AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ear Piercing: ಮಕ್ಕಳಿಗೆ ಕಿವಿ ಚುಚ್ಚುವುದು ಯಾಕೆ ಗೊತ್ತಾ? ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವ ತಿಳಿಯಿರಿ

ಪ್ರಾಚೀನ ಭಾರತೀಯ ಸಂಸ್ಕೃತಿಯಲ್ಲಿ ಕಿವಿ ಚುಚ್ಚುವುದು (ಕರ್ಣವೇದ) ಮಹತ್ವದ ಧಾರ್ಮಿಕ ಮತ್ತು ವೈಜ್ಞಾನಿಕ ಆಚರಣೆಯಾಗಿದೆ. ಇದು ಮಕ್ಕಳು ಮತ್ತು ಪುರುಷರಿಗೂ ಶುಭ ಸಂಕೇತವಾಗಿದೆ. ಮಾನಸಿಕ ನೆಮ್ಮದಿ, ಸಕಾರಾತ್ಮಕ ಚಿಂತನೆ, ಆರೋಗ್ಯ ವೃದ್ಧಿ ಮತ್ತು ಗ್ರಹಗಳ ಬಲವರ್ಧನೆ ಸೇರಿದಂತೆ ಹಲವು ಪ್ರಯೋಜನಗಳನ್ನು ನೀಡುತ್ತದೆ ಎಂಬ ನಂಬಿಕೆ ಇದೆ.

Ear Piercing: ಮಕ್ಕಳಿಗೆ ಕಿವಿ ಚುಚ್ಚುವುದು ಯಾಕೆ ಗೊತ್ತಾ? ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವ ತಿಳಿಯಿರಿ
ಕಿವಿ ಚುಚ್ಚುವುದು
ಅಕ್ಷತಾ ವರ್ಕಾಡಿ
|

Updated on: Nov 30, 2025 | 11:03 AM

Share

ಪ್ರಾಚೀನ ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕರ್ಣವೇದ ಎಂದು ಕರೆಯಲ್ಪಡುವ ಕಿವಿ ಚುಚ್ಚುವ ಸಂಪ್ರದಾಯವು ಒಂದು ವಿಶಿಷ್ಟ ಆಚರಣೆಯಾಗಿ ಹಾಸುಹೊಕ್ಕಾಗಿದೆ. ಇದು ಕೇವಲ ಬಾಹ್ಯ ಅಲಂಕಾರಿಕ ಅಂಶವಲ್ಲ, ಬದಲಿಗೆ ಆಳವಾದ ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಒಳಗೊಂಡಿದೆ. ಹಿಂದಿನ ಕಾಲದಲ್ಲಿ, ಸ್ತ್ರೀಯರಂತೆ ಪುರುಷರಿಗೂ ಮತ್ತು ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಬ್ಬರಿಗೂ ಚಿಕ್ಕ ವಯಸ್ಸಿನಲ್ಲಿ ಕಿವಿ ಚುಚ್ಚುವ ಪದ್ಧತಿ ಇತ್ತು. ನಾಗರಿಕತೆಯ ಬೆಳವಣಿಗೆಯೊಂದಿಗೆ ಈ ಆಚರಣೆಯು ಕೆಲವೊಮ್ಮೆ ಫ್ಯಾಷನ್ ಎಂಬ ತಪ್ಪು ಕಲ್ಪನೆಗೆ ಒಳಗಾದರೂ, ಅದರ ಹಿಂದಿನ ನಿಜವಾದ ಉದ್ದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಕಿವಿ ಚುಚ್ಚುವಿಕೆಯು ಕೇವಲ ಶುಭ ಸಂಕೇತ ಮಾತ್ರವಲ್ಲ, ಅದು ಆರೋಗ್ಯಕ್ಕೂ ಹಿತಕಾರಿ ಎಂದು ಹೇಳಲಾಗುತ್ತದೆ. ಹಿಂದೂ ಪುರಾಣಗಳ ಪ್ರಕಾರ, ಎರಡೂ ಕಿವಿಗಳನ್ನು ಚುಚ್ಚಿಸಿಕೊಂಡಾಗ ದುಷ್ಟ ಶಕ್ತಿಗಳು ದೇಹವನ್ನು ಪ್ರವೇಶಿಸುವುದಿಲ್ಲ, ಇದರಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ. ಇದು ಆಲೋಚನೆಗಳನ್ನು ಧನಾತ್ಮಕಗೊಳಿಸಿ, ತಾಳ್ಮೆ, ಸಹನೆ ಮತ್ತು ಪ್ರೀತಿಯನ್ನು ಬೆಳೆಸುತ್ತದೆ, ಅಹಂಕಾರವನ್ನು ಕಡಿಮೆ ಮಾಡುತ್ತದೆ. ದೈವಭೀತಿ ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಇದು ಹೆಚ್ಚಿಸುತ್ತದೆ ಎನ್ನಲಾಗಿದೆ.

ಆರೋಗ್ಯದ ದೃಷ್ಟಿಯಿಂದ, ಚಿಕ್ಕ ಮಕ್ಕಳಿಗೆ ಅಥವಾ ನಿರ್ದಿಷ್ಟ ವಯಸ್ಸಿನಲ್ಲಿ ಕಿವಿ ಚುಚ್ಚಿದಾಗ ಯಾವುದೇ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ ಎಂದು ನಂಬಲಾಗಿದೆ. ಇದು ಹಳೆಯ ಜನ್ಮದ ಪಾಪಗಳ ಪ್ರಭಾವವನ್ನು ಈ ಜನ್ಮದಲ್ಲಿ ಕಡಿಮೆ ಮಾಡುತ್ತದೆ ಎಂಬ ಧಾರ್ಮಿಕ ನಂಬಿಕೆಯೂ ಇದೆ. ಜ್ಯೋತಿಷ್ಯದ ಪ್ರಕಾರ, ಎಡ ಮತ್ತು ಬಲ ಎರಡೂ ಕಿವಿಗಳನ್ನು ಚುಚ್ಚಿಕೊಳ್ಳುವುದು ಗ್ರಹಗಳ ಬಲವರ್ಧನೆಗೆ ಸಹಾಯ ಮಾಡುತ್ತದೆ. ನಕಾರಾತ್ಮಕ ಶಕ್ತಿಗಳು ದೂರವಾಗಿ ಸಕಾರಾತ್ಮಕ ಚಿಂತನೆಗಳು ಬೆಳೆಯುತ್ತವೆ. ಜೊತೆಗೆ, ಕಣ್ಣಿನ ದೃಷ್ಟಿ ಸುಧಾರಿಸುತ್ತದೆ ಎನ್ನಲಾಗಿದೆ. ಪುರುಷರಿಗೆ ಕಿವಿ ಚುಚ್ಚುವುದು ಉತ್ತಮ ಆಲೋಚನಾ ಶಕ್ತಿಯೊಂದಿಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ನೀಡುತ್ತದೆ ಮತ್ತು ಸಂತಾನದ ಫಲವನ್ನೂ ಉತ್ತಮಗೊಳಿಸುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮನೆಗೆ ಹೊಸ ವರ್ಷದ ಕ್ಯಾಲೆಂಡರ್ ತರುತ್ತಿದ್ದೀರಾ? ಹಾಗಿದ್ರೆ ಈ ವಿಷ್ಯ ತಿಳಿದುಕೊಳ್ಳಿ

ಈ ಎಲ್ಲ ಲಾಭಗಳು ನಂಬಿಕೆಗಳ ಆಧಾರದ ಮೇಲೆ ನಿಂತಿವೆ. ಪೂರ್ವಜರ ಆಶೀರ್ವಾದ ಮತ್ತು ಪಾಪಗಳ ಇಳಿಕೆಯು ಈ ಆಚರಣೆಯೊಂದಿಗೆ ತಳಕು ಹಾಕಿಕೊಂಡಿದೆ. ಕಿವಿ ಚುಚ್ಚುವಾಗ ಯಾವ ಲೋಹವನ್ನು ಬಳಸಬೇಕು ಎಂಬ ಪ್ರಶ್ನೆಗೆ, ತಾಮ್ರ, ಬೆಳ್ಳಿ ಅಥವಾ ಬಂಗಾರ – ಇವುಗಳನ್ನು ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಧರಿಸಬಹುದು. ಆದರೆ ಬೆಳ್ಳಿಯು ಸರ್ವಶ್ರೇಷ್ಠವೆಂದು ಪರಿಗಣಿಸಲಾಗಿದೆ. ಹೀಗೆ, ಕಿವಿ ಚುಚ್ಚುವ ಪದ್ಧತಿಯು ಭಾರತೀಯ ಸಂಸ್ಕೃತಿಯಲ್ಲಿ ಕೇವಲ ಒಂದು ಆಭರಣದ ಆಯ್ಕೆಯಾಗದೆ, ಸಮಗ್ರ ಶಾರೀರಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಕೊಡುಗೆ ನೀಡುವ ಒಂದು ಆಳವಾದ ಆಚರಣೆಯಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ