AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಸಮಯದಲ್ಲಿ ದೀಪ ಬೆಳಗುವವರು ಈ ನಿಯಮಗಳ ಪಾಲನೆ ಮಾಡಿ

ಹಿಂದೂ ಮನೆಗಳಲ್ಲಿ ಪೂಜೆಯ ಸಮಯದಲ್ಲಿ ದೀಪಗಳನ್ನು ಬೆಳಗಿಸುವ ಸಂಪ್ರದಾಯ ಈಗಲೂ ಇದೆ. ಆದರೆ ದೀಪಗಳನ್ನು ಬೆಳಗಿಸಲು ಕೆಲವು ನಿಯಮಗಳಿವೆ, ಹೆಚ್ಚಿನ ಜನರು ಆ ನಿಯಮಗಳನ್ನು ಅನುಸರಿಸುವುದಿಲ್ಲ, ಇದರಿಂದಾಗಿ ಅವರು ಪೂಜೆಯ ಶುಭ ಫಲಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮಾಡಿದ ಪೂಜೆಯ ಪೂರ್ಣ ಫಲಿತಾಂಶ ಪಡೆಯಲು, ದೀಪವನ್ನು ಬೆಳಗಿಸುವಾಗ ಅನುಸರಿಸಬೇಕಾದ ಕೆಲವು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಹೇಗೆ? ನಿಯಮಗಳೇನು? ಇಲ್ಲಿದೆ ಮಾಹಿತಿ.

ಪೂಜಾ ಸಮಯದಲ್ಲಿ ದೀಪ ಬೆಳಗುವವರು ಈ ನಿಯಮಗಳ ಪಾಲನೆ ಮಾಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 02, 2024 | 5:22 PM

Share

ಸನಾತನ ಸಂಸ್ಕ್ರತಿಯಲ್ಲಿ ದೀಪವನ್ನು ಬೆಳಗಿಸಲು ವಿಶೇಷ ಮಹತ್ವವಿದೆ. ಹಿಂದೂ ಧರ್ಮದಲ್ಲಿ, ಪ್ರಾಚೀನ ಕಾಲದಿಂದಲೂ ಪೂಜೆಯ ಸಮಯದಲ್ಲಿ ದೀಪಗಳನ್ನು ಬೆಳಗಿಸುವ ಸಂಪ್ರದಾಯವಿದೆ. ದೀಪಗಳನ್ನು ಬೆಳಗಿಸುವುದರೊಂದಿಗೆ ಪೂಜೆ ಪ್ರಾರಂಭವಾಗುತ್ತದೆ. ಪೂಜೆ ಯಾವುದೇ ಇರಲಿ, ಮೊದಲು ದೀಪವನ್ನು ಬೆಳಗಿಸಲಾಗುತ್ತದೆ ಮತ್ತು ನಂತರವೇ ಪೂಜೆ ಪ್ರಾರಂಭವಾಗುತ್ತದೆ. ದೀಪವನ್ನು ಬೆಳಗಿಸದ ಪೂಜೆಯು ಅಪೂರ್ಣ ಎನಿಸಿಕೊಳ್ಳುತ್ತದೆ. ಹಾಗಾಗಿ ಹಿಂದೂ ಮನೆಗಳಲ್ಲಿ ಪೂಜೆಯ ಸಮಯದಲ್ಲಿ ದೀಪಗಳನ್ನು ಬೆಳಗಿಸುವ ಸಂಪ್ರದಾಯ ಈಗಲೂ ಇದೆ. ಆದರೆ ದೀಪಗಳನ್ನು ಬೆಳಗಿಸಲು ಕೆಲವು ನಿಯಮಗಳಿವೆ, ಹೆಚ್ಚಿನ ಜನರು ಆ ನಿಯಮಗಳನ್ನು ಅನುಸರಿಸುವುದಿಲ್ಲ, ಇದರಿಂದಾಗಿ ಅವರು ಪೂಜೆಯ ಶುಭ ಫಲಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮಾಡಿದ ಪೂಜೆಯ ಪೂರ್ಣ ಫಲಿತಾಂಶ ಪಡೆಯಲು, ದೀಪವನ್ನು ಬೆಳಗಿಸುವಾಗ ಅನುಸರಿಸಬೇಕಾದ ಕೆಲವು ನಿಯಮಗಳನ್ನು ಕೂಡ ಪಾಲನೆ ಮಾಡಬೇಕಾಗುತ್ತದೆ. ಹೇಗೆ? ನಿಯಮಗಳೇನು? ಇಲ್ಲಿದೆ ಮಾಹಿತಿ.

ದೀಪ ಬೆಳಗಿಸುವ ನಿಯಮಗಳನ್ನು ತಿಳಿದುಕೊಳ್ಳಿ;

ಪೂಜೆಯ ಸಮಯದಲ್ಲಿ ಬೆಳಗುವ ದೀಪವು ಸ್ವಚ್ಛ ಮತ್ತು ಅಚ್ಚುಕಟ್ಟಾಗಿರಬೇಕು. ಏಕೆಂದರೆ ಕೆಲವರು ಮುರಿದ ಹಣತೆಗಳನ್ನು ದೀಪ ಹಚ್ಚಲು ಬಳಸುತ್ತಾರೆ. ಇದು ಶುಭವಲ್ಲ. ಪೂಜೆಯಲ್ಲಿ ಮುರಿದ ದೀಪವನ್ನು ಬಳಸುವುದು ಅಶುಭ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಈ ನಿಯಮವನ್ನು ಮರೆಯಬೇಡಿ. ಪೂಜೆಯ ಆರಂಭದಲ್ಲಿ ನೀವು ದೀಪವನ್ನು ಬೆಳಗಿಸಿದಾಗ, ದೀಪದಲ್ಲಿ ಸೂಕ್ತ ಪ್ರಮಾಣದ ತುಪ್ಪ ಅಥವಾ ಎಣ್ಣೆ ಇರುವಂತೆ ವಿಶೇಷ ಕಾಳಜಿ ವಹಿಸಿ, ಇದರಿಂದ ಪೂಜೆ ಮುಗಿಯುವ ಮೊದಲು ದೀಪವು ಆರಿ ಹೋಗುವುದಿಲ್ಲ. ಪೂಜೆಯ ಮಧ್ಯದಲ್ಲಿ ದೀಪವನ್ನು ಆರಿಸುವುದು ಕೆಟ್ಟ ಶಕುನ ಹಾಗಾಗಿ ತುಪ್ಪವಿರಲಿ ಅಥವಾ ಎಣ್ಣೆಯಿರಲಿ ಬೇಕಾಗುವಷ್ಟು ಪ್ರಮಾಣದಲ್ಲಿ ತೆಗೆದುಕೊಂಡು ದೀಪ ಹಚ್ಚಿ.

ಪೂಜಾ ದೀಪದ ಹೊರತಾಗಿ ಬೇರೆ ಯಾವುದೇ ದೀಪ ಅಥವಾ ಧೂಪವನ್ನು ಬೆಳಗಿಸಬಾರದು ಎಂದು ನಂಬಲಾಗಿದೆ. ಅಲ್ಲದೆ ಪೂಜೆಯ ಸಮಯದಲ್ಲಿ ತುಪ್ಪದ ದೀಪವನ್ನು ಬೆಳಗಿಸಿದ ನಂತರ, ತಕ್ಷಣವೇ ಮತ್ತೊಂದು ಎಣ್ಣೆ ದೀಪವನ್ನು ಬೆಳಗಿಸಬೇಡಿ. ದೀಪವನ್ನು ಯಾವಾಗಲೂ ಪೂಜಾ ಸ್ಥಳದ ಮಧ್ಯದಲ್ಲಿ ಅಥವಾ ದೇವರ ವಿಗ್ರಹದ ಮುಂದೆ ಇಡಬೇಕು.

ಇದನ್ನೂ ಓದಿ: ನಿತ್ಯ ದೇವರ ಪೂಜೆಯಲ್ಲಿ ಗೊಂಡೆ ಹೂವು ಬಳಸಿ, ಜತೆಗೆ ಅದರ ಮಹತ್ವ ತಿಳಿಯಿರಿ

ನೀವು ತುಪ್ಪದ ದೀಪವನ್ನು ಬೆಳಗಿಸಿದರೆ, ಅದನ್ನು ನಿಮ್ಮ ಎಡಭಾಗದಲ್ಲಿ ಇರಿಸಿ ಅಥವಾ ನೀವು ಎಣ್ಣೆ ದೀಪವನ್ನು ಬೆಳಗಿಸಿದರೆ, ಅದನ್ನು ನಿಮ್ಮ ಬಲಭಾಗದಲ್ಲಿ ಇರಿಸಿ. ಏಕೆಂದರೆ ಇದರಿಂದ ನಿಮಗೆ ಶುಭ ಫಲ ಪ್ರಾಪ್ತಿಯಾಗುತ್ತದೆ. ಇನ್ನು ಎಣ್ಣೆ ದೀಪದಲ್ಲಿ ಕೆಂಪು ಬತ್ತಿಯನ್ನು ಬಳಸುವುದು ಶುಭವೆಂದು ಪರಿಗಣಿಸಲಾಗಿದೆ ಹಾಗೂ ಮನೆಯಲ್ಲಿ ಬಳಸುವ ದೀಪಕ್ಕೆ ಹತ್ತಿಯ ಬತ್ತಿ ಸೂಕ್ತ ಎಂದು ಹೇಳಲಾಗುತ್ತದೆ. ಆದರೆ ಪೂಜಾ ಸ್ಥಳದಲ್ಲಿ ದೀಪವನ್ನು ಎಂದಿಗೂ ಪಶ್ಚಿಮ ದಿಕ್ಕಿನಲ್ಲಿ ಇಡಬಾರದು ಇದನ್ನು ಮರೆಯಬೇಡಿ. ಹಾಗೆ ಮಾಡುವುದರಿಂದ ಆರ್ಥಿಕ ನಷ್ಟವಾಗಬಹುದು ಎಂದು ಹೇಳಲಾಗುತ್ತದೆ. ಹಾಗಾಗಿ ಮೇಲೆ ಹೇಳಿರುವ ನಿಯಮಗಳನ್ನು ಸರಿಯಾಗಿ ಪಾಲಿಸಿ ನಿಮ್ಮ ಪೂಜಾ ಫಲವನ್ನು ಸಂಪೂರ್ಣವಾಗಿ ಪಡೆಯಿರಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:19 pm, Fri, 2 February 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು