AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?

Alien Temple in Salem: ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?
ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ!
ಸಾಧು ಶ್ರೀನಾಥ್​
|

Updated on:Aug 03, 2024 | 9:36 AM

Share

ಸೇಲಂ (ತಮಿಳುನಾಡು): ದೇವಾನುದೇವತೆಗಳ ವಿಗ್ರಹಗಳನ್ನು ಕೆತ್ತಿ, ಸಾಂಪ್ರದಾಯಿಕ ದೇವಾಲಯಗಳನ್ನು ನಿರ್ಮಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿದೆ. ಇನ್ನು ಆಗಾಗ್ಗೆ ಮನುಷ್ಯರಿಗಾಗಿಯೂ ಅವರವರ ಭಾವ ಭಕುತಿಗೆ ತಕ್ಕಂತೆ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದುಂಟು. ಆದರೆ ತಮಿಳುನಾಡಿನ ಸೇಲಂನಲ್ಲಿ ವ್ಯಕ್ತಿಯೊಬ್ಬರು ಅನ್ಯಲೋಕದ ದೇವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ. ಅನ್ಯಲೋಕದ ಆ ದೇವ ಭೂಲೋಕದ ತನ್ನ ಭಕ್ತರನ್ನು ನೈಸರ್ಗಿಕ ವಿಕೋಪಗಳಿಂದ (natural disasters) ರಕ್ಷಿಸುವ ಶಕ್ತಿ ಹೊಂದಿದ್ದಾರೆ ಎನ್ನುತ್ತಾರೆ ಆ ದೇವಸ್ಥಾನವ (spiritual ) ನಿರ್ಮಿಸಿದಾತ.

ಸೇಲಂನ ಮಲ್ಲಮೂಪಂಬಟ್ಟಿಯ (Mallamoopambatti in Salem) ಲೋಗನಾಥನ್ ಅವರು (Loganathan) ಸುಮಾರು ಮುಕ್ಕಾಲು ಎಕರೆ ಭೂಮಿಯಲ್ಲಿ ಹರಡಿರುವ ಅನ್ಯಗ್ರಹ ದೇವರನ್ನು ಪ್ರತಿಷ್ಠಾಪಿಸಿದ್ದಾರೆ. “ನಾನು ಅನ್ಯಗ್ರಹ ಜೀವಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ದೇವಾಲಯವನ್ನು ನಿರ್ಮಿಸಲು ಅವರಿಂದ ಅನುಮತಿ ಸಹ ಪಡೆದಿದ್ದೇನೆ” ಎಂದು ಅವರು ಹೇಳುತ್ತಾರೆ. ಪರಕೀಯ ‘ದೇವರು’ ಅಲ್ಲದೆ ಶಿವ, ಪಾರ್ವತಿ, ಮುರುಗನ್, ಕಾಳಿ ಮುಂತಾದ ದೇವ-ದೇವತೆಗಳ ವಿಗ್ರಹಗಳನ್ನು ಸಹ ನೆಲದಿಂದ 11 ಅಡಿ ಕೆಳಗಿರುವ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ.

Also Read: ಇಂದು ಶನಿವಾರ – ಶನಿ ಮಹಾತ್ಮನ ದಿನಕ್ಕೆ ಇಲ್ಲಿದೆ ಆರ್ಥಿಕ ಪರಿಹಾರಗಳು, ಇದರಿಂದ ಖಜಾನೆ ತುಂಬುತ್ತದೆ

ಜಗತ್ತಿನಲ್ಲಿ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವಾಗ, ಅವುಗಳನ್ನು ತಡೆಯುವ ಶಕ್ತಿ ಅನ್ಯಗ್ರಹ ಜೀವಿಗಳಿಗೆ ಇದೆ ಎಂದು ಲೋಗನಾಥನ್ ಅವರು ನಂಬುತ್ತಾರೆ. ಅವರ ನಂಬಿಕೆಯ ಪ್ರಕಾರ, ಏಲಿಯನ್‌ಗಳು ಚಲನಚಿತ್ರಗಳಲ್ಲಿ ಚಿತ್ರಿಸುವಂತಹವರಲ್ಲ. ಬಾಳೆ ಎಲೆಯನ್ನು ದೇಹಕ್ಕೆ ಸುತ್ತಿಕೊಂಡರೆ ಅನ್ಯಗ್ರಹ ಜೀವಿಗಳ ವಿಕಿರಣದಿಂದ ಪಾರಾಗಬಹುದು ಎಂಬ ಹೇಳಿಕೆಯನ್ನೂ ಲೋಗನಾಥನ್ ನೀಡಿದ್ದಾರೆ.

Also Read: Monsoon Love Predictions – ಮುಂಗಾರು ಮಳೆಯಲ್ಲಿ ಪ್ರೀತಿಯ ಅಲೆಗಳು.. ಯಾವ ರಾಶಿಯವರೆಲ್ಲಾ ಪ್ರೀತಿ-ಪ್ರೇಮದಲ್ಲಿ ನೆನೆಯುತ್ತಾರೆ ನೋಡಿ!

ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:30 am, Sat, 3 August 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ