AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sita Navami 2025: ದಾಂಪತ್ಯದಲ್ಲಿ ಸಂತೋಷ ಹಾಗೂ ಸಾಮರಸ್ಯಕ್ಕಾಗಿ ಸೀತಾ ನವಮಿಯಂದು ಈ ಪರಿಹಾರ ಮಾಡಿ

ಸೀತಾ ನವಮಿ ಅಥವಾ ಸೀತಾ ಜಯಂತಿಯು ತಾಯಿ ಸೀತೆಯ ಜನ್ಮದಿನವಾಗಿದ್ದು, ವೈಶಾಖ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಮಹಿಳೆಯರು ಈ ದಿನ ಉಪವಾಸ ಮಾಡಿ, ಸುಖಮಯ ದಾಂಪತ್ಯ ಮತ್ತು ಕುಟುಂಬದ ಸಮೃದ್ಧಿಗಾಗಿ ಪ್ರಾರ್ಥಿಸುತ್ತಾರೆ. ಶ್ರೀರಾಮ ಮತ್ತು ಲಕ್ಷ್ಮೀ ದೇವಿಯ ಪೂಜೆ, ಭೂಮಿ ಪೂಜೆ ಮುಂತಾದ ವಿಧಿವಿಧಾನಗಳು ಈ ದಿನದ ಪ್ರಮುಖ ಅಂಶಗಳಾಗಿವೆ.

Sita Navami 2025: ದಾಂಪತ್ಯದಲ್ಲಿ ಸಂತೋಷ ಹಾಗೂ ಸಾಮರಸ್ಯಕ್ಕಾಗಿ ಸೀತಾ ನವಮಿಯಂದು ಈ ಪರಿಹಾರ ಮಾಡಿ
Sita Navami 2025
ಅಕ್ಷತಾ ವರ್ಕಾಡಿ
|

Updated on:Apr 17, 2025 | 11:40 AM

Share

ಸೀತಾ ನವಮಿಯನ್ನು ತಾಯಿ ಸೀತೆಯ ಜನ್ಮ ವಾರ್ಷಿಕೋತ್ಸವವಾಗಿ ಆಚರಿಸಲಾಗುತ್ತದೆ, ಅದಕ್ಕಾಗಿಯೇ ಈ ದಿನವನ್ನು ಸೀತಾ ಜಯಂತಿ ಎಂದು ಕರೆಯಲಾಗುತ್ತದೆ. ಈ ದಿನದಂದು ಮಹಿಳೆಯರು ಉಪವಾಸ ಆಚರಿಸುತ್ತಾರೆ. ಈ ದಿನವನ್ನು ಜಾನಕಿ ನವಮಿ ಎಂದೂ ಕರೆಯುತ್ತಾರೆ. ವೈಶಾಖ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಸೀತಾ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ವಿವಾಹಿತ ಮಹಿಳೆಯರು ತಮ್ಮ ಗಂಡಂದಿರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ತಾಯಿ ಸೀತಾ ಮಾತೆ ಮಂಗಳವಾರ ಪುಷ್ಯ ನಕ್ಷತ್ರದಲ್ಲಿ ಜನಿಸಿದಳು. ಭಗವಾನ್ ಶ್ರೀರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಜನಿಸಿದನು. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿಯ ಒಂದು ತಿಂಗಳ ನಂತರ ಸೀತಾ ಜಯಂತಿ ಬರುತ್ತದೆ.

ಸೀತಾ ನವಮಿ ಯಾವಾಗ?

ನವಮಿ ತಿಥಿ ಮೇ 05 ರಂದು ಬೆಳಿಗ್ಗೆ 7.35 ಕ್ಕೆ ಪ್ರಾರಂಭವಾಗಿ, ಮೇ 06 ರಂದು ಬೆಳಿಗ್ಗೆ 08.38 ಕ್ಕೆ ಕೊನೆಗೊಳ್ಳುತ್ತದೆ. ಆದ್ದರಿಂದ ಸೀತಾ ನವಮಿಯನ್ನು ಸೋಮವಾರ, 5 ಮೇ 2025, ಸೋಮವಾರದಂದು ಆಚರಿಸಲಾಗುತ್ತದೆ. ಸೀತಾ ನವಮಿಯ ದಿನದಂದು, ಮಹಿಳೆಯರು ಸಂತೋಷದ ದಾಂಪತ್ಯ ಜೀವನಕ್ಕಾಗಿ ಉಪವಾಸ ಮಾಡುತ್ತಾರೆ, ಇದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ.

ಇದನ್ನೂ ಓದಿ: ಪುರಿ ಜಗನ್ನಾಥ ದೇವಸ್ಥಾನದಲ್ಲಿ ಪ್ರತಿದಿನ ಧ್ವಜ ಬದಲಾಯಿಸುವುದೇಕೆ?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಮದುವೆಯಲ್ಲಿನ ಅಡೆತಡೆಗಳನ್ನು ತೆಗೆದುಹಾಕಲು ಸೀತಾ ನವಮಿಯ ದಿನದಂದು ಶ್ರೀರಾಮ ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸಿ. ಹಣ್ಣು, ಹೂವುಗಳು, ಧೂಪ, ದೀಪ, ಸಿಂಧೂರ, ಎಳ್ಳು, ಬಾರ್ಲಿ, ಅಕ್ಷತೆ ಇತ್ಯಾದಿಗಳನ್ನು ಅರ್ಪಿಸಿ . ಅಲ್ಲದೇ, ಈ ವಸ್ತುಗಳಿಂದಲೇ ಆದರೆ ಪ್ರಸಾದ ತಯಾರಿಸಿ.  ಪೂಜೆಯ ಸಮಯದಲ್ಲಿ ಸೀತಾ ಚಾಲೀಸವನ್ನು ಪಠಿಸಿ. ಕೊನೆಯಲ್ಲಿ, ಆರತಿಯನ್ನು ಮಾಡಿ, ಹಾಗೆಯೇ, ಆರತಿ ಮಾಡುವಾಗ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ವಂಶಾಭಿವೃದ್ಧಿಗಾಗಿ ಪ್ರಾರ್ಥಿಸಿ. ಈ ರೀತಿ ಪೂಜೆ ಮಾಡುವುದರಿಂದ ನಿಮ್ಮ ಜೀವನದಲ್ಲಿನ ಕಷ್ಟಗಳಿಗೆ ಪರಿಹಾರ ಸಿಗುತ್ತದೆ. ಸೀತಾ ಮಾತೆಯನ್ನು ಭೂಮಿಜಾ ಎಂದು ಕರೆಯಲಾಗುತ್ತದೆ, ಆದ್ದರಿಂದ ಭೂಮಿ ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ. ಭೂ ತಾಯಿ ಮತ್ತು ಸೀತಾ ಮಾತೆಯನ್ನು ಸ್ತುತಿಸಿ. ಸೀತಾ ಮಾತೆಯನ್ನು ಭೂಮಿಜಾ ಎಂದು ಕರೆಯಲಾಗುತ್ತದೆ, ಆದ್ದರಿಂದ ಭೂಮಿ ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ. ಭೂ ತಾಯಿ ಮತ್ತು ಸೀತಾ ಮಾತೆಯನ್ನು ಸ್ತುತಿಸಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Thu, 17 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ