AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡುವುದರ ಅರ್ಥ ಮತ್ತು ಮಹತ್ವ

ಶುಭ ಸಮಾರಂಭಗಳಲ್ಲಿ ಮುಯ್ಯಿ ನೀಡುವುದು ಭಾರತೀಯ ಸಂಪ್ರದಾಯದ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ಆರ್ಥಿಕ ನೆರವಲ್ಲದೆ, ಸಂಬಂಧಗಳನ್ನು ಬಲಪಡಿಸುವ ಮತ್ತು ಆಶೀರ್ವಾದ ನೀಡುವ ಸಂಕೇತವಾಗಿದೆ. ಮದುವೆ, ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಆರ್ಥಿಕ ಹೊರೆಯನ್ನು ಹಂಚಿಕೊಳ್ಳುವ ಸದ್ಭಾವನೆಯಿಂದ ಇದನ್ನು ನೀಡಲಾಗುತ್ತದೆ. ಸಂಖ್ಯೆಗಳಿಗೆ ಒಂದು ಸೇರಿಸುವ ಪದ್ಧತಿಯು ಅಭಿವೃದ್ಧಿ ಮತ್ತು ಶುಭವನ್ನು ಸೂಚಿಸುತ್ತದೆ ಎಂದು ಡಾ. ಬಸವರಾಜ್ ಗುರೂಜಿ ತಿಳಿಸಿದ್ದಾರೆ.

Daily Devotional: ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡುವುದರ ಅರ್ಥ ಮತ್ತು ಮಹತ್ವ
ಮುಯ್ಯಿ
ಅಕ್ಷತಾ ವರ್ಕಾಡಿ
|

Updated on: Mar 17, 2026 | 9:46 AM

Share

ಹಿಂದೂ ಸನಾತನ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯಗಳಾದ ನಾಮಕರಣ, ವಿವಾಹ, ಅಥವಾ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಮುಯ್ಯಿ ನೀಡುವ ಪದ್ಧತಿಯು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಆಚರಣೆಯಾಗದೆ, ಆಳವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಮಹತ್ವವನ್ನು ಹೊಂದಿದೆ ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಮುಯ್ಯಿ ಎಂದರೆ ಕೇವಲ ಕೊಡುಗೆಯಲ್ಲ, ಬದಲಿಗೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಉತ್ತಮ ಭಾವನೆಯಿಂದ ನೀಡುವ ಒಂದು ಕಾಣಿಕೆಯಾಗಿದೆ. ಅದು ಹಣದ ರೂಪದಲ್ಲಿರಬಹುದು, ವಸ್ತುವಿನ ರೂಪದಲ್ಲಿರಬಹುದು, ಯಾವುದೇ ರೀತಿಯಲ್ಲಿರಬಹುದು, ಆದರೆ ಅದರ ಹಿಂದಿರುವ ಭಾವನೆಯೇ ಪ್ರಮುಖವಾದುದು. “ಮುಯ್ಯಿ” ಎಂಬ ಪದವು ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿಯ ಭಾಗವಾಗಿದೆ, ಇದು ಸಂಬಂಧಗಳನ್ನು ಬಲಪಡಿಸುವ ಮತ್ತು ಪರಸ್ಪರ ಸಹಕಾರವನ್ನು ಸೂಚಿಸುವ ಒಂದು ವಿಶಿಷ್ಟ ಪದ್ಧತಿಯಾಗಿದೆ.

ಹಿಂದಿನ ಕಾಲದಿಂದಲೂ, ಮದುವೆ ಅಥವಾ ಮನೆ ಕಟ್ಟುವಂತಹ ದೊಡ್ಡ ಕಾರ್ಯಗಳು ಕುಟುಂಬಗಳಿಗೆ ಅಪಾರ ಆರ್ಥಿಕ ಹೊರೆಯನ್ನು ತರುತ್ತಿದ್ದವು. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ನಾಣ್ಣುಡಿಯು ಈ ಕಷ್ಟಗಳನ್ನು ಎತ್ತಿ ತೋರಿಸುತ್ತದೆ. ಇಂತಹ ಸಂದರ್ಭಗಳಲ್ಲಿ, ನೆಂಟರು, ಸ್ನೇಹಿತರು ಅಥವಾ ಆತ್ಮೀಯರು ಬರಿಗೈಯಲ್ಲಿ ಹೋಗುವುದಿಲ್ಲ. ಒಂದು ಮುಯ್ಯಿ ಕವರ್‌ನಲ್ಲಿ ತಮ್ಮ ಕೈಲಾದ ಹಣವನ್ನು ಇರಿಸಿ, ಆತಿಥೇಯರ ಆರ್ಥಿಕ ಹೊರೆಗೆ ಒಂದು ಸಣ್ಣ ಸಹಾಯ ನೀಡುತ್ತಾರೆ. ಇದು ಕೇವಲ ಹಣಕಾಸಿನ ನೆರವಲ್ಲ, ಆತಿಥೇಯರ ಕಷ್ಟದಲ್ಲಿ ನಾವಿದ್ದೇವೆ ಎಂಬ ಮಾನಸಿಕ ಬೆಂಬಲವನ್ನೂ ಸೂಚಿಸುತ್ತದೆ.

ಇದನ್ನೂ ಓದಿ: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಇತ್ತೀಚಿನ ದಿನಗಳಲ್ಲಿ, ಕೆಲವರು ಆಮಂತ್ರಣ ಪತ್ರಿಕೆಗಳಲ್ಲಿ “ಮುಯ್ಯಿ ಸ್ವೀಕರಿಸುವುದಿಲ್ಲ” ಎಂದು ನಮೂದಿಸುತ್ತಾರೆ. ಇದು ಅವರ ಸಂಪತ್ತನ್ನು ಸೂಚಿಸಬಹುದು, ಆದರೆ ಮುಯ್ಯಿಯ ನಿಜವಾದ ಅರ್ಥವನ್ನು ನಿರ್ಲಕ್ಷಿಸಿದಂತಾಗುತ್ತದೆ. ಮುಯ್ಯಿಯು ಕೇವಲ ಆರ್ಥಿಕ ಸಹಾಯವಲ್ಲ, ಬದಲಿಗೆ ಆಶೀರ್ವಾದ, ಶುಭ ಹಾರೈಕೆ ಮತ್ತು ಸಂಬಂಧಗಳ ಬಾಂಧವ್ಯವನ್ನು ಬಲಪಡಿಸುವ ಒಂದು ಸಂಕೇತವಾಗಿದೆ. ಆತಿಥೇಯರು ಎಷ್ಟೇ ಶ್ರೀಮಂತರಾಗಿದ್ದರೂ, ಅತಿಥಿಗಳು ನೀಡುವ ಮುಯ್ಯಿ ಕೇವಲ ಹಣವಲ್ಲ, ಅದು ಸದ್ಭಾವನೆ ಮತ್ತು ಆಶೀರ್ವಾದದ ರೂಪದಲ್ಲಿರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್