AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ

ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದು ನಮ್ಮ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ಇದು ಆಜ್ಞಾ ಚಕ್ರವನ್ನು ಜಾಗೃತಗೊಳಿಸಿ ಮಕ್ಕಳ ಜ್ಞಾಪಕ ಶಕ್ತಿ, ತಾಳ್ಮೆ, ಸಹನೆ, ಹಾಗೂ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ವಿಭೂತಿ ಚರ್ಮದ ಆರೋಗ್ಯಕ್ಕೆ, ಗಂಧ ತಂಪು ನೀಡಲು, ಮತ್ತು ಕುಂಕುಮ ಮೆದುಳಿನ ಕಾರ್ಯಕ್ಷಮತೆ ಹಾಗೂ ರಕ್ತ ಸಂಚಾರ ಸುಧಾರಿಸಲು ನೆರವಾಗುತ್ತದೆ. ಇದು ಮಕ್ಕಳಲ್ಲಿ ಉತ್ತಮ ಗುಣಗಳನ್ನು ಬೆಳೆಸುತ್ತದೆ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ
ಮಕ್ಕಳ ಹಣೆಗೆ ವಿಭೂತಿImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 06, 2026 | 5:47 PM

Share

ಮಕ್ಕಳಿಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದರ ಹಿಂದಿರುವ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬೆಳಗ್ಗೆ 10 ಗಂಟೆಯ ತನಕದ ಸಮಯವು ಅತ್ಯಂತ ಪ್ರಶಾಂತ ಮತ್ತು ಅದ್ಭುತವಾದ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮನೆಯಲ್ಲಿನ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಹಣೆಗೆ ಪವಿತ್ರ ತಿಲಕವನ್ನು ಧರಿಸುವುದು ಸಂಪ್ರದಾಯ.

ಮಕ್ಕಳಿಗೆ, ಅದರಲ್ಲೂ ಪುಟ್ಟ ಹೆಣ್ಣುಮಕ್ಕಳು ಅಥವಾ ಗಂಡುಮಕ್ಕಳು, ಸ್ನಾನವಾದ ನಂತರ ಅಥವಾ ಬೆಳಗ್ಗೆ ಎದ್ದ ತಕ್ಷಣ ಗಂಧ, ಕುಂಕುಮ, ವಿಭೂತಿ ಅಥವಾ ಅಕ್ಷತೆ ಹಚ್ಚುವುದು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಮಠಮಾನ್ಯಗಳಲ್ಲಿ ಮತ್ತು ಗುರುಕುಲಗಳಲ್ಲಿ ಮಕ್ಕಳು ಸ್ನಾನದ ನಂತರ ವಿಭೂತಿ ಹಚ್ಚಿಕೊಂಡು ಪ್ರಾರ್ಥನೆ ಮತ್ತು ವಿದ್ಯಾಭ್ಯಾಸದಲ್ಲಿ ತೊಡಗುವುದು ಸಾಮಾನ್ಯ ಅಭ್ಯಾಸ. ಮನೆಯು ಕೂಡ ಒಂದು ಮಂತ್ರಾಲಯ, ದೇವಾಲಯ ಅಥವಾ ಭಗವಂತನ ಆವಾಸ ಸ್ಥಾನ ಎಂಬ ನಂಬಿಕೆ ನಮ್ಮಲ್ಲಿದೆ. ಹಾಗಾಗಿ, ಮನೆಯಲ್ಲಿ ದೇವರ ಫೋಟೋ ಅಥವಾ ವಿಗ್ರಹದ ಎದುರು ನಿಲ್ಲಿಸಿ ಮಕ್ಕಳಿಗೆ ತಿಲಕವನ್ನು ಹಚ್ಚುವುದು ಪೋಷಕರ ಜವಾಬ್ದಾರಿಯಾಗಿದೆ.

ಹಣೆಯ ಮಧ್ಯಭಾಗದಲ್ಲಿ, ಹುಬ್ಬುಗಳ ನಡುವೆ ಆಜ್ಞಾ ಚಕ್ರ ಎಂಬ ಶಕ್ತಿ ಕೇಂದ್ರವಿದೆ. ಮಕ್ಕಳಿಗೆ ವಿಭೂತಿ, ಕುಂಕುಮ ಅಥವಾ ಗಂಧ ಹಚ್ಚುವುದರಿಂದ ಈ ಆಜ್ಞಾ ಚಕ್ರವು ಜಾಗೃತಗೊಳ್ಳುತ್ತದೆ. ಇದರಿಂದ ಮಕ್ಕಳ ಜ್ಞಾಪಕ ಶಕ್ತಿ (ಮೆಮರಿ ಪವರ್) ಹೆಚ್ಚುತ್ತದೆ. ತಾಳ್ಮೆ ಮತ್ತು ಸಹನೆ ಗುಣಗಳು ವೃದ್ಧಿಯಾಗುತ್ತವೆ. ಅಲ್ಲದೆ, ಅವರ ಆಲೋಚನಾ ಶಕ್ತಿ ಕೂಡ ವಿಕಸಿತವಾಗುತ್ತದೆ. ಇಂದಿನ ದಿನಗಳಲ್ಲಿ ಅನೇಕ ಪೋಷಕರು ತಮ್ಮ ಮಕ್ಕಳು ಓದಿನಲ್ಲಿ ಹಿಂದೆ ಬೀಳುತ್ತಿದ್ದಾರೆ, ನೆನಪಿನ ಶಕ್ತಿ ಕಡಿಮೆಯಾಗಿದೆ, ಅಥವಾ ಕೋಪ ಮತ್ತು ಆವೇಶ ಹೆಚ್ಚಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಇದಕ್ಕೆ ಒಂದು ಪ್ರಮುಖ ಕಾರಣವೆಂದರೆ ಮೊಬೈಲ್ ಬಳಕೆಯ ಅತಿಯಾದ ರೂಢಿ. ಈ ಸಂಪ್ರದಾಯವನ್ನು ಅನುಸರಿಸುವುದರಿಂದ ಮೊಬೈಲ್ ನೋಡುವ ಅಭ್ಯಾಸದಿಂದ ಮಕ್ಕಳನ್ನು ವಿಮುಖಗೊಳಿಸಿ ಅವರಲ್ಲಿ ಏಕಾಗ್ರತೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ತಿಲಕಕ್ಕೆ ಬಳಸುವ ಪ್ರತಿಯೊಂದು ವಸ್ತುವಿಗೂ ತನ್ನದೇ ಆದ ವಿಶಿಷ್ಟ ಪ್ರಯೋಜನಗಳಿವೆ. ಶ್ರೀಗಂಧವು ತಂಪನ್ನು ನೀಡುತ್ತದೆ ಮತ್ತು ನರಮಂಡಲವನ್ನು ಗಟ್ಟಿಗೊಳಿಸುತ್ತದೆ. ಗಂಧವನ್ನು ಹಚ್ಚಿದ ಮಕ್ಕಳ ಮುಖವು ನಿರ್ಮಲವಾಗಿ, ಆಕರ್ಷಕವಾಗಿ ಕಾಣುತ್ತದೆ. ವಿಭೂತಿಯನ್ನು ಹಚ್ಚುವುದರಿಂದ ಚರ್ಮದ ಕಾಯಿಲೆಗಳು ದೂರಾಗಿ, ಚರ್ಮದಲ್ಲಿನ ತೇವಾಂಶವನ್ನು ಹೀರಿಕೊಂಡು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಅರಿಶಿಣ ಮತ್ತು ಸುಣ್ಣದಿಂದ ತಯಾರಿಸಿದ ಕುಂಕುಮವು ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಆಲೋಚನಾ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ರಕ್ತ ಸಂಚಾರವನ್ನು ಉತ್ತಮಗೊಳಿಸುತ್ತದೆ.

ತಾಯಿ ಮನೆಯಲ್ಲಿ ಕುಂಕುಮ ಅಥವಾ ವಿಭೂತಿ ಹಚ್ಚಿಕೊಂಡಾಗ ಸಾಕ್ಷಾತ್ ದೇವಿಯಂತೆ ಕಾಣಿಸುತ್ತಾಳೆ ಎಂಬ ನಂಬಿಕೆಯಿದೆ. ಮನೆಯಲ್ಲಿ ಗೃಹಿಣಿಯ ಉಪಸ್ಥಿತಿ ಮತ್ತು ಅವರು ಧರಿಸುವ ಈ ಪವಿತ್ರ ಚಿಹ್ನೆಗಳು ಮನೆಯ ವಾತಾವರಣಕ್ಕೆ ಶುಭವನ್ನು ತರುತ್ತವೆ. ಈ ಅಭ್ಯಾಸಗಳು ವಿನಯ, ತಾಳ್ಮೆ ಮತ್ತು ಸಹನೆಯಂತಹ ಗುಣಗಳನ್ನು ಮಕ್ಕಳಲ್ಲಿ ಬೆಳೆಸುತ್ತವೆ. ಇವುಗಳು ಇಂದಿನ ಸ್ಪರ್ಧಾತ್ಮಕ ಜೀವನದಲ್ಲಿ ಮಕ್ಕಳ ಆಯುಸ್ಸು ಮತ್ತು ಶ್ರೇಯಸ್ಸಿಗೆ ಮೂಲಭೂತ ಅಂಶಗಳಾಗಿವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್