AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ದೀಪ ಹಚ್ಚುವ ಮೊದಲು ಈ ವಿಷಯ ತಿಳಿದುಕೊಳ್ಳಿ

ಬೆಳಗ್ಗೆ ಹಾಗೂ ಸಂಧ್ಯಾಕಾಲದಲ್ಲಿ ಮನೆಯಲ್ಲಿ ದೀಪ ಹಚ್ಚುವುದು ತುಂಬಾ ಒಳ್ಳೆಯದು. ಅವರವರ ಅನುಕೂಲಕ್ಕೆ ತಕ್ಕಂತೆ ಬೆಳ್ಳಿ,ಹಿತ್ತಾಳೆ ಹಾಗೂ ಮಣ್ಣಿನ ದೀಪ ಬಳಸಲಾಗುತ್ತದೆ. ದೀಪ ಹಚ್ಚುವಾದ ಅದಕ್ಕೆ ಎಣ್ಣೆ ಅಥವಾ ತುಪ್ಪ ಹಾಕಲಾಗುತ್ತದೆ. ಆದರೆ ದೇವರಿಗೆ ಯಾವ ದೀಪ ಶ್ರೇಷ್ಠ? ಇದರ ಮಹತ್ವವೇನು? ಎಂಬುದರ ಕುರಿತು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

ದೇವರಿಗೆ ದೀಪ ಹಚ್ಚುವ ಮೊದಲು ಈ ವಿಷಯ ತಿಳಿದುಕೊಳ್ಳಿ
Oil Vs Ghee Lamps In Hindu CultureImage Credit source: Pinterest
ಅಕ್ಷತಾ ವರ್ಕಾಡಿ
|

Updated on:Mar 07, 2025 | 7:58 AM

Share

ದೀಪಜ್ಯೋತಿಃ ಪರಬ್ರಹ್ಮ ದೀಪ ಜ್ಯೋತಿ ಜನಾರ್ಧನಃ | ದೀಪೋ ಹರತು ಮೇ ಪಾಪಂ ಸಂಧ್ಯಾದೀಪಾ ನಮೋಸ್ತುತೇ || ಬೆಳಗ್ಗೆ ಹಾಗೂ ಸಂಧ್ಯಾಕಾಲದಲ್ಲಿ ಮನೆಯಲ್ಲಿ ದೀಪ ಹಚ್ಚುವುದು ಹಿಂದೂ ಸಂಸ್ಕೃತಿಯ ಒಂದು ಭಾಗ. ಮನೆಯ ದೇವರ ಕೋಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ ಅಥವಾ ವಿವಿಧ ರೀತಿಯ ಎಣ್ಣೆ ಹಾಕಿ ದೀಪ ಹಚ್ಚುತ್ತಾರೆ. ಪ್ರತಿಯೊಂದಕ್ಕೂ ಅದರದ್ದೇ ಆದ ಮಹತ್ವವಿದೆ. ಆದರೆ ಮಣ್ಣಿನ ದೀಪ ಹಚ್ಚುವುದು ತುಂಬಾ ಶ್ರೇಷ್ಠ ಎಂದು ನಂಬಲಾಗಿದೆ. ಅದರಂತೆ ದೀಪ ಹಚ್ಚುವಾದ ಅದಕ್ಕೆ ಎಣ್ಣೆ ಅಥವಾ ತುಪ್ಪ ಹಾಕಲಾಗುತ್ತದೆ. ಆದರೆ ದೇವರಿಗೆ ಯಾವ ದೀಪ ಶ್ರೇಷ್ಠ? ಇದರ ಮಹತ್ವವೇನು? ಎಂಬುದರ ಕುರಿತು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

ಎಣ್ಣೆಯ ದೀಪ ಹಚ್ಚುವುದು:

ಬೆಳಗ್ಗೆ ಹಾಗೂ ಸಂಧ್ಯಾಕಾಲದಲ್ಲಿ ಮನೆಯಲ್ಲಿ ದೀಪ ಹಚ್ಚುವುದು ತುಂಬಾ ಒಳ್ಳೆಯದು. ಅವರವರ ಅನುಕೂಲಕ್ಕೆ ತಕ್ಕಂತೆ ಚಿನ್ನ, ಬೆಳ್ಳಿ,ಹಿತ್ತಾಳೆ ಹಾಗೂ ಮಣ್ಣಿನ ದೀಪ ಬಳಸಲಾಗುತ್ತದೆ. ನೀವು ಪ್ರತಿದಿನ ತುಪ್ಪದ ದೀಪವೇ ಹಚ್ಚಬೇಕಿಲ್ಲ. ಎಣ್ಣೆಯ ದೀಪದಿಂದಲೂ ಸಾಕಷ್ಟು ಪ್ರಯೋಜನಗಳಿವೆ. ಎಣ್ಣೆ ದೀಪಗಳು ದೀರ್ಘಕಾಲ ಉರಿಯುತ್ತವೆ ಮತ್ತು ಅವುಗಳ ಆಕರ್ಷಣ ಶಕ್ತಿಯು ಮನೆಯ ಸುತ್ತಮುತ್ತಲೂ ಹರಡುತ್ತದೆ. ಇದರಿಂದ ಮನೆಯಲ್ಲಿ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿ ಹೆಚ್ಚುತ್ತದೆ ಎಂದು ಬಸವರಾಜ ಗುರೂಜಿ ಹೇಳುತ್ತಾರೆ.

ಇದನ್ನೂ ಓದಿ: ಶಾಸ್ತ್ರದ ಪ್ರಕಾರ, ಯಾವ ದಿನ ಕೂದಲು ಕತ್ತರಿಸುವುದು ಶುಭ?

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ತುಪ್ಪದ ದೀಪ ಹಚ್ಚುವುದು:

ವಾರಕ್ಕೆ ಒಮ್ಮೆಯಾದರೂ ತುಪ್ಪದ ದೀಪ ಹಚ್ಚುವುದು ತುಂಬಾ ಒಳ್ಳೆಯದು. ಎಣ್ಣೆ ಮತ್ತು ತುಪ್ಪದ ದೀಪಕ್ಕೆ ಹೋಲಿಸಿದರೆ ಸ್ವಲ್ಪ ಸರ್ವ ಶ್ರೇಷ್ಠತೆ ಇರುವುದು ತುಪ್ಪದ ದೀಪದಲ್ಲಿ ಎಂದು ಗುರೂಜಿ ಹೇಳುತ್ತಾರೆ. ತುಪ್ಪದ ದೀಪಗಳು ಕಡಿಮೆ ಕಾಲ ಉರಿಯುತ್ತವೆ ಆದರೆ ಅವುಗಳ ಆಧ್ಯಾತ್ಮಿಕ ಪರಿಣಾಮಗಳು ಹೆಚ್ಚು. ತುಪ್ಪದ ದೀಪವು ಋಣಾತ್ಮಕ ಶಕ್ತಿಗಳನ್ನು ದೂರವಿಡುತ್ತದೆ ಮತ್ತು ಮನಸ್ಸಿನ ಶುದ್ಧತೆಯನ್ನು ಕಾಪಾಡುತ್ತದೆ ಎಂದು ನಂಬಲಾಗಿದೆ. ಸೂತಕ ಮತ್ತು ಗ್ರಹಣದ ಸಮಯದಲ್ಲಿ ತುಪ್ಪದ ದೀಪವನ್ನು ಹಚ್ಚುವುದು ವಿಶೇಷ ಮಹತ್ವವನ್ನು ಹೊಂದಿದೆ. ತುಪ್ಪದ ದೀಪ ಕಡಿಮೆ ಅವಧಿಯಲ್ಲಿ ಸಕಲ ವಿಧವಾದ ಸಾತ್ವಿಕ ಶಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಆದ್ದರಿಂದ ಪ್ರತಿದಿನ ತುಪ್ಪದ ದೀಪ ಹಚ್ಚಲು ಸಾಧ್ಯವಾಗದಿದ್ದರೆ ವಾರಕ್ಕೆ ಒಮ್ಮೆಯಾದರೂ ಮನೆಯಲ್ಲಿ ತುಪ್ಪದ ದೀಪ ಹಚ್ಚಿ ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Fri, 7 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್