Sign In

By signing in or creating an account, you agree with Associated Broadcasting Company's Terms & Conditions and Privacy Policy.

Soma Pradosh 2022: ಪಾಪಗಳಿಂದ ಮುಕ್ತಿ ಪಡೆಯಲು ಪ್ರದೋಷ ಉಪವಾಸ ಮಾಡಬೇಕು

ಪ್ರದೋಷ ದಿನದಂದು ಉಪವಾಸವಿದ್ದು, ಶಿವ ಪೂಜೆಯನ್ನು ಮಾಡಿದರೆ ಒಳ್ಳೆಯದು. ಪ್ರದೋಷ ಕಾಲದಲ್ಲಿ (ಸೂರ್ಯ ಮುಳುಗುವ ಹೊತ್ತಿನಲ್ಲಿ) ಪೂಜೆ ಮಾಡಿದರೆ ಎಲ್ಲಾ ದೇವರ ಅನುಗ್ರಹವನ್ನು ಗಳಿಸಬಹುದು. ಸೋಮವಾರ ಬರುವ ಪ್ರದೋಷ ಸೋಮ ಪ್ರದೋಷ ಎಂದು ಹೆಸರಾಗಿದೆ

Soma Pradosh 2022: ಪಾಪಗಳಿಂದ ಮುಕ್ತಿ ಪಡೆಯಲು ಪ್ರದೋಷ ಉಪವಾಸ ಮಾಡಬೇಕು
ಭಗವಾನ್ ಶಿವ
Follow us
TV9 Web
| Updated By: ಆಯೇಷಾ ಬಾನು

Updated on:Feb 28, 2022 | 6:58 AM

ಪ್ರತಿ ತಿಂಗಳು ಎರಡು ಪ್ರದೋಷ(Pradosh) ವ್ರತಗಳನ್ನು ಆಚರಿಸಲಾಗುತ್ತೆ. ನಾಳೆ (ಫೆ.28) ಫೆಬ್ರವರಿ ತಿಂಗಳ ಕೊನೆಯ ಪ್ರದೋಷ ದಿನವಾಗಿದೆ. ಪ್ರದೋಷದ ದಿನ ಸೋಮವಾರದಂದು ಬಂದಾಗ ಅದನ್ನು ಸೋಮ ಪ್ರದೋಷ(Soma Pradosh) ಎಂದು ಕರೆಯಲಾಗುತ್ತದೆ. ಅಮೃತಕ್ಕಾಗಿ ದೇವ ದಾನವರು ಕ್ಷೀರ ಸಾಗರವನ್ನು ಕಡೆಯುವಾಗ ಹಾಲಾಹಲ ವಿಷವು ಉಕ್ಕಿ ಬಂದಿತು. ಆಗ ಧ್ಯಾನಾವಸ್ಥೆಯಲ್ಲಿದ್ದ ಶಿವನು ಲೋಕವನ್ನು ವಿಷದಿಂದ ಕಾಪಾಡಲು ಎಚ್ಚರಗೊಂಡನು. ಆ ಎಚ್ಚರಗೊಂಡ ಕಾಲವೇ ಪ್ರದೋಷ ಕಾಲ. ಸಂಜೆ ನಾಲ್ಕು ಮೂವತ್ತರಿಂದ ಆರೂವರೆಯವರೆಗೆ ಈ ಕಾಲ ಇರುತ್ತದೆ. ಸಾಮಾನ್ಯವಾಗಿ ಧ್ಯಾನದಿಂದ ಶಿವ ಎಚ್ಚರಗೊಂಡಾಗ ಕೋಪಗೊಳ್ಳುವುದು ಸಹಜ.

ಆದರೆ ಲೋಕ ಕಲ್ಯಾಣಕ್ಕಾಗಿ ಎಚ್ಚರಗೊಂಡ ಶಿವನು ಹಾಲಾಹಲವನ್ನು ಕುಡಿಯಲು ಸಂತೋಷದಿಂದ ಆಗಮಿಸುತ್ತಾನೆ. ಬರುವ ದಾರಿಯಲ್ಲಿ ನಂದಿಯ ಮೇಲೆ “ಆನಂದ ತಾಂಡವ” (ಸಂತೋಷಕ್ಕಾಗಿ ನೃತ್ಯ ಮಾಡುವ ವಿಧಾನ. ರುದ್ರ ತಾಂಡವ ಎಂದರೆ ಪ್ರಪಂಚದ ಪ್ರಳಯಕ್ಕಾಗಿ ಮಾಡುವ ವಿಧಾನ) ಮಾಡಿಕೊಂಡು ಸ್ವಯಂ ಸಂತೋಷದಿಂದ ಆಗಮಿಸಿದ ಶಿವ ಹಾಲಾಹಲವನ್ನು ಕುಡಿದು ಮೂರ್ಛೆ ತಪ್ಪುತ್ತಾನೆ. ಆಗ ಬ್ರಹ್ಮ ದೇವನು ಗಂಗೆಯನ್ನು ಕರೆದು ಶಿವನ ದೇಹಕ್ಕೆ ನೀರಿನಿಂದ ಜಳಕ ಮಾಡಿಸುತ್ತಾನೆ. ಇದನ್ನೇ ರುದ್ರಾಭೀಷೇಕ ಎಂಬ ಹೆಸರಿನಿಂದ ಈಗ ಕರೆಯುತ್ತಾರೆ. ಅಂದಿನಿಂದ ಪ್ರತಿ ಹದಿನೈದು ದಿನಗಳಿಗೊಮ್ಮೆ ಬರುವ ತ್ರಯೋದಶಿಯಂದು ಸಾಕ್ಷಾತ್ ದೇವತೆಗಳೇ ಪ್ರದೋಷ ಪೂಜೆಯನ್ನು ಮಾಡುತ್ತಾ ಬಂದರು.

ಪ್ರದೋಷ ದಿನದಂದು ಉಪವಾಸವಿದ್ದು, ಶಿವ ಪೂಜೆಯನ್ನು ಮಾಡಿದರೆ ಒಳ್ಳೆಯದು. ಪ್ರದೋಷ ಕಾಲದಲ್ಲಿ (ಸೂರ್ಯ ಮುಳುಗುವ ಹೊತ್ತಿನಲ್ಲಿ) ಪೂಜೆ ಮಾಡಿದರೆ ಎಲ್ಲಾ ದೇವರ ಅನುಗ್ರಹವನ್ನು ಗಳಿಸಬಹುದು. ಸೋಮವಾರ ಬರುವ ಪ್ರದೋಷ ಸೋಮ ಪ್ರದೋಷ ಎಂದು ಹೆಸರಾಗಿದೆ. ಶನಿವಾರ ಬರುವ ಪ್ರದೋಷವನ್ನು ಶನಿ ಪ್ರದೋಷ ಎಂದು ಕರೆಯುತ್ತಾರೆ. ಈ ಮೊದಲೇ ತಿಳಿಸಿದಂತೆ, ಈಶ್ವರ ಹಾಲಾಹಲ ಕುಡಿದದ್ದು, ಶನಿವಾರವಾದ್ದರಿಂದ “ಶನಿ ಪ್ರದೋಷ” ತುಂಬಾ ಒಳ್ಳೆಯದಾಗಿರುತ್ತದೆ.

ಒಂದು ಶನಿ ಪ್ರದೋಷ ಮಾಡಿದರೆ ಐದು ವರ್ಷ ಪ್ರತಿದಿನ “ಶಿವನ ದೇವಾಲಯಕ್ಕೆ” ಹೋಗಿ ಪೂಜೆ ಮಾಡಿದ ಫಲ ದೊರೆಯುತ್ತದೆ. ಶನಿವಾರ ಪ್ರದೋಷ ಪೂಜೆ ಮಾಡಿದರೆ, ಪದವಿಯಲ್ಲಿ ಉನ್ನತಿ, ಕಳೆದು ಹೋದ ಸಂಪತ್ತು ಮತ್ತೆ ದೊರೆಯುತ್ತದೆ. ಸಾಡೆ ಸಾತಿಯ ಪ್ರಭಾವ ಸಹ ಕಡಿಮೆಯಾಗಬಹುದು / ಹೊರಟು ಹೋಗಬಹುದು. ಈಶ್ವರ ಮತ್ತು ಶನಿ ಇಬ್ಬರೂ ಈ ಪೂಜೆ ಮಾಡುವವರನ್ನು ಆಶೀರ್ವದಿಸುತ್ತಾರೆ. ಅದೇ ಸೋಮವಾರವನ್ನು ಶಿವನಿಗೆ ಅರ್ಪಿಸಲಾಗಿದೆ. ಇದೇ ದಿನ ಪ್ರದೋಷ ಬಂದರೆ ಶಿವನಿಗೆ ವಿಶೇಷ ಪೂಜೆ ಮಾಡಲಾಗುತ್ತೆ.

ಪ್ರದೋಷ ವ್ರತ ಶುಭ ಮುಹೂರ್ತ ತ್ರಯೋದಶಿ ತಿಥಿ ಪ್ರಾರಂಭ – ಫೆಬ್ರವರಿ 28, 2022ರ ಬೆಳಗ್ಗೆ 05:42ಕ್ಕೆ ತ್ರಯೋದಶಿ ತಿಥಿ ಕೊನೆಗೊಳ್ಳುವುದು – ಮಾರ್ಚ್ 01, 2022ರ ಬೆಳಗ್ಗೆ 03:16

ಪ್ರದೋಷ ದಿನದಂದು ಮಾಡಬಹುದಾದ ಪೂಜೆಗಳು -ಶಿವ ಅಷ್ಟೋತ್ತರದ ಸಮೇತ ಅರ್ಚನೆ -ಹಾಲಿನ ಅಭಿಷೇಕ -ಮಹಾಮೃತ್ಯುಂಜಯ ಮಂತ್ರ ನೂರ ಎಂಟು ಬಾರಿ. -ಶಿವನ ದೇವಾಲಯದಲ್ಲಿ ದೀಪ ಹಚ್ಚುವಿಕೆ.

ಪ್ರದೋಷ ಅಭಿಷೇಕದ ವಸ್ತುಗಳು ಮತ್ತು ಅದರ ಫಲಗಳು -ಪಂಚಗವ್ಯ – ಎಲ್ಲಾ ಪಾಪಗಳಿಂದ ಮುಕ್ತಿ. -ಪಂಚಾಮೃತ – ಸಂಪತ್ತನ್ನು ನೀಡುತ್ತದೆ. -ತುಪ್ಪ – ಮೋಕ್ಷವನ್ನು ನೀಡುತ್ತದೆ. -ಹಾಲು – ದೀರ್ಘಾಯುಷ್ಯ. -ಮೊಸರು – ಮಕ್ಕಳ ಭಾಗ್ಯ. -ಜೇನು ತುಪ್ಪ – ಉತ್ತಮ ಧ್ವನಿ. -ಅಕ್ಕಿ ಪುಡಿ – ಸಾಲಗಳಿಂದ ಮುಕ್ತಿ. -ಕಬ್ಬಿನ ರಸ – ಆರೋಗ್ಯ ಭಾಗ್ಯ, ಶತ್ರು ನಾಶ. -ನಿಂಬೆ ರಸ – ಸಾವಿನ ಭಯದಿಂದ ದೂರ ಮಾಡುತ್ತದೆ. -ಎಳೆನೀರು – ಸಂತೋಷ ಮತ್ತು ಜೀವನ ಆನಂದ. -ಬೇಯಿಸಿದ ಅನ್ನ – ಜೀವನವನ್ನು ಅದ್ಭುತ ಗೊಳಿಸುತ್ತದೆ. -ಗಂಧ (ಗಂಧದ ಪೇಸ್ಟ್) – ಲಕ್ಷ್ಮಿ ಕಟಾಕ್ಷ. -ಸಕ್ಕರೆ – ಶತ್ರು ನಾಶ.

ಇದನ್ನೂ ಓದಿ: Shani Trayodashi 2022: ಪ್ರದೋಷ ವ್ರತ ಪಾಲಿಸಿದ ಬಡ ಬ್ರಾಹ್ಮಣ ಮಹಿಳೆಯ ಬಾಳು ಬೆಳಗಿಸಿದ ಭಗವಾನ್ ಶಿವ

Published On - 6:45 am, Mon, 28 February 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್