AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ-ಸಮೃದ್ಧಿ ಮೇಲೆ ಪ್ರಭಾವ ಬೀರುತ್ತದೆ. ಮನೆಯ ಮುಂದೆ ಹುಣಸೆ ಮರ ನೆಡುವುದು ಅಶುಭವೆಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ನಕಾರಾತ್ಮಕ ಶಕ್ತಿ ಹೆಚ್ಚಿಸಿ ಆರ್ಥಿಕ ಸಮಸ್ಯೆ, ಕುಟುಂಬ ಕಲಹ ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಮನೆಯ ಪ್ರವೇಶ ದ್ವಾರದ ಮುಂದೆ ಈ ಮರ ಇರುವುದನ್ನು ತಪ್ಪಿಸಿ; ಅಕಸ್ಮಾತ್ ಇದ್ದರೆ ವಾಸ್ತು ಪರಿಹಾರಗಳನ್ನು ಅನುಸರಿಸಿ.

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?
ಹುಣಸೆ ಮರ
ಅಕ್ಷತಾ ವರ್ಕಾಡಿ
|

Updated on: Feb 19, 2026 | 11:17 AM

Share

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ, ಸಮೃದ್ಧಿ ಮತ್ತು ಮಾನಸಿಕ ಶಾಂತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಅನೇಕರು ತಮ್ಮ ಮನೆಗಳ ಮುಂದೆ ಹಣ್ಣಿನ ಮರಗಳು, ಹೂವಿನ ಗಿಡಗಳು ಮತ್ತು ತರಕಾರಿ ಸಸ್ಯಗಳನ್ನು ನೆಟ್ಟು ಮನೆಗೆ ಹಸಿರಿನ ಸೊಬಗು ನೀಡುತ್ತಾರೆ. ಸಾಮಾನ್ಯವಾಗಿ ಇದು ಒಳ್ಳೆಯದ್ದೇ. ಆದರೆ ವಾಸ್ತು ತಜ್ಞರ ಪ್ರಕಾರ, ಕೆಲವು ಮರಗಳು ತಪ್ಪು ಸ್ಥಳದಲ್ಲಿ ಇದ್ದರೆ ವಾಸ್ತು ದೋಷಗಳಿಗೆ ಕಾರಣವಾಗಬಹುದು.

ವಿಶೇಷವಾಗಿ ಮನೆಯ ಮುಂದೆ ಅಥವಾ ಮನೆಯ ಹತ್ತಿರ ಹುಣಸೆ ಮರ ಇರುವುದು ವಾಸ್ತು ಶಾಸ್ತ್ರದ ಪ್ರಕಾರ ಅಶುಭ ಎಂದು ಹೇಳಲಾಗುತ್ತದೆ. ಹುಣಸೆ ಮರವು ಗಾಢ ನೆರಳನ್ನು ನೀಡುವ ಮರವಾಗಿದ್ದು, ಇದರ ನೆರಳು ಮನೆಯ ಮೇಲೆ ಶುಭವಲ್ಲ ಎಂದು ತಜ್ಞರು ಸಲಹೆ ನೀಡುತ್ತಾರೆ. ಮನೆಯ ಮುಖ್ಯ ಬಾಗಿಲಿನ ಎದುರು ಹುಣಸೆ ಮರ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ಮುಂದೆ ಹುಣಸೆ ಮರ ಇರುವುದು ಮನೆಯ ಸದಸ್ಯರಿಗೆ ಆರ್ಥಿಕ ಸಮಸ್ಯೆ, ಕುಟುಂಬ ಕಲಹಗಳು ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ವಿಶೇಷವಾಗಿ ಮನೆಯ ಪ್ರವೇಶ ದ್ವಾರದ ಮುಂದೆ ಈ ಮರ ಇರುವುದರಿಂದ ಬಡತನ, ಸಾಲದ ಸಮಸ್ಯೆಗಳು ಮತ್ತು ಅಭಿವೃದ್ಧಿಯಲ್ಲಿ ವಿಳಂಬ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ.

ಆದ್ದರಿಂದ, ಮನೆಯ ಆವರಣದಲ್ಲಿ ಹುಣಸೆ ಮರ ನೆಡುವುದನ್ನು ತಪ್ಪಿಸುವುದು ಉತ್ತಮ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈಗಾಗಲೇ ಹುಣಸೆ ಮರ ಇದ್ದರೆ, ಅದರ ನೆರಳು ಮನೆ ಮೇಲೆ ಬೀಳದಂತೆ ಕ್ರಮ ಕೈಗೊಳ್ಳುವುದು ಅಥವಾ ವಾಸ್ತು ಪರಿಹಾರಗಳನ್ನು ಅನುಸರಿಸುವುದು ಒಳಿತು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು