AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astro Tips For Money: ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಲಕ್ಷ್ಮಿ ಕಟಾಕ್ಷಕ್ಕಾಗಿ ಪ್ರತಿ ದಿನ ಈ ಕೆಲಸಗಳನ್ನು ಮಾಡಿ ನೋಡಿ

ಮನೆಯ ಮುಖ್ಯ ಬಾಗಿಲಿಗೆ ವಿಶೇಷ ಸ್ಥಾನವಿದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಮನೆಯ ಮುಂದೆ ರಂಗೋಲಿ ಹಾಕುವುದು ಮಾತ್ರವಲ್ಲ.. ಸಂಜೆ ಮನೆಯ ಮುಖ್ಯದ್ವಾರದಲ್ಲಿ ತುಪ್ಪದ ದೀಪವನ್ನು ಹಚ್ಚಿ. ಲಕ್ಷ್ಮಿ ದೇವಿಯು ಈ ಪರಿಹಾರದಿಂದ ಬೇಗನೆ ಸಂತೋಷಪಡುತ್ತಾಳೆ. ಅದು ಸದಾ ಸಿರಿ ಸಂಪತ್ತನ್ನು ಕೊರತೆಯಿಲ್ಲದೆ ಅನುಗ್ರಹಿಸುವಂತಾಗುತ್ತದೆ.

Astro Tips For Money: ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಲಕ್ಷ್ಮಿ ಕಟಾಕ್ಷಕ್ಕಾಗಿ ಪ್ರತಿ ದಿನ ಈ ಕೆಲಸಗಳನ್ನು ಮಾಡಿ ನೋಡಿ
ಲಕ್ಷ್ಮಿ ಕಟಾಕ್ಷಕ್ಕಾಗಿ ಪ್ರತಿ ದಿನ ಈ ಕೆಲಸಗಳನ್ನು ಮಾಡಿ ನೋಡಿ
ಸಾಧು ಶ್ರೀನಾಥ್​
|

Updated on: Sep 23, 2023 | 6:06 AM

Share

ಲಕ್ಷ್ಮಿ ದೇವಿಯು ಹಿಂದೂ ಧರ್ಮದಲ್ಲಿ ಸಂಪತ್ತಿನ ಅಧಿದೇವತೆ. ಸಿರಿ-ಸಂಪತ್ತು, ಖ್ಯಾತಿ ಮತ್ತು ಸಂತೋಷದ ದೇವತೆ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದಲೇ ಶ್ರೀಮಂತಿಕೆ ನೀಡುವ ಲಕ್ಷ್ಮಿ ದೇವಿಯ ಆರಾಧನೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಲಕ್ಷ್ಮಿ ದೇವಿಯ ಆಶೀರ್ವಾದ ಹೊಂದಿರುವ ಜನರು ಸಂಪತ್ತಿನ ಕೊರತೆ ಮತ್ತು ಸಂತೋಷದ ಜೀವನವನ್ನು ಹೊಂದಿರುತ್ತಾರೆ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು, ತಾಯಿಯನ್ನು ಮೆಚ್ಚಿಸಲು ಎಲ್ಲರೂ ಜ್ಯೋತಿಷ್ಯಶಾಸ್ತ್ರದ ಪ್ರಕಾರ ವಿವಿಧ ಪರಿಹಾರಗಳನ್ನು ಮಾಡುತ್ತಲೇ ಇರುತ್ತಾರೆ. ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಹಲವಾರು ಕ್ರಮಗಳನ್ನು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಇಂದು ನಾವು ಕೆಲವು ದೈನಂದಿನ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಲಕ್ಷ್ಮಿ ದೇವಿಯನ್ನು ಹೇಗೆ ಸಂತೋಷಪಡಿಸಬೇಕು ಎಂಬುದನ್ನು ಕಲಿಯೋಣ.

ಬೆಳಿಗ್ಗೆ ನೀವು ಎದ್ದಾಗ ಮನೆಯ ಮುಂಬಾಗಿಲನ್ನು ತೊಳೆಯಿರಿ

ನಂಬಿಕೆಗಳ ಪ್ರಕಾರ ಲಕ್ಷ್ಮಿ ದೇವಿಯು ಸ್ವಚ್ಛತೆಯನ್ನು ಪ್ರೀತಿಸುತ್ತಾಳೆ. ಲಕ್ಷ್ಮಿ ದೇವಿಯು ಶುದ್ಧವಾದ ಮನೆಯಲ್ಲಿ ಮಾತ್ರ ನೆಲೆಸುತ್ತಾಳೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ದ್ವಾರ ತುಂಬಾ ಸ್ವಚ್ಛವಾಗಿರಬೇಕು. ಅಂತಹ ಸಂದರ್ಭಗಳಲ್ಲಿ, ನೀವು ಪ್ರತಿದಿನ ಬೆಳಿಗ್ಗೆ ಎದ್ದಾಗ ದೇವರನ್ನು ಸ್ಮರಿಸಬೇಕು ಮತ್ತು ನಿಮ್ಮ ಮನೆಯ ಮುಂಭಾಗವನ್ನು ನೀರಿನಿಂದ ಸ್ವಚ್ಛಗೊಳಿಸಬೇಕು. ಅದರ ನಂತರ ರಂಗೋಲಿಯಿಂದ ಅಲಂಕರಿಸಿ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಲಕ್ಷ್ಮೀದೇವಿಯು ಶೀಘ್ರವಾಗಿ ಸಂತೋಷಪಡುತ್ತಾಳೆ. ಆ ಮನೆಯಲ್ಲಿ ಸದಾ ಸುಖವಿರುತ್ತದೆ.

ಮುಖ್ಯ ದ್ವಾರದಲ್ಲಿ ದೀಪವಿಡಿ

ಮನೆಯ ಮುಖ್ಯ ಬಾಗಿಲಿಗೆ ವಿಶೇಷ ಸ್ಥಾನವಿದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಮನೆಯ ಮುಂದೆ ರಂಗೋಲಿ ಹಾಕುವುದು ಮಾತ್ರವಲ್ಲ.. ಸಂಜೆ ಮನೆಯ ಮುಖ್ಯದ್ವಾರದಲ್ಲಿ ತುಪ್ಪದ ದೀಪವನ್ನು ಹಚ್ಚಿ. ಲಕ್ಷ್ಮಿ ದೇವಿಯು ಈ ಪರಿಹಾರದಿಂದ ಬೇಗನೆ ಸಂತೋಷಪಡುತ್ತಾಳೆ. ಅದು ಸದಾ ಸಿರಿ ಸಂಪತ್ತನ್ನು ಕೊರತೆಯಿಲ್ಲದೆ ಅನುಗ್ರಹಿಸುವಂತಾಗುತ್ತದೆ.

ತುಳಸಿ ಪೂಜೆ

ಲಕ್ಷ್ಮಿ ದೇವತೆ ಮತ್ತು ಭಗವಾನ್ ವಿಷ್ಣುವಿಗೆ ಬಹಳ ಪ್ರಿಯವಾದುದು ತುಳಸಿ. ಈ ತುಳಸಿ ಗಿಡವನ್ನು ನಿಯಮಿತವಾಗಿ ಪೂಜಿಸುವ ಮನೆಗಳಲ್ಲಿ ಲಕ್ಷ್ಮಿ ದೇವಿ ಸದಾ ನೆಲೆಸುತ್ತಾಳೆ ಎಂಬುದು ನಂಬಿಕೆ. ಪ್ರತಿದಿನ ಬೆಳಗ್ಗೆ ತುಳಸಿ ಗಿಡಕ್ಕೆ ನೀರು ಅರ್ಪಿಸಿ, ಸಂಜೆ ತುಪ್ಪದ ದೀಪ ಹಚ್ಚುವುದರಿಂದ ಮನೆಗೆ ಸುಖ ಸಂಪತ್ತು ಬರುತ್ತದೆ.

ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ..

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ ದೇವರಿಗೆ ನಿಯಮಿತವಾಗಿ ಅರ್ಘ್ಯವನ್ನು ಅರ್ಪಿಸುವವರ ಮನೆಗ ಸಂತೋಷ, ಸಮೃದ್ಧಿ ಮತ್ತು ಕೀರ್ತಿಯಿಂದ ತುಂಬಿರುತ್ತವೆ. ಸೂರ್ಯನಿಗೆ ಪ್ರತಿದಿನ ನೀರನ್ನು ಅರ್ಪಿಸುವುದರಿಂದ ಜಾತಕದಲ್ಲಿ ಸೂರ್ಯನ ಸ್ಥಾನವು ಬಲಗೊಳ್ಳುತ್ತದೆ.

Also read: ಮನೆಯಲ್ಲಿ ಆರ್ಥಿಕ ಮುಗ್ಗಟ್ಟು ಕಾಡುತ್ತಿದೆಯಾ? ಪೂಜಾ ಕೋಣೆಯಲ್ಲಿ ಈ 6 ವಸ್ತುಗಳನ್ನು ಇಟ್ಟರೆ ಲಕ್ಷ್ಮಿಕಟಾಕ್ಷ ಖಚಿತ

ಹಣೆಯ ಮೇಲೆ ಕುಂಕುಮ:

ವೈದಿಕ ಜ್ಯೋತಿಷ್ಯದ ಪ್ರಕಾರ ಪ್ರತಿದಿನ ಬೆಳಿಗ್ಗೆ ಪೂಜೆಯ ನಂತರ ಹಣೆಯ ಮೇಲೆ ಕುಂಕುಮವನ್ನು ಹಚ್ಚಬೇಕು. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಬೆಳಗಿನ ಪೂಜೆಯ ನಂತರ ಹಣೆಯ ಮೇಲೆ ತಿಲಕವನ್ನು ಧರಿಸುವುದು ಲಕ್ಷ್ಮಿ ದೇವಿಯನ್ನು ಮೆಚ್ಚಿಸುತ್ತದೆ.

ಹೆಚ್ಚಿನ ಆಧ್ಯಾತ್ಮಿಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

(ಗಮನಿಸಿ: ಇಲ್ಲಿ ನೀಡಿರುವ ಮಾಹಿತಿಯು ನಂಬಿಕೆಯನ್ನು ಆಧರಿಸಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಜನರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಇಲ್ಲಿ ಒದಗಿಸಿದ್ದೇವೆ)

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ