AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ಇತಿಹಾಸ ಮತ್ತು ಉತ್ಪಾದನೆ: ಪವಿತ್ರ ಪ್ರಸಾದ ಕುರಿತು ಕುತೂಹಲಕಾರಿ ಸಂಗತಿಗಳು ಇಲ್ಲಿವೆ

Tirupati Laddu history, production: ಕೋಟ್ಯಾಂತರ ಭಕ್ತರನ್ನು ಹೊಂದಿರುವ, ಏಳುಬೆಟ್ಟಗಳ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನ ಪಡೆದವ್ರಿಗೆ ಪ್ರಸಾದವಾಗಿ ಸಿಗುವ ಲಡ್ಡು ಇದೀಗ ಭಾರೀ ಚರ್ಚೆಯಾಗುತ್ತಿದೆ. ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರವಿದ್ದ ಸಮಯದಲ್ಲಿ ತಿರುಪತಿ ದೇವಸ್ಥಾನದ ನೈವೇದ್ಯದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರುಬಾಬು ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೆಲ್ಲಾ ನಿಮಗೆ ತಿಳಿದಿರುವ ವಿಚಾರ. ಆದರೆ ಲಡ್ಡುವನ್ನೇ ಪ್ರಸಾದವಾಗಿ ನೀಡಿದ್ದು ಏಕೆ? ಲಡ್ಡುವಿನ ಇತಿಹಾಸವೇನು ಎಂಬ ಕುತೂಹಲಕಾರಿ ಸಂಗತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ.

ತಿರುಪತಿ ಲಡ್ಡು ಇತಿಹಾಸ ಮತ್ತು ಉತ್ಪಾದನೆ: ಪವಿತ್ರ ಪ್ರಸಾದ ಕುರಿತು ಕುತೂಹಲಕಾರಿ ಸಂಗತಿಗಳು ಇಲ್ಲಿವೆ
ಪವಿತ್ರ ತಿರುಪತಿ ಪ್ರಸಾದದ ಬಗ್ಗೆ ಕುತೂಹಲಕಾರಿ ಸಂಗತಿಗಳು
ಆಯೇಷಾ ಬಾನು
|

Updated on:Oct 01, 2024 | 12:25 PM

Share

ತಿರುಪತಿ ಎಂದಾಕ್ಷಣ ಕಣ್ಣಮುಂದೆ ಬರೋದು ಶ್ರೀವಾರಿಯ ಪ್ರಸಾದ ಲಡ್ಡು. ದೇವರ ದರ್ಶನ ಮಾಡಿ ಬಂದ ಪ್ರತಿಯೊಬ್ಬರೂ ಲಡ್ಡು ಸ್ವೀಕರಿಸದೆ ಮನೆಗೆ ಬರೋದಿಲ್ಲ. ಅಷ್ಟೇ ಏಕೆ ತಿರುಪತಿಗೆ ಸ್ನೇಹಿತರೋ, ಅಕ್ಕಪಕ್ಕದ ಮನೆಯವರೋ ಹೋಗುತ್ತಿದ್ದಾರೆಂದರೆ ನಮಗೂ ಒಂದೆರಡು ಲಡ್ಡು ತಂದುಕೊಡಿ ಅಂತಾರೆ. ಇನ್ನು ಎಷ್ಟೇ ಲಕ್ಷಾಂತರ ಭಕ್ತ ಸಮೂಹವಿದ್ದರೂ, ನೂಕುನುಗ್ಗಲಲ್ಲೇ ಕೆಲವೇ ನಿಮಿಷಗಳಿಗಾದರೂ ತಿಮ್ಮಪ್ಪನ ದರ್ಶನ ಮಾಡಬೇಕೆಂಬ ಹಂಬಲದಲ್ಲಿ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಲಡ್ಡು ಇಲ್ಲದೆ ತೀರ್ಥಯಾತ್ರೆ ಅಪೂರ್ಣ ಎಂಬಂತೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಲಡ್ಡು ಪ್ರಸಾದ ಖರೀದಿಸುತ್ತಾರೆ. ಆದರೆ ಇತ್ತೀಚೆಗೆ ಎದ್ದ ಆ ಆರೋಪವೊಂದು ಭಕ್ತರ ನಂಬಿಕೆಯನ್ನು ಘಾಸಿಗೊಳಿಸಿದೆ, ಆಘಾತ ತಂದಿದೆ, ನೋವುಂಟು ಮಾಡಿದೆ. ಆಧುನಿಕ ಯುಗದಲ್ಲಿ ಮುಟ್ಟಿದ್ದೆಲ್ಲಾ ಕಲಬೆರಕೆ ಎಂಬಂತಾಗಿದೆ. ಅನ್ನ ಮಾಡುವ ಅಕ್ಕಿ, ಮೊಟ್ಟೆಯಿಂದ ಹಿಡಿದು ಮಸಾಲೆ ಪದಾರ್ಥಗಳು, ಹಣ್ಣು, ದಿನ ನಿತ್ಯ ಬಳಕೆ ವಸ್ತುಗಳಲ್ಲಿ ಬಹುತೇಕ ಎಲ್ಲವೂ ಕಲಬೆರಕೆಯಾಗಿಬಿಟ್ಟಿದೆ. ಕಲಬೆರಕೆ ಇಲ್ಲದ ಪದಾರ್ಥಗಳನ್ನು ಕಂಡುಹಿಡಿಯುವುದೇ ಕಷ್ಟವಾಗಿದೆ. ಇತ್ತ ಪವಿತ್ರ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಲಾದ ತುಪ್ಪವೇ ಕಲಬೆರಕೆಯಾಗಿತ್ತು ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇದರಿಂದಾಗಿ ಪವಿತ್ರ, ಭಕ್ತಿ ಪ್ರಧಾನ ಲಡ್ಡುವಿನಲ್ಲಿ ದನ, ಹಂದಿಯ ಕೊಬ್ಬಿನ ಅಂಶ, ಮೀನಿನ ಎಣ್ಣೆ ಅಂಶ ಇರುವುದು ಪತ್ತೆಯಾಗಿದೆ. 1857ರಲ್ಲಿ ಈಸ್ಟ್ ಇಂಡಿಯಾ ಕಂಪನಿಯು ತನ್ನ ಭಾರತೀಯ ಯೋಧರಿಗೆ ಬಂದೂಕುಗಳನ್ನು ನೀಡಿತ್ತು. ಅದರಲ್ಲಿ ಬಳಸುವ ಗುಂಡುಗಳಿಗೆ ಆಕಳು, ಹಂದಿ ಮಾಂಸದ ಕೊಬ್ಬು ಹಚ್ಚಲಾಗಿದೆ ಎಂಬ ಮಾತು ಯೋಧರ ಕಿವಿಗೆ ಕಾದ ಸೀದಂತೆ ಬಿದ್ದಾಗ ಸಹಜವಾಗಿಯೇ ಅದು ಸಿಪಾಯಿ ದಂಗೆಗೆ ಕಾರಣವಾಗಿತ್ತು. ಇದೀಗ ತಿರುಪತಿ ಲಡ್ಡು...

Published On - 1:33 pm, Mon, 30 September 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು