AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?

ವೈವಾಹಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ತಾಳ್ಮೆಗೆಡದೆ ನಿವಾರಿಸಿ ಕೊಂಡು ಪರಸ್ಪರ ಆಕರ್ಷಣೆಯಿಂದ ಶುದ್ಧ ಮನಸ್ಸಿನ ಉತ್ತಮ ವೈವಾಹಿಕ ಜೀವನ ನಡೆಸಬೇಕು ಎನ್ನುವ ಸಂಕೇತವೆ ಈ ಸೇರು ಒದೆಯಿಸುವುದು ಹಾಗೂ ಮನೆ ತುಂಬಿಸಿಕೊಳ್ಳುವುದರ ಹಿಂದಿನ ಸದುದ್ದೇಶವಾಗಿದೆ

ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?
ನವ ಮದುಮಗಳು ಅಕ್ಕಿ ಸೇರನ್ನು ಒದ್ದು ಗಂಡನ ಮನೆಯೊಳಗೆ ಕಾಲಿಡುವುದು ಏಕೆ? ಈ ಸಂಪ್ರದಾಯದ ಹಿಂದಿನ ಕತೆಯೇನು?
TV9 Web
| Updated By: ಸಾಧು ಶ್ರೀನಾಥ್​|

Updated on: Jan 24, 2022 | 6:06 AM

Share

ಭಾಗ್ಯದ ಲಕ್ಷ್ಮಿ ಬಾರಮ್ಮ ಎಂದು ಸಂಬೋಧಿಸುವ ನವ ವಧು (bride) ಸೇರು ಅಕ್ಕಿ, ಬೆಲ್ಲ ಒದ್ದು ಒಳಗೆ ಕಾಲಿಡುತ್ತಾಳೆ. ಮದುಮಗಳು ಹೀಗೆ ಮನೆ ತುಂಬಿಸಿ ಕೊಳ್ಳುತ್ತಾರೆ ಯಾಕೆ? ಈ ಸಂಪ್ರದಾಯದ ಹಿಂದಿನ ಕತಯೇನು? ಸೇರಲ್ಲಿ ಅಕ್ಕಿ ಹಾಕಿ, ಮೇಲೆ ಬೆಲ್ಲದ ಅಚ್ಚು ಇಟ್ಟು, ಅದನ್ನು ಹೊಸ್ತಿಲ ಮೇಲೆ ಇಟ್ಟು ಯಾವ ಕಾರಣಕ್ಕೆ ನವ ವಧು ಅದನ್ನು ಒದ್ದು ಗೃಹ ಪ್ರವೇಶ ಮಾಡುತ್ತಾಳೆ? ( kick a pot filled with rice) ಈ ಶಾಸ್ತ್ರವನ್ನು ಯಾಕೆ ಈ ರೀತಿಯಾಗಿ ಮಾಡಿದ್ದಾರೆ? ಇದರ ಅರ್ಥವಾದರು ಏನು ಇರಬಹುದು ಎಂದು ಆಲೋಚಿಸಿ ನೋಡಿದಾಗ..

ಸೇರಿಗೆ ಕಾರಕ = ಶನಿ ಅಕ್ಕಿಗೆ ಕಾರಕ = ಚಂದ್ರ ಬೆಲ್ಲಕ್ಕೆ ಕಾರಕ = ಗುರು

ಬೆಲ್ಲ ಅಂದ್ರೆ ಮೃತ್ಯುಂಜಯ ನವವಧು ಮನೆಗೆ ಬಂದ ಮೇಲೆ ಯಾವುದೇ ಸಾವು ನೋವು ಸಂಭವಿಸದೆ ಇರಲಿ ಎಂದು ಒಂದು ಕಡೆಯಾದರೆ ಎಲ್ಲರ ಮನಸ್ಸು ಸಿಹಿಯಾಗಿರಲಿ ಎಂಬುದು ಮತ್ತೊಂದು ಭಾವ.

ಚಂದ್ರ + ಗುರು = ಗಜಕೇಸರಿ ಯೋಗ ಅಂದರೆ ಇವರ ಮನೆಯಲ್ಲಿ ಯಾವಾಗಲೂ ಗಜಕೇಸರಿ ಯೋಗ ತುಂಬಿರಲಿ ಎಂದು ಮದುಮಗಳ ಕಾಲಿನಿಂದ ಸೇರು ಒದೆಯಿಸುವ ಶಾಸ್ತ್ರವಿದೆ.

ನವವಧು = ಶುಕ್ರ ಸೇರಿಗೆ ಕಾರಕ = ಶನಿ ಅಕ್ಕಿ = ಚಂದ್ರ ಬೆಲ್ಲ= ಗುರು

ಒದೆಯುವ ಕಾಲಿನ ಪಾದ = ಶನಿ ಒದೆಯುವ ಕಾಲಿನ ಬೆರಳು = ಗುರು ಸೇರು ಅಂದರೆ ಶನಿ = ಮಾವನಿಗೆ ಕಾರಕ

ಸೇರಿನೊಳಗೆ ಇರುವ ಅಕ್ಕಿ, ಬೆಲ್ಲ ಅಂದರೆ = ಚಂದ್ರ, ಗುರು ಅತ್ತೆಗೆ ಹಾಗೂ ಉತ್ತಮ ಬಾಂಧವ್ಯಕ್ಕೆ ಕಾರಕ ಅತ್ತೆ ಮಾವನೊಂದಿಗೆ ನವವಧು ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು ಎನ್ನುವ ಸಂಕೇತ

ಶನಿ = ಎಂದರೆ ಋಣ, ರೋಗ, ದಾರಿದ್ರ್ಯ ಗುರು = ಎಂದರೆ ಪರಿಹಾರ ಹಾಗೂ ಅಭಿವೃದ್ಧಿ ಶುಕ್ರ = ಎಂದರೆ ಲಕ್ಷ್ಮೀ ಹಾಗೂ ಗೃಹ

ಋಣ, ರೋಗ, ದಾರಿದ್ರ್ಯಗಳನ್ನೂ ಪರಿಹಾರ ಎನ್ನುವ ಬೆರಳಿನಿಂದ ಒದ್ದು ಆ ಗೃಹದಲ್ಲಿ ಸಮೃದ್ಧಿ, ಪ್ರೀತಿ, ಉತ್ತಮ ಬಾಂಧವ್ಯ, ಅಭಿವೃದ್ಧಿ ಬೆಳಸಬೇಕು ಎನ್ನುವುದರ ಸಂಕೇತ. ಶನಿ + ಚಂದ್ರ = ಅತ್ತೆ, ಮಾವ ಹಾಗೂ ಗುರು ಹಿರಿಯರ ಸಲಹೆ ಹಾಗೂ ಆಶೀರ್ವಾದ ಇವು ಉತ್ತಮ ಬಾಂಧವ್ಯಕ್ಕೆ ಅಗತ್ಯ.

ಶನಿ = ಕರ್ಮ ಗುರು = ಬೆರಳು, ಅಭಿವೃದ್ಧಿ ಶುಕ್ರ = ವಧು ಈ ಹೆಣ್ಣು ಮಾಡುವ ಪ್ರತಿ ಕೆಲಸವು ಗಂಡನ ಮನೆಗೆ ಅಭಿವೃದ್ಧಿಯನ್ನು ತರಲಿ ಎಂಬ ಸಂಕೇತ.

ಶುಕ್ರ = ಹೆಣ್ಣು, ವೈವಾಹಿಕ ಜೀವನ ಶನಿ = ಅಡೆತಡೆ ಗುರು = ನಿವಾರಣೆ ಹಾಗೂ ತಾಳ್ಮೆ ಚಂದ್ರ = ಶುದ್ಧ ಮನಸ್ಸು ಹಾಗೂ ಆಕರ್ಷಣೆ

ವೈವಾಹಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ತಾಳ್ಮೆಗೆಡದೆ ನಿವಾರಿಸಿ ಕೊಂಡು ಪರಸ್ಪರ ಆಕರ್ಷಣೆಯಿಂದ ಶುದ್ಧ ಮನಸ್ಸಿನ ಉತ್ತಮ ವೈವಾಹಿಕ ಜೀವನ ನಡೆಸಬೇಕು ಎನ್ನುವ ಸಂಕೇತವೆ ಈ ಸೇರು ಒದೆಯಿಸುವುದು ಹಾಗೂ ಮನೆ ತುಂಬಿಸಿಕೊಳ್ಳುವುದರ ಹಿಂದಿನ ಸದುದ್ದೇಶವಾಗಿದೆ. (ನಿತ್ಯಸತ್ಯ ಸತ್ಸಂಗ್ -ಸಂಗ್ರಹ)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?