AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sita Navami 2025: ದಾಂಪತ್ಯದಲ್ಲಿ ಸಂತೋಷ ಹಾಗೂ ಸಾಮರಸ್ಯಕ್ಕಾಗಿ ಸೀತಾ ನವಮಿಯಂದು ಈ ಪರಿಹಾರ ಮಾಡಿ

ಸೀತಾ ನವಮಿ ಅಥವಾ ಸೀತಾ ಜಯಂತಿಯು ತಾಯಿ ಸೀತೆಯ ಜನ್ಮದಿನವಾಗಿದ್ದು, ವೈಶಾಖ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಮಹಿಳೆಯರು ಈ ದಿನ ಉಪವಾಸ ಮಾಡಿ, ಸುಖಮಯ ದಾಂಪತ್ಯ ಮತ್ತು ಕುಟುಂಬದ ಸಮೃದ್ಧಿಗಾಗಿ ಪ್ರಾರ್ಥಿಸುತ್ತಾರೆ. ಶ್ರೀರಾಮ ಮತ್ತು ಲಕ್ಷ್ಮೀ ದೇವಿಯ ಪೂಜೆ, ಭೂಮಿ ಪೂಜೆ ಮುಂತಾದ ವಿಧಿವಿಧಾನಗಳು ಈ ದಿನದ ಪ್ರಮುಖ ಅಂಶಗಳಾಗಿವೆ.

Sita Navami 2025: ದಾಂಪತ್ಯದಲ್ಲಿ ಸಂತೋಷ ಹಾಗೂ ಸಾಮರಸ್ಯಕ್ಕಾಗಿ ಸೀತಾ ನವಮಿಯಂದು ಈ ಪರಿಹಾರ ಮಾಡಿ
Sita Navami 2025
ಅಕ್ಷತಾ ವರ್ಕಾಡಿ
|

Updated on:Apr 17, 2025 | 11:40 AM

Share

ಸೀತಾ ನವಮಿಯನ್ನು ತಾಯಿ ಸೀತೆಯ ಜನ್ಮ ವಾರ್ಷಿಕೋತ್ಸವವಾಗಿ ಆಚರಿಸಲಾಗುತ್ತದೆ, ಅದಕ್ಕಾಗಿಯೇ ಈ ದಿನವನ್ನು ಸೀತಾ ಜಯಂತಿ ಎಂದು ಕರೆಯಲಾಗುತ್ತದೆ. ಈ ದಿನದಂದು ಮಹಿಳೆಯರು ಉಪವಾಸ ಆಚರಿಸುತ್ತಾರೆ. ಈ ದಿನವನ್ನು ಜಾನಕಿ ನವಮಿ ಎಂದೂ ಕರೆಯುತ್ತಾರೆ. ವೈಶಾಖ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಸೀತಾ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತ ಮಹಿಳೆಯರು ತಮ್ಮ ಗಂಡಂದಿರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ತಾಯಿ ಸೀತಾ ಮಾತೆ ಮಂಗಳವಾರ ಪುಷ್ಯ ನಕ್ಷತ್ರದಲ್ಲಿ ಜನಿಸಿದಳು. ಭಗವಾನ್ ಶ್ರೀರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಜನಿಸಿದನು. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿಯ ಒಂದು ತಿಂಗಳ ನಂತರ ಸೀತಾ ಜಯಂತಿ ಬರುತ್ತದೆ.

ಸೀತಾ ನವಮಿ ಯಾವಾಗ?

ನವಮಿ ತಿಥಿ ಮೇ 05 ರಂದು ಬೆಳಿಗ್ಗೆ 7.35 ಕ್ಕೆ ಪ್ರಾರಂಭವಾಗಿ, ಮೇ 06 ರಂದು ಬೆಳಿಗ್ಗೆ 08.38 ಕ್ಕೆ ಕೊನೆಗೊಳ್ಳುತ್ತದೆ. ಆದ್ದರಿಂದ ಸೀತಾ ನವಮಿಯನ್ನು ಸೋಮವಾರ, 5 ಮೇ 2025, ಸೋಮವಾರದಂದು ಆಚರಿಸಲಾಗುತ್ತದೆ. ಸೀತಾ ನವಮಿಯ ದಿನದಂದು, ಮಹಿಳೆಯರು ಸಂತೋಷದ ದಾಂಪತ್ಯ ಜೀವನಕ್ಕಾಗಿ ಉಪವಾಸ ಮಾಡುತ್ತಾರೆ, ಇದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ.

ಇದನ್ನೂ ಓದಿ: ಪುರಿ ಜಗನ್ನಾಥ ದೇವಸ್ಥಾನದಲ್ಲಿ ಪ್ರತಿದಿನ ಧ್ವಜ ಬದಲಾಯಿಸುವುದೇಕೆ?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಮದುವೆಯಲ್ಲಿನ ಅಡೆತಡೆಗಳನ್ನು ತೆಗೆದುಹಾಕಲು ಸೀತಾ ನವಮಿಯ ದಿನದಂದು ಶ್ರೀರಾಮ ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸಿ. ಹಣ್ಣು, ಹೂವುಗಳು, ಧೂಪ, ದೀಪ, ಸಿಂಧೂರ, ಎಳ್ಳು, ಬಾರ್ಲಿ, ಅಕ್ಷತೆ ಇತ್ಯಾದಿಗಳನ್ನು ಅರ್ಪಿಸಿ . ಅಲ್ಲದೇ, ಈ ವಸ್ತುಗಳಿಂದಲೇ ಆದರೆ ಪ್ರಸಾದ ತಯಾರಿಸಿ.  ಪೂಜೆಯ ಸಮಯದಲ್ಲಿ ಸೀತಾ ಚಾಲೀಸವನ್ನು ಪಠಿಸಿ. ಕೊನೆಯಲ್ಲಿ, ಆರತಿಯನ್ನು ಮಾಡಿ, ಹಾಗೆಯೇ, ಆರತಿ ಮಾಡುವಾಗ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ವಂಶಾಭಿವೃದ್ಧಿಗಾಗಿ ಪ್ರಾರ್ಥಿಸಿ. ಈ ರೀತಿ ಪೂಜೆ ಮಾಡುವುದರಿಂದ ನಿಮ್ಮ ಜೀವನದಲ್ಲಿನ ಕಷ್ಟಗಳಿಗೆ ಪರಿಹಾರ ಸಿಗುತ್ತದೆ. ಸೀತಾ ಮಾತೆಯನ್ನು ಭೂಮಿಜಾ ಎಂದು ಕರೆಯಲಾಗುತ್ತದೆ, ಆದ್ದರಿಂದ ಭೂಮಿ ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ. ಭೂ ತಾಯಿ ಮತ್ತು ಸೀತಾ ಮಾತೆಯನ್ನು ಸ್ತುತಿಸಿ. ಸೀತಾ ಮಾತೆಯನ್ನು ಭೂಮಿಜಾ ಎಂದು ಕರೆಯಲಾಗುತ್ತದೆ, ಆದ್ದರಿಂದ ಭೂಮಿ ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ. ಭೂ ತಾಯಿ ಮತ್ತು ಸೀತಾ ಮಾತೆಯನ್ನು ಸ್ತುತಿಸಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Thu, 17 April 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ