AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?

ವೈವಾಹಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ತಾಳ್ಮೆಗೆಡದೆ ನಿವಾರಿಸಿ ಕೊಂಡು ಪರಸ್ಪರ ಆಕರ್ಷಣೆಯಿಂದ ಶುದ್ಧ ಮನಸ್ಸಿನ ಉತ್ತಮ ವೈವಾಹಿಕ ಜೀವನ ನಡೆಸಬೇಕು ಎನ್ನುವ ಸಂಕೇತವೆ ಈ ಸೇರು ಒದೆಯಿಸುವುದು ಹಾಗೂ ಮನೆ ತುಂಬಿಸಿಕೊಳ್ಳುವುದರ ಹಿಂದಿನ ಸದುದ್ದೇಶವಾಗಿದೆ

ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?
ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?
TV9 Web
| Edited By: ಸಾಧು ಶ್ರೀನಾಥ್​|

Updated on: Jan 24, 2022 | 6:06 AM

Share

ಭಾಗ್ಯದ ಲಕ್ಷ್ಮಿ ಬಾರಮ್ಮ ಎಂದು ಸಂಬೋಧಿಸುವ ನವ ವಧು (bride) ಸೇರು ಅಕ್ಕಿ, ಬೆಲ್ಲ ಒದ್ದು ಒಳಗೆ ಕಾಲಿಡುತ್ತಾಳೆ. ಮದುಮಗಳು ಹೀಗೆ ಮನೆ ತುಂಬಿಸಿ ಕೊಳ್ಳುತ್ತಾರೆ ಯಾಕೆ? ಈ ಸಂಪ್ರದಾಯದ ಹಿಂದಿನ ಕತಯೇನು? ಸೇರಲ್ಲಿ ಅಕ್ಕಿ ಹಾಕಿ, ಮೇಲೆ ಬೆಲ್ಲದ ಅಚ್ಚು ಇಟ್ಟು, ಅದನ್ನು ಹೊಸ್ತಿಲ ಮೇಲೆ ಇಟ್ಟು ಯಾವ ಕಾರಣಕ್ಕೆ ನವ ವಧು ಅದನ್ನು ಒದ್ದು ಗೃಹ ಪ್ರವೇಶ ಮಾಡುತ್ತಾಳೆ? ( kick a pot filled with rice) ಈ ಶಾಸ್ತ್ರವನ್ನು ಯಾಕೆ ಈ ರೀತಿಯಾಗಿ ಮಾಡಿದ್ದಾರೆ? ಇದರ ಅರ್ಥವಾದರು ಏನು ಇರಬಹುದು ಎಂದು ಆಲೋಚಿಸಿ ನೋಡಿದಾಗ..

ಸೇರಿಗೆ ಕಾರಕ = ಶನಿ ಅಕ್ಕಿಗೆ ಕಾರಕ = ಚಂದ್ರ ಬೆಲ್ಲಕ್ಕೆ ಕಾರಕ = ಗುರು

ಬೆಲ್ಲ ಅಂದ್ರೆ ಮೃತ್ಯುಂಜಯ ನವವಧು ಮನೆಗೆ ಬಂದ ಮೇಲೆ ಯಾವುದೇ ಸಾವು ನೋವು ಸಂಭವಿಸದೆ ಇರಲಿ ಎಂದು ಒಂದು ಕಡೆಯಾದರೆ ಎಲ್ಲರ ಮನಸ್ಸು ಸಿಹಿಯಾಗಿರಲಿ ಎಂಬುದು ಮತ್ತೊಂದು ಭಾವ.

ಚಂದ್ರ + ಗುರು = ಗಜಕೇಸರಿ ಯೋಗ ಅಂದರೆ ಇವರ ಮನೆಯಲ್ಲಿ ಯಾವಾಗಲೂ ಗಜಕೇಸರಿ ಯೋಗ ತುಂಬಿರಲಿ ಎಂದು ಮದುಮಗಳ ಕಾಲಿನಿಂದ ಸೇರು ಒದೆಯಿಸುವ ಶಾಸ್ತ್ರವಿದೆ.

ನವವಧು = ಶುಕ್ರ ಸೇರಿಗೆ ಕಾರಕ = ಶನಿ ಅಕ್ಕಿ = ಚಂದ್ರ ಬೆಲ್ಲ= ಗುರು

ಒದೆಯುವ ಕಾಲಿನ ಪಾದ = ಶನಿ ಒದೆಯುವ ಕಾಲಿನ ಬೆರಳು = ಗುರು ಸೇರು ಅಂದರೆ ಶನಿ = ಮಾವನಿಗೆ ಕಾರಕ

ಸೇರಿನೊಳಗೆ ಇರುವ ಅಕ್ಕಿ, ಬೆಲ್ಲ ಅಂದರೆ = ಚಂದ್ರ, ಗುರು ಅತ್ತೆಗೆ ಹಾಗೂ ಉತ್ತಮ ಬಾಂಧವ್ಯಕ್ಕೆ ಕಾರಕ ಅತ್ತೆ ಮಾವನೊಂದಿಗೆ ನವವಧು ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು ಎನ್ನುವ ಸಂಕೇತ

ಶನಿ = ಎಂದರೆ ಋಣ, ರೋಗ, ದಾರಿದ್ರ್ಯ ಗುರು = ಎಂದರೆ ಪರಿಹಾರ ಹಾಗೂ ಅಭಿವೃದ್ಧಿ ಶುಕ್ರ = ಎಂದರೆ ಲಕ್ಷ್ಮೀ ಹಾಗೂ ಗೃಹ

ಋಣ, ರೋಗ, ದಾರಿದ್ರ್ಯಗಳನ್ನೂ ಪರಿಹಾರ ಎನ್ನುವ ಬೆರಳಿನಿಂದ ಒದ್ದು ಆ ಗೃಹದಲ್ಲಿ ಸಮೃದ್ಧಿ, ಪ್ರೀತಿ, ಉತ್ತಮ ಬಾಂಧವ್ಯ, ಅಭಿವೃದ್ಧಿ ಬೆಳಸಬೇಕು ಎನ್ನುವುದರ ಸಂಕೇತ. ಶನಿ + ಚಂದ್ರ = ಅತ್ತೆ, ಮಾವ ಹಾಗೂ ಗುರು ಹಿರಿಯರ ಸಲಹೆ ಹಾಗೂ ಆಶೀರ್ವಾದ ಇವು ಉತ್ತಮ ಬಾಂಧವ್ಯಕ್ಕೆ ಅಗತ್ಯ.

ಶನಿ = ಕರ್ಮ ಗುರು = ಬೆರಳು, ಅಭಿವೃದ್ಧಿ ಶುಕ್ರ = ವಧು ಈ ಹೆಣ್ಣು ಮಾಡುವ ಪ್ರತಿ ಕೆಲಸವು ಗಂಡನ ಮನೆಗೆ ಅಭಿವೃದ್ಧಿಯನ್ನು ತರಲಿ ಎಂಬ ಸಂಕೇತ.

ಶುಕ್ರ = ಹೆಣ್ಣು, ವೈವಾಹಿಕ ಜೀವನ ಶನಿ = ಅಡೆತಡೆ ಗುರು = ನಿವಾರಣೆ ಹಾಗೂ ತಾಳ್ಮೆ ಚಂದ್ರ = ಶುದ್ಧ ಮನಸ್ಸು ಹಾಗೂ ಆಕರ್ಷಣೆ

ವೈವಾಹಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ತಾಳ್ಮೆಗೆಡದೆ ನಿವಾರಿಸಿ ಕೊಂಡು ಪರಸ್ಪರ ಆಕರ್ಷಣೆಯಿಂದ ಶುದ್ಧ ಮನಸ್ಸಿನ ಉತ್ತಮ ವೈವಾಹಿಕ ಜೀವನ ನಡೆಸಬೇಕು ಎನ್ನುವ ಸಂಕೇತವೆ ಈ ಸೇರು ಒದೆಯಿಸುವುದು ಹಾಗೂ ಮನೆ ತುಂಬಿಸಿಕೊಳ್ಳುವುದರ ಹಿಂದಿನ ಸದುದ್ದೇಶವಾಗಿದೆ. (ನಿತ್ಯಸತ್ಯ ಸತ್ಸಂಗ್ -ಸಂಗ್ರಹ)

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ