AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Lamp: ದೇವರ ಕೋಣೆಯಲ್ಲಿ ವಿದ್ಯುತ್ ದೀಪ ಬಳಸುವುದು ಅಶುಭವೇ? ಜ್ಯೋತಿಷ್ಯ ಸಲಹೆ ಇಲ್ಲಿದೆ

ದೇವರ ಮನೆಯಲ್ಲಿ ನಿರಂತರ ಬೆಳಕು ಶುಭಸೂಚಕ. ಅಖಂಡ ಜ್ಯೋತಿಯು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ. ಎಣ್ಣೆ ದೀಪ ನಿರಂತರ ಉರಿಯುವುದು ಕಷ್ಟ, ಹಾಗಾಗಿ ಅದರ ಜೊತೆಗೆ ಮಂದವಾದ ವಿದ್ಯುತ್ ದೀಪವನ್ನು (ಜೀರೋ ಕ್ಯಾಂಡಲ್ ಬಲ್ಬ್) ಇರಿಸುವುದು ಉತ್ತಮ. ಇದು ಕತ್ತಲನ್ನು ನಿವಾರಿಸುವುದಲ್ಲದೆ, ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ, ಮನಸ್ಸಿಗೆ ನೆಮ್ಮದಿ ನೀಡುತ್ತದೆ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

Electric Lamp: ದೇವರ ಕೋಣೆಯಲ್ಲಿ ವಿದ್ಯುತ್ ದೀಪ ಬಳಸುವುದು ಅಶುಭವೇ? ಜ್ಯೋತಿಷ್ಯ ಸಲಹೆ ಇಲ್ಲಿದೆ
ದೇವರ ಕೋಣೆಯಲ್ಲಿ ವಿದ್ಯುತ್ ದೀಪImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 07, 2026 | 7:56 AM

Share

ಸಾಮಾನ್ಯವಾಗಿ, ದೇವರ ಕೋಣೆಯಲ್ಲಿ ಎಣ್ಣೆ ದೀಪಗಳನ್ನು ಹಚ್ಚುತ್ತೇವೆ. ಆದರೆ, ಎಣ್ಣೆ ದೀಪಗಳು ಅಥವಾ ತುಪ್ಪದ ದೀಪಗಳು ನಿರಂತರವಾಗಿ ಉರಿಯುವುದಿಲ್ಲ. ಬೆಳಗ್ಗೆ ಹಚ್ಚಿದ ದೀಪ ಮಧ್ಯಾಹ್ನಕ್ಕೇ ಆರಿಹೋಗಬಹುದು, ಹಾಗೆಯೇ ಸಂಜೆ ಹಚ್ಚಿದ ದೀಪ ಮಧ್ಯರಾತ್ರಿಯ ವೇಳೆಗೆ ಆರಿಹೋಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ, ಸಾಕಷ್ಟು ಜನರು ವಿದ್ಯುತ್ ದೀಪವನ್ನು ಬಳಕೆ ಮಾಡುತ್ತಾರೆ. ಆದರೆ ದೇವರಿಗೆ ವಿದ್ಯುತ್ ದೀಪ ಬಳಸುವುದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ದೇವರ ಮನೆಯಲ್ಲಿ ಎಣ್ಣೆ ದೀಪದ ಜೊತೆಗೆ, ಮಂದವಾದ ಜೀರೋ ಕ್ಯಾಂಡಲ್ ಬಲ್ಬ್ ಅನ್ನು ನಿರಂತರವಾಗಿ ಉರಿಸಬೇಕು. ಇದರಿಂದ ಎಣ್ಣೆ ದೀಪ ಆರಿಹೋದರೂ, ವಿದ್ಯುತ್ ದೀಪದಿಂದ ನಿರಂತರವಾದ ಬೆಳಕು ಇರುತ್ತದೆ. ಇದು ಕೇವಲ ಧಾರ್ಮಿಕ ನಂಬಿಕೆಯಷ್ಟೇ ಅಲ್ಲ, ಇದರ ಹಿಂದೆ ವೈಜ್ಞಾನಿಕ ತತ್ವಗಳೂ ಇವೆ. ರಾತ್ರಿಯ ಸಮಯದಲ್ಲಿ ಮನೆಯು ಸಂಪೂರ್ಣ ಕತ್ತಲೆಯಲ್ಲಿ ಇರುವುದು ಸೂಕ್ತವಲ್ಲ. ಬಾಡಿಗೆ ಮನೆಯೇ ಆಗಿರಲಿ, ಸ್ವಂತ ಮನೆಯೇ ಆಗಿರಲಿ, ರಾತ್ರಿ ಹೊತ್ತು ಸಂಪೂರ್ಣ ಕತ್ತಲಾಗಿ ಇಡಬಾರದು. ಹಾಲ್‌ನಲ್ಲಿ ಅಥವಾ ದೇವರ ಗುಡಿಯಲ್ಲಿ ಕನಿಷ್ಠ ಒಂದು ಮಂದವಾದ ದೀಪ ಇರಬೇಕು.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ವೈಜ್ಞಾನಿಕವಾಗಿ ನೋಡಿದರೆ, ರಾತ್ರಿ ಎದ್ದು ನೀರು ಕುಡಿಯಲು ಹೋಗುವಾಗ ಕತ್ತಲಿನಲ್ಲಿ ನಡೆದು ಏನಾದರೂ ತಲೆ ಅಥವಾ ಕೈ-ಕಾಲುಗಳಿಗೆ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ವೃದ್ಧರಿಗೆ, ಮಕ್ಕಳಿಗೂ ಇದು ಅನ್ವಯಿಸುತ್ತದೆ. ಒಂದು ಮಂದವಾದ ದೀಪ ಇದ್ದರೆ, ಅನಿರೀಕ್ಷಿತ ಅಪಾಯಗಳನ್ನು ತಪ್ಪಿಸಬಹುದು ಮತ್ತು ರಾತ್ರಿ ಎದ್ದಾಗ ಮನಸ್ಸಿಗೆ ಒಂದು ಪ್ರಜ್ಞೆ ಮತ್ತು ಶಾಂತಿ ಇರುತ್ತದೆ. ಕತ್ತಲಿನಲ್ಲಿ ಏನೋ ತಾಗಿ ದುರಂತವಾಗುವುದನ್ನು ತಪ್ಪಿಸಬಹುದು. ಹೀಗಾಗಿ, ದೇವರ ಮನೆಯಲ್ಲಿ ಎಣ್ಣೆ ದೀಪದ ಜೊತೆಗೆ ನಿರಂತರವಾಗಿ ಒಂದು ಜೀರೋ ಕ್ಯಾಂಡಲ್ ಬಲ್ಬ್ ಅನ್ನು ಇರಿಸುವುದರಿಂದ ಧನಾತ್ಮಕ ಶಕ್ತಿಗಳು ಹರಿಯುವುದಲ್ಲದೆ, ಪ್ರಾಯೋಗಿಕವಾಗಿಯೂ ಹಲವಾರು ಅನುಕೂಲಗಳಿವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?