AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2024: ಏಪ್ರಿಲ್ 8 ಮೊದಲ ಸೂರ್ಯಗ್ರಹಣ; ಈ 4 ರಾಶಿಯವರಿಗೆ ಶುಭ ಫಲ

ಏಪ್ರಿಲ್ 8 ರಂದು ಮೊದಲ ಸೂರ್ಯಗ್ರಹಣದ ಪ್ರಭಾವದಿಂದ ಕೆಲವು ರಾಶಿಯವರಿಗೆ ಶುಭವಾಗಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈ ಸೂರ್ಯಗ್ರಹಣದಿಂದ ಯಾವ್ಯಾವ ರಾಶಿಗಳಿಗೆ ಶುಭವಾಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

Solar Eclipse 2024: ಏಪ್ರಿಲ್ 8 ಮೊದಲ ಸೂರ್ಯಗ್ರಹಣ; ಈ 4 ರಾಶಿಯವರಿಗೆ ಶುಭ ಫಲ
Solar Eclipse 2024Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Mar 31, 2024 | 10:46 AM

ಈ ವರ್ಷದ ಮೊದಲ ಚಂದ್ರಗ್ರಹಣ ಈಗಾಗಲೇ ಸಂಭವಿಸಿದ್ದು, ಏಪ್ರಿಲ್ 8 ರಂದು ಮೊದಲ ಸೂರ್ಯಗ್ರಹಣ(Solar Eclipse) ಸಂಭವಿಸಲಿದೆ. ಆದರೆ ಈ ಸೂರ್ಯಗ್ರಹಣ ಕೂಡ ಭಾರತದಲ್ಲಿ ಗೋಚರಿಸುವುದಿಲ್ಲ. ಸೂರ್ಯ ಮತ್ತು ಚಂದ್ರ ಗ್ರಹಣಗಳಿಂದಾಗಿ ಮಾನವನ ಜೀವನದಲ್ಲಿ ಶುಭ ಮತ್ತು ಅಶುಭಗಳು ಸಂಭವಿಸುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಈ ಹಿನ್ನಲೆಯಲ್ಲಿ ಏಪ್ರಿಲ್ 8 ರಂದು ಮೊದಲ ಸೂರ್ಯಗ್ರಹಣದ ಪ್ರಭಾವದಿಂದ ಕೆಲವು ರಾಶಿಯವರಿಗೆ ಶುಭವಾಗಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈ ಸೂರ್ಯಗ್ರಹಣದಿಂದ ಯಾವ್ಯಾವ ರಾಶಿಗಳಿಗೆ ಶುಭವಾಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ವೃಷಭ:

ಸೂರ್ಯಗ್ರಹಣವು ವೃಷಭ ರಾಶಿಯವರಿಗೆ ಉತ್ತಮ ಶುಭ ಫಲಿತಾಂಶಗಳನ್ನು ತರುತ್ತದೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಶುಭ ಸುದ್ದಿ ಕೇಳುವಿರಿ. ನಿಮಗೆ ಉತ್ತಮ ಉದ್ಯೋಗಾವಕಾಶ ದೊರೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅವಧಿ ಕೂಡಿ ಬರುತ್ತದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಳೆಯುವಿರಿ. ವಾಹನ ಖರೀದಿ ಪ್ರಯತ್ನ ಫಲ ನೀಡಲಿದೆ.

ಮಿಥುನ:

ಈ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಅನೇಕ ರೀತಿಯಲ್ಲಿ ಪ್ರಯೋಜನಗಳನ್ನು ಪಡೆಯಲಾಗುತ್ತದೆ. ಆದಾಯ ಹಲವು ರೀತಿಯಲ್ಲಿ ಬರುತ್ತದೆ. ಉದ್ಯೋಗಿಗಳು ಸಂತಸದ ಸುದ್ದಿಯನ್ನು ಕೇಳುವರು. ಇದ್ದಕ್ಕಿದ್ದಂತೆ ಹಣ ಕೂಡಿ ಬರಲಿದೆ. ಪೋಷಕರಿಂದ ಆಸ್ತಿ ಪಿತ್ರಾರ್ಜಿತವಾಗಿ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಣ್ಣಿನ ಸೆಳೆತ ಏನನ್ನು ಸೂಚಿಸುತ್ತದೆ? ಇದರ ಹಿಂದಿರುವ ಮೂಢನಂಬಿಕೆ ನಿಜವೇ?

ಸಿಂಹ:

ಸಿಂಹ ರಾಶಿಯವರಿಗೆ ಈ ಸೂರ್ಯಗ್ರಹಣವು ಶುಭವನ್ನು ತರುತ್ತದೆ. ಉದ್ಯೋಗ ಮತ್ತು ವ್ಯಾಪಾರಸ್ಥರು ಎಲ್ಲಾ ರೀತಿಯಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಪಾಲಕರು ತಮ್ಮ ಮಕ್ಕಳ ಬಗ್ಗೆ ಸಂತಸದ ಸುದ್ದಿ ಕೇಳುವರು. ಆಧ್ಯಾತ್ಮಿಕ ಪ್ರಯಾಣ ಸಾಧ್ಯ. ಉದ್ಯೋಗಿಗಳಿಗೆ ಸಹೋದ್ಯೋಗಿಗಳ ಸಹಾಯದಿಂದ ಬಡ್ತಿ ಪಡೆಯುವ ಅವಕಾಶವಿದೆ.

ಕನ್ಯಾ:

ಸೂರ್ಯಗ್ರಹಣವು ಕನ್ಯಾ ರಾಶಿಯವರಿಗೆ ಅನಿರೀಕ್ಷಿತ ಪ್ರಯೋಜನಗಳನ್ನು ನೀಡುತ್ತದೆ. ಉದ್ಯೋಗಿಗಳು ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತಾರೆ ಮತ್ತು ತಮ್ಮ ವೃತ್ತಿಜೀವನದಲ್ಲಿ ಒಂದು ಹೆಜ್ಜೆ ಮುಂದಿಡುತ್ತಾರೆ. ಆರ್ಥಿಕ ಲಾಭ ದೊರೆಯಲಿದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಮನಸ್ಸು ಶಾಂತವಾಗಿರುತ್ತದೆ. ಉದ್ಯೋಗಿಗಳಿಗೆ ಎಲ್ಲಾ ಮಾರ್ಗಗಳು ಅನುಕೂಲಕರವಾಗಿವೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:46 am, Sun, 31 March 24

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!