AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಾನ್ ಚಾಲೀಸಾ ಪಾರಾಯಣ ಆರಂಭಿಸಿದ ಟಿಟಿಡಿ; 4 ರಾಜ್ಯಗಳಲ್ಲಿ ರಥೋತ್ಸವ

ಸಮಾಜದ ಕಲ್ಯಾಣಕ್ಕಾಗಿ ಕೈಗೊಂಡಿರುವ ಈ ಹನುಮಾನ್ ಚಾಲೀಸಾ ಪ್ರಚಾರ ರಥಗಳು ಜನವರಿ 2024 ರವರೆಗೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಸ ಮಾಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಟಿಟಿಡಿ ರೂ. 1.5 ಕೋಟಿ ಮಂಜೂರು ಮಾಡಲಾಗಿದ್ದು, ಎಲ್ಲಾ ರಥಗಳಲ್ಲಿ ಐದು ಲಕ್ಷ ಹನುಮಾನ್ ಚಾಲೀಸಾ ಪುಸ್ತಕಗಳು ಮತ್ತು ಹ್ಯಾಂಡ್ ಬಿಲ್‌ಗಳಿವೆ.

ಹನುಮಾನ್ ಚಾಲೀಸಾ ಪಾರಾಯಣ ಆರಂಭಿಸಿದ ಟಿಟಿಡಿ; 4 ರಾಜ್ಯಗಳಲ್ಲಿ ರಥೋತ್ಸವ
ಹನುಮಾನ್ ಚಾಲೀಸಾ
Follow us
ನಯನಾ ಎಸ್​ಪಿ
|

Updated on: Aug 22, 2023 | 3:05 PM

ಪ್ರಸಿದ್ಧ ತಿರುಪತಿ ದೇವಾಲಯ (Tirumala Tirupathi Devasthanams) ಮತ್ತೊಂದು ಅದ್ಧೂರಿ ಕಾರ್ಯಕ್ರಮಕ್ಕೆ ಕೈ ಹಾಕಿದೆ. ರಾಮ ಭಕ್ತ ಹನುಮಂತನನ್ನು ಭಕ್ತಿಯಿಂದ ಪೂಜಿಸಲು ಹನುಮಾನ್ ಚಾಲೀಸಾ (Hanuman Chalisa) ಪಠಿಸಲಾಗುವುದು. ಹನುಮಾನ್ ಚಾಲೀಸಾ ಪಠಣ ಪ್ರಚಾರಕ್ಕಾಗಿ ರಥಗಳು ದಕ್ಷಿಣದ ಕೆಲವು ರಾಜ್ಯಗಳಲ್ಲಿ ಸಂಚರಿಸಲಿವೆ. ಇದು ಎಸ್ ವಿ ವಿಶ್ವವಿದ್ಯಾಲಯದ ಉಪಕ್ರಮವಾಗಿ ಕೈಗೊಳ್ಳಲಾಗಿದೆ. ಟಿಟಿಡಿಯ ಶ್ರೀ ಹನುಮಾನ್ ದೀಕ್ಷಾ ಪೀಠದ ಆಶ್ರಯದಲ್ಲಿ ದಕ್ಷಿಣ ರಾಜ್ಯಗಳ ಪ್ರವಾಸ ಮಾಡುವುದಾಗಿ ಟಿಟಿಡಿ ಅಧಿಕಾರಿ ತಿಳಿಸಿದ್ದಾರೆ. ಸಮಾಜದ ಸ್ವಾಸ್ಥ್ಯದ ಆಶಯದೊಂದಿಗೆ ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಈ ಪಾರಾಯಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸಮಾಜದ ಕಲ್ಯಾಣಕ್ಕಾಗಿ ಕೈಗೊಂಡಿರುವ ಈ ಹನುಮಾನ್ ಚಾಲೀಸಾ ಪ್ರಚಾರ ರಥಗಳು ಜನವರಿ 2024 ರವರೆಗೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಸ ಮಾಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಟಿಟಿಡಿ ರೂ. 1.5 ಕೋಟಿ ಮಂಜೂರು ಮಾಡದೆ. ಎಲ್ಲಾ ರಥಗಳಲ್ಲಿ ಐದು ಲಕ್ಷ ಹನುಮಾನ್ ಚಾಲೀಸಾ ಪುಸ್ತಕಗಳು ಮತ್ತು ಹ್ಯಾಂಡ್ ಬಿಲ್‌ಗಳಿವೆ. ನಾಲ್ಕು ರಾಜ್ಯಗಳಲ್ಲಿ ನಡೆಯುವ ರಥಯಾತ್ರೆಯಲ್ಲಿ ಭಕ್ತರಿಗೆ ಹನುಮಾನ್ ಚಾಲೀಸಾ ವಿತರಿಸಲಾಗುವುದು ಎಂದು ಟಿಟಿಡಿ ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಸದಾ ಭಾರ್ಗವಿ ತಿಳಿಸಿದ್ದಾರೆ. ಹನುಮಂತನ ಮಹಿಮೆ, ಶ್ರೀ ಆಂಜನೇಯ ಸ್ವಾಮಿಯ ಜನ್ಮಸ್ಥಳ ಮತ್ತು ಇತರ ಕಾರ್ಯಕ್ರಮಗಳನ್ನು ಜನಪ್ರಿಯಗೊಳಿಸಲು ಟಿಟಿಡಿ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು.

ಹನುಮಂತನ ದರ್ಶನದ ನಂತರ ತುಳಸೀದಾಸರು ಬರೆದ ಹನುಮಾನ್ ಚಾಲೀಸವನ್ನು ಸ್ತುತಿಸಿ ಪಠಿಸುತ್ತಾರೆ. ಕೇಸರಿನಂದನನನ್ನು ಪೂಜಿಸಿದರೆ ಸಕಲ ದೇವತೆಗಳನ್ನು ಪೂಜಿಸಿದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ.

40 ದಿನಗಳ ಕಾಲ ದಿನಕ್ಕೆ 11 ಬಾರಿ ಚಾಲೀಸಾವನ್ನು ಪಠಿಸಿ ಹನುಮಂತನಿಗೆ ಪ್ರತಿದಿನ ಅಭಿಷೇಕ ಮಾಡಿ ಸಿಂಧೂರವನ್ನು ಇಟ್ಟರೆ ಹನುಮಂತ ಭಕ್ತರಿಗೆ ವರವನ್ನು ನೀಡುತ್ತಾನೆ ಮತ್ತು ಅವರ ಇಷ್ಟಾರ್ಥಗಳನ್ನು ಪೂರೈಸುತ್ತಾನೆ ಮತ್ತು ಗ್ರಹದೋಷಗಳನ್ನು ತೊಡೆದುಹಾಕುತ್ತಾನೆ ಎಂದು ನಂಬಲಾಗಿದೆ. ಮದುವೆಯಾಗದವರು ಹನುಮಾನ್ ಚಾಲೀಸಾ ಪಠಿಸುವುದರಿಂದ ವಿವಾಹವಾಗುತ್ತದೆ. ಆಂಜನೇಯನ ಅನುಗ್ರಹದಿಂದ ಉದ್ಯೋಗ, ಆರೋಗ್ಯ, ಗ್ರಹದೋಷ ಮತ್ತು ನೆಮ್ಮದಿ ನಿಮ್ಮದಾಗುತ್ತದೆ.

ಇದನ್ನೂ ಓದಿ: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

ಯಾವುದೇ ಕೋರಿಕೆ ಈಡೇರಲು ಅಥವಾ ಗ್ರಹದೋಷ ಹೋಗಲಾಡಿಸಲು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸವನ್ನು 21 ದಿನಗಳ ಕಾಲ ಪ್ರತಿದಿನ ಪಠಿಸಬೇಕು.

ಮದುವೆಯಾಗಲು ಅಥವಾ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರು 40 ದಿನಗಳ ಕಾಲ ಹನುಮಾನ್ ಚಾಲೀಸಾವನ್ನು ಪಠಿಸಬೇಕು ಮತ್ತು ದೇವಾಲಯದಲ್ಲಿ 21 ಪ್ರದಕ್ಷಿಣೆಗಳನ್ನು ಹಾಕಬೇಕು.

ಸುಂದರಕಾಂಡದ ಪಾರಾಯಣವನ್ನು ಓದುವುದರಿಂದ ಕುಟುಂಬದಲ್ಲಿ ಸಂತೋಷ ಮನೆಮಾಡುತ್ತದೆ.

ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ ದಿನಕ್ಕೆ 11 ಬಾರಿ ಹನುಮಾನ್ ಚಾಲೀಸಾವನ್ನು ನಿಯಮಿತವಾಗಿ ಪಠಿಸುವುದರಿಂದ ಉತ್ತಮ ಫಲಿತಾಂಶ ನೀಡುತ್ತದೆ.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್