AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?

Alien Temple in Salem: ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ! ಯಾಕೆ ಗೊತ್ತಾ?
ತಮಿಳುನಾಡಿನ ಆ ವ್ಯಕ್ತಿ ಏಲಿಯನ್ ಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ!
ಸಾಧು ಶ್ರೀನಾಥ್​
|

Updated on:Aug 03, 2024 | 9:36 AM

Share

ಸೇಲಂ (ತಮಿಳುನಾಡು): ದೇವಾನುದೇವತೆಗಳ ವಿಗ್ರಹಗಳನ್ನು ಕೆತ್ತಿ, ಸಾಂಪ್ರದಾಯಿಕ ದೇವಾಲಯಗಳನ್ನು ನಿರ್ಮಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿದೆ. ಇನ್ನು ಆಗಾಗ್ಗೆ ಮನುಷ್ಯರಿಗಾಗಿಯೂ ಅವರವರ ಭಾವ ಭಕುತಿಗೆ ತಕ್ಕಂತೆ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದುಂಟು. ಆದರೆ ತಮಿಳುನಾಡಿನ ಸೇಲಂನಲ್ಲಿ ವ್ಯಕ್ತಿಯೊಬ್ಬರು ಅನ್ಯಲೋಕದ ದೇವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ. ಅನ್ಯಲೋಕದ ಆ ದೇವ ಭೂಲೋಕದ ತನ್ನ ಭಕ್ತರನ್ನು ನೈಸರ್ಗಿಕ ವಿಕೋಪಗಳಿಂದ (natural disasters) ರಕ್ಷಿಸುವ ಶಕ್ತಿ ಹೊಂದಿದ್ದಾರೆ ಎನ್ನುತ್ತಾರೆ ಆ ದೇವಸ್ಥಾನವ (spiritual ) ನಿರ್ಮಿಸಿದಾತ.

ಸೇಲಂನ ಮಲ್ಲಮೂಪಂಬಟ್ಟಿಯ (Mallamoopambatti in Salem) ಲೋಗನಾಥನ್ ಅವರು (Loganathan) ಸುಮಾರು ಮುಕ್ಕಾಲು ಎಕರೆ ಭೂಮಿಯಲ್ಲಿ ಹರಡಿರುವ ಅನ್ಯಗ್ರಹ ದೇವರನ್ನು ಪ್ರತಿಷ್ಠಾಪಿಸಿದ್ದಾರೆ. “ನಾನು ಅನ್ಯಗ್ರಹ ಜೀವಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ದೇವಾಲಯವನ್ನು ನಿರ್ಮಿಸಲು ಅವರಿಂದ ಅನುಮತಿ ಸಹ ಪಡೆದಿದ್ದೇನೆ” ಎಂದು ಅವರು ಹೇಳುತ್ತಾರೆ. ಪರಕೀಯ ‘ದೇವರು’ ಅಲ್ಲದೆ ಶಿವ, ಪಾರ್ವತಿ, ಮುರುಗನ್, ಕಾಳಿ ಮುಂತಾದ ದೇವ-ದೇವತೆಗಳ ವಿಗ್ರಹಗಳನ್ನು ಸಹ ನೆಲದಿಂದ 11 ಅಡಿ ಕೆಳಗಿರುವ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ.

Also Read: ಇಂದು ಶನಿವಾರ – ಶನಿ ಮಹಾತ್ಮನ ದಿನಕ್ಕೆ ಇಲ್ಲಿದೆ ಆರ್ಥಿಕ ಪರಿಹಾರಗಳು, ಇದರಿಂದ ಖಜಾನೆ ತುಂಬುತ್ತದೆ

ಜಗತ್ತಿನಲ್ಲಿ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವಾಗ, ಅವುಗಳನ್ನು ತಡೆಯುವ ಶಕ್ತಿ ಅನ್ಯಗ್ರಹ ಜೀವಿಗಳಿಗೆ ಇದೆ ಎಂದು ಲೋಗನಾಥನ್ ಅವರು ನಂಬುತ್ತಾರೆ. ಅವರ ನಂಬಿಕೆಯ ಪ್ರಕಾರ, ಏಲಿಯನ್‌ಗಳು ಚಲನಚಿತ್ರಗಳಲ್ಲಿ ಚಿತ್ರಿಸುವಂತಹವರಲ್ಲ. ಬಾಳೆ ಎಲೆಯನ್ನು ದೇಹಕ್ಕೆ ಸುತ್ತಿಕೊಂಡರೆ ಅನ್ಯಗ್ರಹ ಜೀವಿಗಳ ವಿಕಿರಣದಿಂದ ಪಾರಾಗಬಹುದು ಎಂಬ ಹೇಳಿಕೆಯನ್ನೂ ಲೋಗನಾಥನ್ ನೀಡಿದ್ದಾರೆ.

Also Read: Monsoon Love Predictions – ಮುಂಗಾರು ಮಳೆಯಲ್ಲಿ ಪ್ರೀತಿಯ ಅಲೆಗಳು.. ಯಾವ ರಾಶಿಯವರೆಲ್ಲಾ ಪ್ರೀತಿ-ಪ್ರೇಮದಲ್ಲಿ ನೆನೆಯುತ್ತಾರೆ ನೋಡಿ!

ಲೋಕನಾಥನ್​​​ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:30 am, Sat, 3 August 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ