AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ

ಬೇಸಿಗೆ ರಜೆಯಲ್ಲಿ ತಿರುಮಲ ಭಕ್ತರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು TTD ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ SSD ಟೋಕನ್‌ಗಳು ಮತ್ತು VIP ದರ್ಶನಗಳನ್ನು ರದ್ದುಗೊಳಿಸಿ, ಭಕ್ತರು 8-12 ಗಂಟೆಗಳಲ್ಲಿ ದರ್ಶನ ಪಡೆಯಲು ಅವಕಾಶ ನೀಡುವ ಯೋಜನೆಯಿದೆ. ಇದರಿಂದ ಪ್ರತಿದಿನ 80,000 ಭಕ್ತರಿಗೆ ಸುಲಭ ದರ್ಶನ ಸಾಧ್ಯವಾಗಲಿದೆ. ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ದರೆ, ಹೊರಡುವ ಮುನ್ನ ಟಿಟಿಡಿಯ ಅಧಿಕೃತ ಪ್ರಕಟಣೆಗಳನ್ನು ಗಮನಿಸುವುದು ಸೂಕ್ತ.

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ
Ttd New Darshan Rules
ಅಕ್ಷತಾ ವರ್ಕಾಡಿ
|

Updated on: Apr 14, 2026 | 5:51 PM

Share

ತಿರುಮಲ: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀವಾರಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜನದಟ್ಟಣೆಯನ್ನು ನಿಯಂತ್ರಿಸಲು ದರ್ಶನ ನೀತಿಯಲ್ಲಿ ಬದಲಾವಣೆ ತರಲಾಗುತ್ತಿದೆ.

ಮೇ 1 ರಿಂದ ಎಸ್‌ಎಸ್‌ಡಿ (SSD) ಟೋಕನ್‌ ಸ್ಥಗಿತ?

ಪ್ರಸ್ತುತ ಜಾರಿಯಲ್ಲಿರುವ ಸ್ಲಾಟೆಡ್ ಸರ್ವ ದರ್ಶನ (SSD) ಟೋಕನ್‌ಗಳ ಮೂಲಕ ದರ್ಶನ ಪಡೆಯಲು ಭಕ್ತರು ಸುಮಾರು 23 ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮೇ 1 ರಿಂದ ಎಸ್‌ಎಸ್‌ಡಿ ಟೋಕನ್‌ಗಳು ಹಾಗೂ ವಿಐಪಿ ಬ್ರೇಕ್ ದರ್ಶನಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ಟಿಟಿಡಿ ಯೋಜಿಸುತ್ತಿದೆ. ಇದರಿಂದಾಗಿ ಸಾಮಾನ್ಯ ಭಕ್ತರು 8 ರಿಂದ 12 ಗಂಟೆಗಳ ಒಳಗೆ ದರ್ಶನ ಪಡೆಯಲು ಸಾಧ್ಯವಾಗಲಿದೆ.

ವೈಕುಂಠ ಏಕಾದಶಿ ಮಾದರಿಯ ಹೊಸ ನೀತಿ:

ಸಾಮಾನ್ಯವಾಗಿ ಪ್ರತಿದಿನ ವಿಐಪಿ ಬ್ರೇಕ್ ದರ್ಶನಗಳಿಗಾಗಿಯೇ 2 ರಿಂದ 3 ಗಂಟೆಗಳ ಸಮಯ ವ್ಯಯವಾಗುತ್ತಿದೆ. ಒಂದು ವೇಳೆ ಈ ವಿಐಪಿ ದರ್ಶನಗಳನ್ನು ರದ್ದುಗೊಳಿಸಿದರೆ, ಆ ಸಮಯದಲ್ಲಿ ಹೆಚ್ಚುವರಿಯಾಗಿ 15 ಸಾವಿರ ಸಾಮಾನ್ಯ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸಬಹುದು ಎಂಬುದು ಅಧಿಕಾರಿಗಳ ಲೆಕ್ಕಾಚಾರ. ವೈಕುಂಠ ಏಕಾದಶಿಯ ಸಂದರ್ಭದಲ್ಲಿ ಅನುಸರಿಸುವ ‘ಏಕ ಮಾದರಿ ದರ್ಶನ’ ವ್ಯವಸ್ಥೆಯನ್ನು ಮೇ, ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ದರ್ಶನದ ವೇಗ ಹೆಚ್ಚಿಸಲು ಟಿಟಿಡಿ ಕ್ರಮಗಳು:

ಕಳೆದ ಮೂರು ವರ್ಷಗಳ ಅಂಕಿಅಂಶಗಳ ಪ್ರಕಾರ, ಬೇಸಿಗೆಯ ಪ್ರತಿ ತಿಂಗಳು ಸುಮಾರು 23 ಲಕ್ಷ ಭಕ್ತರು ತಿರುಮಲಕ್ಕೆ ಭೇಟಿ ನೀಡುತ್ತಾರೆ. ಈ ಭಾರೀ ದಟ್ಟಣೆಯನ್ನು ನಿರ್ವಹಿಸಲು ಟಿಟಿಡಿ ಈ ಕೆಳಗಿನ ಕ್ರಮಗಳನ್ನು ಪರಿಗಣಿಸುತ್ತಿದೆ. ವಿವಿಧ ವರ್ಗದ ದರ್ಶನಗಳನ್ನು ಬದಿಗಿಟ್ಟು ಎಲ್ಲರಿಗೂ ಒಂದೇ ಮಾದರಿಯ ದರ್ಶನ ವ್ಯವಸ್ಥೆ ಕಲ್ಪಿಸುವುದು. ವಿಐಪಿ ಪ್ರೋಟೋಕಾಲ್ ದರ್ಶನಗಳನ್ನು ಕಡಿತಗೊಳಿಸುವ ಮೂಲಕ ದರ್ಶನದ ವೇಗವನ್ನು ಹೆಚ್ಚಿಸುವುದು. ಹೊಸ ನೀತಿಯಿಂದ ದಿನಕ್ಕೆ ಸರಿಸುಮಾರು 80 ಸಾವಿರ ಜನರಿಗೆ ಸುಲಭವಾಗಿ ದರ್ಶನ ಒದಗಿಸಬಹುದು ಎಂದು ಅಂದಾಜಿಸಲಾಗಿದೆ.

ತಿರುಮಲದಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಸುಸ್ತಾಗುವ ಸಾಮಾನ್ಯ ಭಕ್ತರಿಗೆ ನೆಮ್ಮದಿ ನೀಡಲು ಟಿಟಿಡಿ ಈ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ದರೆ, ಹೊರಡುವ ಮುನ್ನ ಟಿಟಿಡಿಯ ಅಧಿಕೃತ ಪ್ರಕಟಣೆಗಳನ್ನು ಗಮನಿಸುವುದು ಸೂಕ್ತ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು