AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಉಪ್ಪು ಚೆಲ್ಲುವುದು ಅಶುಭವೇ? ವಾಸ್ತು ನಂಬಿಕೆ ಮತ್ತು ವಾಸ್ತವದ ಸ್ಪಷ್ಟ ವಿಶ್ಲೇಷಣೆ!

ಭಾರತೀಯ ಸಾಂಪ್ರದಾಯಿಕ ಅಡುಗೆಮನೆಯಲ್ಲಿ ಉಪ್ಪು ಕೇವಲ ರುಚಿಗಷ್ಟೇ ಅಲ್ಲ, ಸಾಂಸ್ಕೃತಿಕ ಮಹತ್ವವನ್ನೂ ಹೊಂದಿದೆ. ಉಪ್ಪು ನೆಲಕ್ಕೆ ಚೆಲ್ಲಿದರೆ ಅಶುಭವೆಂಬುದು ಜನಪ್ರಿಯ ನಂಬಿಕೆ. ಇದು ವಾಸ್ತು, ಜಾನಪದ ಹಾಗೂ ಹಿಂದಿನ ಉಪ್ಪಿನ ಮೌಲ್ಯದಿಂದ ಬಂದಿದೆ. ಆದರೆ, ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಕೇವಲ ಮಾನವ ನಿರ್ಮಿತ ನಂಬಿಕೆಯಾಗಿದ್ದು, ನೈರ್ಮಲ್ಯಕ್ಕೆ ಆದ್ಯತೆ ನೀಡುವುದು ಮುಖ್ಯ.

ಮನೆಯಲ್ಲಿ ಉಪ್ಪು ಚೆಲ್ಲುವುದು ಅಶುಭವೇ? ವಾಸ್ತು ನಂಬಿಕೆ ಮತ್ತು ವಾಸ್ತವದ ಸ್ಪಷ್ಟ ವಿಶ್ಲೇಷಣೆ!
ಉಪ್ಪು
ಅಕ್ಷತಾ ವರ್ಕಾಡಿ
|

Updated on: Sep 19, 2026 | 7:50 AM

Share

ಭಾರತೀಯ ಸಾಂಪ್ರದಾಯಿಕ ಅಡುಗೆಮನೆಯಲ್ಲಿ ಉಪ್ಪು ಕೇವಲ ರುಚಿಗೆ ಮಾತ್ರವಲ್ಲದೆ ಸಾಂಸ್ಕೃತಿಕವಾಗಿಯೂ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಕೈಯಿಂದ ಉಪ್ಪು ನೆಲಕ್ಕೆ ಬಿದ್ದರೆ ಅದನ್ನು ಅಶುಭ ಚಿಹ್ನೆ ಎಂದು ಪರಿಗಣಿಸುವ ಜನಪ್ರಿಯ ನಂಬಿಕೆ ನಮ್ಮ ಸಮಾಜದಲ್ಲಿ ಆಳವಾಗಿ ಬೇರೂರಿದೆ. ವಾಸ್ತು ಹಾಗೂ ಜಾನಪದ ನಂಬಿಕೆಗಳ ಪ್ರಕಾರ, ಉಪ್ಪು ಇದ್ದಕ್ಕಿದ್ದಂತೆ ಅಥವಾ ಪದೇ ಪದೇ ನೆಲಕ್ಕೆ ಬಿದ್ದರೆ ಮನೆಯಲ್ಲಿ ಮನಸ್ತಾಪಗಳು, ಕೌಟುಂಬಿಕ ಭಿನ್ನಾಭಿಪ್ರಾಯಗಳು ಹಾಗೂ ಮಾನಸಿಕ ಒತ್ತಡ ಹೆಚ್ಚಾಗುತ್ತದೆ ಎಂದು ಭಾವಿಸಲಾಗುತ್ತದೆ.

ವಾಸ್ತು ಶಾಸ್ತ್ರದಲ್ಲಿ ಉಪ್ಪಿಗೆ ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವ ಗುಣವಿದೆ ಎಂದು ನಂಬಲಾಗಿದೆ. ಹೀಗಾಗಿ ಅನೇಕರು ಗಾಜಿನ ಪಾತ್ರೆಯಲ್ಲಿ ಉಪ್ಪನ್ನಿಡುವುದು ಅಥವಾ ಮನೆ ಒರೆಸುವ ನೀರಿಗೆ ಉಪ್ಪು ಹಾಕಿ ಸ್ವಚ್ಛಗೊಳಿಸುವ ಅಭ್ಯಾಸವಿಟ್ಟುಕೊಂಡಿದ್ದಾರೆ. ಪ್ರಾಚೀನ ಕಾಲದಲ್ಲಿ ಉಪ್ಪು ಇಂದಿನಂತೆ ಸುಲಭವಾಗಿ ಮತ್ತು ಅಗ್ಗವಾಗಿ ಸಿಗುತ್ತಿರಲಿಲ್ಲ. ಅದಕ್ಕೊಂದು ನಿರ್ದಿಷ್ಟ ಮೌಲ್ಯವಿತ್ತು. ಹೀಗಾಗಿ ಉಪ್ಪನ್ನು ವ್ಯರ್ಥ ಮಾಡಬಾರದು ಎಂಬ ಉದ್ದೇಶದಿಂದ ಹಿರಿಯರು ಜಾಗರೂಕತೆಗಾಗಿ ಜಾಗೃತಿ ಮೂಡಿಸುತ್ತಿದ್ದರು. ಕಾಲಕ್ರಮೇಣ ಈ ಅಭ್ಯಾಸವೇ ಅಶುಭ ನಂಬಿಕೆಯಾಗಿ ಮಾರ್ಪಟ್ಟಿತು.

ಇದನ್ನೂ ಓದಿ: ಜಪಾನ್‌ನಲ್ಲಿದೆ ‘ಡಿವೋರ್ಸ್ ಟೆಂಪಲ್’: ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಆಸರೆಯಾಗುವ 700 ವರ್ಷ ಹಳೆಯ ಕ್ಷೇತ್ರ!

ವೈಜ್ಞಾನಿಕ ದೃಷ್ಟಿಕೋನ:

ಉಪ್ಪು ಚೆಲ್ಲುವುದಕ್ಕೂ ಮನೆಯಲ್ಲಿ ಅಶಾಂತಿ ಉಂಟಾಗುವುದಕ್ಕೂ ಯಾವುದೇ ವೈಜ್ಞಾನಿಕ ಆಧಾರ ಅಥವಾ ಸಾಕ್ಷ್ಯಾಧಾರಗಳಿಲ್ಲ. ಇದು ಕೇವಲ ಮಾನವ ನಿರ್ಮಿತ ಸಾಂಸ್ಕೃತಿಕ ಹಾಗೂ ಜಾನಪದ ನಂಬಿಕೆಯಷ್ಟೇ. ತವಕ ಅಥವಾ ಭಯಕ್ಕೆ ಒಳಗಾಗುವ ಬದಲು, ಚೆಲ್ಲಿದ ಉಪ್ಪನ್ನು ತಕ್ಷಣವೇ ಸ್ವಚ್ಛಗೊಳಿಸಿ ಮನೆಯ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದೇ ಸರಿಯಾದ ಕ್ರಮವಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ