AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಅತಿಯಾಗಿ ನೀರನ್ನು ವ್ಯರ್ಥ ಮಾಡುವುದು ದಾರಿದ್ರ್ಯಕ್ಕೆ ಕಾರಣಬಹುದು!

ನೀರು ಜೀವಕ್ಕೆ ಆಧಾರವಾಗಿದ್ದು, ಪಂಚಭೂತಗಳಲ್ಲಿ ಒಂದಾಗಿದೆ. ಧಾರ್ಮಿಕವಾಗಿ ನೀರನ್ನು ದೈವ ಸ್ವರೂಪ ಮತ್ತು ಅಮೃತ ಎಂದು ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳು ಹಾಗೂ ಹುಟ್ಟು-ಸಾವುಗಳ ಆಚರಣೆಗಳಲ್ಲಿ ನೀರಿಗೆ ವಿಶೇಷ ಮಹತ್ವವಿದೆ. ಆದರೆ, ಅತಿಯಾಗಿ ನೀರನ್ನು ವ್ಯರ್ಥ ಮಾಡುವುದು ಅಥವಾ ಸ್ನಾನಕ್ಕೆ ಅತಿಯಾಗಿ ಬಳಸುವುದರಿಂದ ಮನೆಯಲ್ಲಿ ದಾರಿದ್ರ್ಯ ಉಂಟಾಗಬಹುದೆಂದು ಪುರಾಣಗಳು ತಿಳಿಸುತ್ತವೆ.

Daily Devotional: ಅತಿಯಾಗಿ ನೀರನ್ನು ವ್ಯರ್ಥ ಮಾಡುವುದು ದಾರಿದ್ರ್ಯಕ್ಕೆ ಕಾರಣಬಹುದು!
ನೀರಿನ ವ್ಯರ್ಥ
ಅಕ್ಷತಾ ವರ್ಕಾಡಿ
|

Updated on: Dec 13, 2025 | 10:15 AM

Share

ಅತಿಯಾಗಿ ನೀರನ್ನು ವ್ಯರ್ಥ ಮಾಡುವುದರಿಂದ ಆಗುವ ಪರಿಣಾಮವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಭಾರತೀಯ ಸಂಸ್ಕೃತಿಯಲ್ಲಿ ನೀರಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ನೀರನ್ನು ಕೇವಲ ಒಂದು ನೈಸರ್ಗಿಕ ಸಂಪನ್ಮೂಲವಾಗಿ ನೋಡದೆ, ದೈವ ಸ್ವರೂಪ ಮತ್ತು ಅಮೃತ ಎಂದು ಪರಿಗಣಿಸಲಾಗುತ್ತದೆ. ಪಂಚಭೂತಗಳಲ್ಲಿ ನೀರು ಪ್ರಮುಖ ಸ್ಥಾನ ಪಡೆದಿದೆ. ನಮ್ಮ ದೇಹದಲ್ಲೂ ನೀರಿನ ಅಂಶ ಅಧಿಕವಾಗಿದ್ದು, ನೀರಿಲ್ಲದೆ ಬದುಕಲು ಸಾಧ್ಯವಿಲ್ಲ. ನೀರಿನ ಧಾರ್ಮಿಕ ಮಹತ್ವವು ಪುರಾತನ ಕಾಲದಿಂದಲೂ ಗ್ರಂಥಗಳಲ್ಲಿ ಮತ್ತು ಪುರಾಣಗಳಲ್ಲಿ ಉಲ್ಲೇಖವಾಗಿದೆ. ಯಾವುದೇ ಶುಭಕಾರ್ಯ, ಗೃಹ ಪ್ರವೇಶ, ಅಥವಾ ಇತರೆ ಧಾರ್ಮಿಕ ಆಚರಣೆಗಳಲ್ಲಿ ನೀರನ್ನು ಪ್ರೋಕ್ಷಣೆ ಮಾಡುವುದು ಸಾಮಾನ್ಯ.

ಇಷ್ಟೆಲ್ಲಾ ಧಾರ್ಮಿಕ ಮಹತ್ವವಿದ್ದರೂ, ನೀರನ್ನು ಅತಿಯಾಗಿ ಉಪಯೋಗಿಸುವುದರಿಂದ ಅಥವಾ ವ್ಯರ್ಥ ಮಾಡುವುದರಿಂದ ದಾರಿದ್ರ್ಯ ಎದುರಾಗಬಹುದು ಎಂದು ಹಿರಿಯರು ಹೇಳುತ್ತಾರೆ. ಕೆಲವರು ಸ್ನಾನಕ್ಕೆ ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡು ಅತಿಯಾದ ನೀರನ್ನು ಬಳಸುತ್ತಾರೆ. ಇದು ಮನೆಗೆ ದಾರಿದ್ರ್ಯವನ್ನು ಆಹ್ವಾನಿಸುತ್ತದೆ ಎಂದು ನಂಬಲಾಗಿದೆ. ಸ್ತ್ರೀ ಪುರುಷರೆನ್ನದೆ ಯಾರೇ ಅತಿಯಾಗಿ ನೀರನ್ನು ಬಳಸಿದರೂ, ಅದು ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು. ನೀರು ಮೈಮೇಲೆ ಹೆಚ್ಚಾಗಿ ಉಳಿಯದಿದ್ದರೂ, ಅದರ ಅತಿಯಾದ ಬಳಕೆಯು ದಾರಿದ್ರ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಪುರಾಣಗಳು, ಇತಿಹಾಸ ಮತ್ತು ಹಿರಿಯರ ಅನುಭವಗಳು ತಿಳಿಸುತ್ತವೆ. ಮುಂದಿನ ಪೀಳಿಗೆಗೂ ಈ ಸಂದೇಶವನ್ನು ತಲುಪಿಸುವುದು ನಮ್ಮ ಕರ್ತವ್ಯ ಎಂದು ಗುರೂಜಿ ತಿಳಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಾಸ್ತು ಪ್ರಕಾರ ಫ್ರಿಡ್ಜ್ ಮೇಲೆ ಈ ವಸ್ತುಗಳನ್ನು ಇಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ

ನೀರಿನ ಬಳಕೆಯಲ್ಲಿ ಮಿತತ್ವ ಮತ್ತು ಹಿತತ್ವವನ್ನು ಕಾಪಾಡಿಕೊಳ್ಳಬೇಕು. ನೀರನ್ನು ಕುಡಿಯುವಾಗಲೂ ಧಾವಿಸಿ ಕುಡಿಯಬಾರದು. ನಿಧಾನವಾಗಿ, ಅಮೃತ ಎಂದು ಭಾವಿಸಿ ಕುಡಿಯುವುದರಿಂದ ದೇಹಕ್ಕೆ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ. ಕುಡಿಯುವಾಗ “ಅಮೃತೋಪಸ್ತ ಪರನಮಸಿ” ಎಂಬ ಮಂತ್ರವನ್ನು ಸ್ಮರಿಸಬಹುದು ಅಥವಾ ನೀರನ್ನು ಅಮೃತವೆಂದು ಭಾವಿಸಿ ಕುಡಿಯುವುದು ಉತ್ತಮ. ಇದು ಕೇವಲ ನೀರಿನ ಮಿತಬಳಕೆ ಮಾತ್ರವಲ್ಲದೆ, ಅದರ ಪಾವಿತ್ರವನ್ನು ಅರ್ಥಮಾಡಿಕೊಳ್ಳುವುದಾಗಿದೆ.

ಮನೆಯಲ್ಲಿ ನೀರನ್ನು ವ್ಯರ್ಥ ಮಾಡುವುದು, ಕೈ ತೊಳೆಯಲು, ಸ್ನಾನ ಮಾಡಲು ಅಥವಾ ಬಟ್ಟೆ ತೊಳೆಯಲು ಅತಿಯಾದ ನೀರನ್ನು ಬಳಸುವುದರಿಂದ ವ್ಯಕ್ತಿಗಳಿಗೆ ದಾರಿದ್ರ್ಯ, ಮಂಗು, ಕಂಟಕ ಮತ್ತು ದೋಷಗಳು ಎದುರಾಗಬಹುದು ಎಂದು ನಂಬಲಾಗಿದೆ. ನೀರು ಭೂಮಿಗೆ ಹೋಗಿ ಮರುಬಳಕೆಯಾಗುತ್ತದೆ ಎಂಬ ಕಾರಣ ನೀಡಿ ಅದನ್ನು ವ್ಯರ್ಥ ಮಾಡುವುದು ಸರಿಯಲ್ಲ. ಪ್ರತಿಯೊಬ್ಬರೂ ನೀರನ್ನು ದೈವ ಸಮಾನ ಎಂದು ಭಾವಿಸಿ, ಮಿತವಾಗಿ ಮತ್ತು ಹಿತವಾಗಿ ಬಳಸಬೇಕು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!