AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simha Sankranti 2024 : ಆಗಸ್ಟ್ 16 ರಂದು ಸಿಂಹ ಸಂಕ್ರಾಂತಿ, ಶುಭ ಮುಹೂರ್ತ, ಪೂಜಾ ವಿಧಾನ ಹಾಗೂ ಈ ದಿನದ ಮಹತ್ವವೇನು?

ಆಗಸ್ಟ್ 16 ರಂದು ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದು, ಈ ದಿನದಂದು ಸಿಂಹ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಒಂದು ವರ್ಷದ ನಂತರದಲ್ಲಿ ಸೂರ್ಯನು ತನ್ನ ರಾಶಿಯನ್ನು ಪ್ರವೇಶಿಸುತ್ತಿದ್ದು, ಈ ದಿನದ ಶುಭ ಸಮಯ, ಪೂಜಾ ವಿಧಾನ, ಮಹತ್ವ ಹಾಗೂ ದಾನದ ಬಗೆಗಿನ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

Simha Sankranti 2024 : ಆಗಸ್ಟ್ 16 ರಂದು ಸಿಂಹ ಸಂಕ್ರಾಂತಿ, ಶುಭ ಮುಹೂರ್ತ, ಪೂಜಾ ವಿಧಾನ ಹಾಗೂ ಈ ದಿನದ ಮಹತ್ವವೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Aug 12, 2024 | 3:00 PM

Share

ಪ್ರತಿ ತಿಂಗಳು ಸೂರ್ಯ ತನ್ನ ರಾಶಿಪಥ ಬದಲಾಯಿಸುತ್ತಲೇ ಇರುತ್ತಾನೆ. ಆಗಸ್ಟ್‌ 16 ರಂದು ಸೂರ್ಯ ದೇವನು ಕಟಕ ರಾಶಿಯನ್ನು ತೊರೆದು ತನ್ನ ರಾಶಿಯಾದ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಸಿಂಹ ಸಂಕ್ರಾಂತಿಯೆಂದು ಆಚರಿಸಲಾಗುತ್ತದೆ. ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದಂತೆ ಬುಧಾದಿತ್ಯ ಯೋಗ ಮತ್ತು ತ್ರಿಗ್ರಾಹಿ ಯೋಗವು ಈ ರಾಶಿಯಲ್ಲಿ ರೂಪುಗೊಳ್ಳುತ್ತದೆ. ಈ ವಿಶೇಷ ಸಿಂಹ ಸಂಕ್ರಾಂತಿಯಂದು ಈ ಕೆಲವು ರೀತಿಯ ಆಚರಣೆಯ ಮೂಲಕ ಶುಭ ಫಲಗಳನ್ನು ಪಡೆಯಬಹುದು.

ಸಿಂಹ ಸಂಕ್ರಾಂತಿ ಶುಭ ಮುಹೂರ್ತ

ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುವ ಸಮಯ ಸಂಜೆ 7:53

ಪುಣ್ಯ ಕಾಲ – ಮಧ್ಯಾಹ್ನ 12:13 ರಿಂದ 6:29 ರವರೆಗೆ

ಮಹಾ ಪುಣ್ಯ ಕಾಲ – ಸಂಜೆ 4:24 ರಿಂದ 6:29 ರವರೆಗೆ

ಸಿಂಹ ಸಂಕ್ರಾಂತಿಯ ಪೂಜಾ ವಿಧಾನ ಹೇಗೆ?

ಸಿಂಹ ಸಂಕ್ರಾಂತಿಯಂದು ಪವಿತ್ರ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಅದಲ್ಲದೇ ತಾಮ್ರದ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಮತ್ತು ಅದರಲ್ಲಿ ಕೆಂಪು ಹೂವುಗಳು, ಕೆಂಪು ಶ್ರೀಗಂಧ ಮತ್ತು ಕೆಲವು ಗೋಧಿ ಕಾಳುಗಳನ್ನು ಹಾಕಿ ಸೂರ್ಯನಿಗೆ ಅರ್ಪಿಸಬೇಕು. ಇದರ ನಂತರ, ‘ಓಂ ಆದಿತ್ಯಾಯ ನಮಃ’ ಎಂಬ ಮಂತ್ರವನ್ನು ಪಠಿಸುತ್ತಾ ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ ಮೂರು ಬಾರಿ ಒಂದೇ ಸ್ಥಳದಲ್ಲಿ ಪ್ರದಕ್ಷಿಣೆ ಮಾಡಬೇಕು. ಆ ಬಳಿಕ ವ್ಯಕ್ತಿಯೂ ಬಡವರಿಗೆ ಹಾಗೂ ನಿರ್ಗತಿಕರಿಗೆ ತಾಮ್ರ, ಗೋಧಿ, ಬೆಲ್ಲ, ಎಳ್ಳು ಇತ್ಯಾದಿಗಳನ್ನು ವಸ್ತುಗಳನ್ನು ದಾನ ಮಾಡಿದರೆ ಸೂರ್ಯ ದೇವನ ಅನುಗ್ರಹಕ್ಕೆ ಪಾತ್ರರಾಗುತ್ತಾರೆ.

ಇದನ್ನೂ ಓದಿ: ಶ್ರಾವಣ ಮಾಸದ ಮಹತ್ವ: ಶ್ರಾವಣದಲ್ಲಿ ಪ್ರತಿನಿತ್ಯದ ಪೂಜೆ ಹೀಗಿರಲಿ, ವಿಷಕಂಠನಾದ ಶಿವನ ಮಹಾಮಹಿಮೆ ತಿಳಿಯೋಣ

ಸಿಂಹ ಸಂಕ್ರಾಂತಿಯ ಮಹತ್ವ

ಸಂಕ್ರಾಂತಿ ಹಬ್ಬವು ಸೂರ್ಯ ದೇವರಿಗೆ ಸಂಬಂಧಿಸಿದ್ದಾಗಿದ್ದು, ಅನೇಕರು ದೇವಾಲಯಕ್ಕೆ ಹೋಗಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಸಿಂಹ ಸಂಕ್ರಾಂತಿಯಿಂದ ನಿಜ ಶ್ರಾವಣ ಮಾಸವು ಆರಂಭವಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣು ಮತ್ತು ನರಸಿಂಹ ದೇವರನ್ನು ಶುದ್ಧವಾದ ಮನಸ್ಸಿನಿಂದ ಪೂಜಿಸಿದರೆ ಪಾಪ ಕರ್ಮಗಳಿಂದ ಮುಕ್ತಿ ಸಿಗುತ್ತದೆ. ಅದಲ್ಲದೇ, ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದರಿಂದ ಗಂಭೀರ ರೋಗಗಳು ದೂರವಾಗಿ, ವ್ಯಕ್ತಿಯು ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ. ಈ ದಿನದಂದು ಹಸುವಿನ ತುಪ್ಪವನ್ನು ಸೇವನೆ ಮಾಡುವುದರಿಂದ ರಾಹು-ಕೇತುಗಳಿಂದಾಗುವ ದುಷ್ಪರಿಣಾಮಗಳು ದೂರವಾಗಿ ಬುದ್ಧಿವಂತಿಕೆ ಹಾಗೂ ಶಕ್ತಿಯೂ ಹೆಚ್ಚಾಗುತ್ತದೆ ಎನ್ನಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Mon, 12 August 24

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!