AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಬ್ರಹ್ಮೋತ್ಸವ: ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ಬ್ಯಾನ್! ಗರುಡ ಸೇವೆಗೆ ಬಿಗಿ ಭದ್ರತೆ

ತಿರುಮಲ ಬ್ರಹ್ಮೋತ್ಸವದ ಪ್ರಯುಕ್ತ ಗರುಡ ಸೇವೆಗೆ ಭಕ್ತರ ದಟ್ಟಣೆ ಹೆಚ್ಚಿರುವುದರಿಂದ, ಸೆ. 18-20ರವರೆಗೆ ಘಾಟ್ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ಭಕ್ತರು ತಿರುಪತಿಯಲ್ಲಿ ವಾಹನ ನಿಲ್ಲಿಸಿ ಸಾರ್ವಜನಿಕ ಸಾರಿಗೆ ಬಳಸಬೇಕು. ಸಂಚಾರ ನಿಯಂತ್ರಣಕ್ಕೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಹಾಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸಹಕರಿಸುವಂತೆ TTD ಮನವಿ ಮಾಡಿದೆ.

ತಿರುಮಲ ಬ್ರಹ್ಮೋತ್ಸವ: ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ಬ್ಯಾನ್! ಗರುಡ ಸೇವೆಗೆ ಬಿಗಿ ಭದ್ರತೆ
ತಿರುಮಲ ಬ್ರಹ್ಮೋತ್ಸವ
ಅಕ್ಷತಾ ವರ್ಕಾಡಿ
|

Updated on:Sep 19, 2026 | 8:38 AM

Share

ತಿರುಪತಿ: ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳ ಜನಸಂದಣಿಯನ್ನು ನಿಯಂತ್ರಿಸಲು ತಿರುಮಲ ತಿರುಪತಿ ದೇವಸ್ಥಾನ (TTD) ಹಾಗೂ ಪೊಲೀಸ್ ಇಲಾಖೆ ಅತ್ಯಂತ ಪ್ರಮುಖ ನಿರ್ಧಾರ ಕೈಗೊಂಡಿದೆ. ಸಂಚಾರ ದಟ್ಟಣೆ ಹಾಗೂ ಭಕ್ತರ ಅನಾನುಕೂಲತೆಯನ್ನು ತಪ್ಪಿಸುವ ಉದ್ದೇಶದಿಂದ ಘಾಟ್ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಪ್ರವೇಶ ಸಂಪೂರ್ಣ ನಿಷೇಧ:

ಈ ತಿಂಗಳ 18ರ ರಾತ್ರಿ 9:00 ಗಂಟೆಯಿಂದ 20ರ ಬೆಳಿಗ್ಗೆ 6:00 ಗಂಟೆಯವರೆಗೆ ತಿರುಮಲದ ಎರಡೂ ಘಾಟ್ ರಸ್ತೆಗಳಲ್ಲಿ ಬೈಕ್ ಹಾಗೂ ಇತರ ದ್ವಿಚಕ್ರ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಬೆಟ್ಟಕ್ಕೆ ಬೈಕ್‌ಗಳಲ್ಲಿ ಬರುವ ಭಕ್ತರು ತಮ್ಮ ವಾಹನಗಳನ್ನು ಕೆಳಗಿನ ತಿರುಪತಿಯಲ್ಲಿಯೇ ನಿಲ್ಲಿಸಿ, ಪರ್ಯಾಯವಾಗಿ ಆರ್‌ಟಿಸಿ ಬಸ್ ಅಥವಾ ಇತರ ಸಾರ್ವಜನಿಕ ವಾಹನ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ TTD ಸ್ಪಷ್ಟಪಡಿಸಿದೆ.

ವೈಭವದ ‘ಗರುಡ ಸೇವೆ’ ಹಾಗೂ ಬಿಗಿ ಪೊಲೀಸ್ ಭದ್ರತೆ:

ಬ್ರಹ್ಮೋತ್ಸವದ ಅತ್ಯಂತ ನಿರ್ಣಾಯಕ ಹಾಗೂ ಪ್ರಮುಖ ಘಟ್ಟವಾದ ‘ಗರುಡ ಸೇವೆ’ ಈ ತಿಂಗಳ 19 ರಂದು ವಿಜೃಂಭಣೆಯಿಂದ ನಡೆಯಲಿದೆ. ಈ ಪವಿತ್ರ ದಿನದಂದು ಮಲಯಪ್ಪ ಸ್ವಾಮಿಯು ಗರುಡ ವಾಹನಾರೂಢನಾಗಿ ತಿರುಮಲದ ನಾಲ್ಕು ಮಾಡ ಬೀದಿಗಳಲ್ಲಿ ಉಲಾವಿ ಬರಲಿದ್ದು, ಈ ದಿವ್ಯ ದರ್ಶನಕ್ಕಾಗಿ ತೆಲುಗು ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭಾರೀ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಇದನ್ನೂ ಓದಿ: ಜಪಾನ್‌ನಲ್ಲಿದೆ ‘ಡಿವೋರ್ಸ್ ಟೆಂಪಲ್’: ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಆಸರೆಯಾಗುವ 700 ವರ್ಷ ಹಳೆಯ ಕ್ಷೇತ್ರ!

ವಿವಿಧ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ:

ದ್ವಿಚಕ್ರ ವಾಹನ ಸವಾರರಿಗಾಗಿ ತಿರುಪತಿಯ ಬಾಲಾಜಿ ಲಿಂಕ್ ಬಸ್ ನಿಲ್ದಾಣ, ನೆಹರು ಮುನ್ಸಿಪಲ್ ಮೈದಾನ, ಎಸ್‌ವಿ ವೈದ್ಯಕೀಯ ಕಾಲೇಜು ಮೈದಾನ ಮತ್ತು ಇಸ್ಕಾನ್ ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಚಕ್ರದ ವಾಹನಗಳಿಗೆ (ಕಾರ್/ವ್ಯಾನ್) ಅಲಿಪಿರಿ ಲಿಂಕ್ ಬಸ್ ನಿಲ್ದಾಣ, ಎಸ್‌ವಿ ವೈದ್ಯಕೀಯ ಕಾಲೇಜು ಮೈದಾನ, ಎಸ್‌ವಿ ಎಂಜಿನಿಯರಿಂಗ್ ಕಾಲೇಜು ಮೈದಾನ ಹಾಗೂ ಭಾರತೀಯ ವಿದ್ಯಾ ಭವನದಲ್ಲಿ ಜಾಗ ನಿಗದಿಪಡಿಸಲಾಗಿದೆ. ಇನ್ನು ಪ್ರವಾಸಿ ಬಸ್‌ಗಳನ್ನು ಮಾವಿನ ಮಾರುಕಟ್ಟೆ, ಟ್ರೈಡೆಂಟ್ ಮತ್ತು ದೇವಲೋಕ್ ಬಳಿ ನಿಲ್ಲಿಸಲು ಸೂಚಿಸಲಾಗಿದೆ.

ಸಂಚಾರ ಮಾರ್ಗ ಬದಲಾವಣೆ ಹಾಗೂ ಪೋಲಿಸ್ ಮನವಿ:

ವಿವಿಧ ನಗರಗಳಿಂದ ತಿರುಪತಿಗೆ ಆಗಮಿಸುವ ಬಸ್‌ಗಳ ಸಂಚಾರ ಮಾರ್ಗದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು, ಸಂಚಾರ ದಟ್ಟಣೆ ಹೆಚ್ಚಿರುವ ಸೂಕ್ಷ್ಮ ಪ್ರದೇಶಗಳನ್ನು ಮುಂಚಿತವಾಗಿಯೇ ಗುರುತಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಲಕಟ್ಲ ಬ್ರಹ್ಮೋತ್ಸವಗಳು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನೆರವೇರಲು ಭಕ್ತಾದಿಗಳು ಸಂಚಾರ ನಿಯಮಗಳನ್ನು ಪಾಲಿಸಿ, ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ತಿರುಪತಿ ಸಂಚಾರ ಪೊಲೀಸರು ವಿನಂತಿಸಿದ್ದಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:37 am, Sat, 19 September 26

Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ