಂತಿಯಂದು ಪವಿತ್ರ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಅದಲ್ಲದೇ ತಾಮ್ರದ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಮತ್ತು ಅದರಲ್ಲಿ ಕೆಂಪು ಹೂವುಗಳು, ಕೆಂಪು ಶ್ರೀಗಂಧ ಮತ್ತು ಕೆಲವು ಗೋಧಿ ಕಾಳುಗಳನ್ನು ಹಾಕಿ ಸೂರ್ಯನಿಗೆ ಅರ್ಪಿಸಬೇಕು. ಇದರ ನಂತರ, ‘ಓಂ ಆದಿತ್ಯಾಯ ನಮಃ’ ಎಂಬ ಮಂತ್ರವನ್ನು ಪಠಿಸುತ್ತಾ ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ ಮೂರು ಬಾರಿ ಒಂದೇ ಸ್ಥಳದಲ್ಲಿ ಪ್ರದಕ್ಷಿಣೆ ಮಾಡಬೇಕು. ಆ ಬಳಿಕ ವ್ಯಕ್ತಿಯೂ ಬಡವರಿಗೆ ಹಾಗೂ ನಿರ್ಗತಿಕರಿಗೆ ತಾಮ್ರ, ಗೋಧಿ, ಬೆಲ್ಲ, ಎಳ್ಳು ಇತ್ಯಾದಿಗಳನ್ನು ವಸ್ತುಗಳನ್ನು ದಾನ ಮಾಡಿದರೆ ಸೂರ್ಯ ದೇವನ ಅನುಗ್ರಹಕ್ಕೆ ಪಾತ್ರರಾಗುತ್ತಾರೆ.

ಇದನ್ನೂ ಓದಿ: ಶ್ರಾವಣ ಮಾಸದ ಮಹತ್ವ: ಶ್ರಾವಣದಲ್ಲಿ ಪ್ರತಿನಿತ್ಯದ ಪೂಜೆ ಹೀಗಿರಲಿ, ವಿಷಕಂಠನಾದ ಶಿವನ ಮಹಾಮಹಿಮೆ ತಿಳಿಯೋಣ

ಸಿಂಹ ಸಂಕ್ರಾಂತಿಯ ಮಹತ್ವ

ಸಂಕ್ರಾಂತಿ ಹಬ್ಬವು ಸೂರ್ಯ ದೇವರಿಗೆ ಸಂಬಂಧಿಸಿದ್ದಾಗಿದ್ದು, ಅನೇಕರು ದೇವಾಲಯಕ್ಕೆ ಹೋಗಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಸಿಂಹ ಸಂಕ್ರಾಂತಿಯಿಂದ ನಿಜ ಶ್ರಾವಣ ಮಾಸವು ಆರಂಭವಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣು ಮತ್ತು ನರಸಿಂಹ ದೇವರನ್ನು ಶುದ್ಧವಾದ ಮನಸ್ಸಿನಿಂದ ಪೂಜಿಸಿದರೆ ಪಾಪ ಕರ್ಮಗಳಿಂದ ಮುಕ್ತಿ ಸಿಗುತ್ತದೆ. ಅದಲ್ಲದೇ, ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದರಿಂದ ಗಂಭೀರ ರೋಗಗಳು ದೂರವಾಗಿ, ವ್ಯಕ್ತಿಯು ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ. ಈ ದಿನದಂದು ಹಸುವಿನ ತುಪ್ಪವನ್ನು ಸೇವನೆ ಮಾಡುವುದರಿಂದ ರಾಹು-ಕೇತುಗಳಿಂದಾಗುವ ದುಷ್ಪರಿಣಾಮಗಳು ದೂರವಾಗಿ ಬುದ್ಧಿವಂತಿಕೆ ಹಾಗೂ ಶಕ್ತಿಯೂ ಹೆಚ್ಚಾಗುತ್ತದೆ ಎನ್ನಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Mon, 12 August 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!