AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulasi Puja: ಮನೆಯಲ್ಲಿ ತುಳಸಿ ಪೂಜೆ ಮಾಡಿದ್ರೂ ನೆಮ್ಮದಿ ಇಲ್ವಾ? ಹಾಗಾದ್ರೆ ನೀವು ತಿಳಿಯದೇ ಮಾಡ್ತಿರೋ ಈ ತಪ್ಪುಗಳೇ ಕಾರಣ!

ನಮ್ಮ ಸನಾತನ ಧರ್ಮದಲ್ಲಿ ತುಳಸಿಗೆ ದೈವಿಕ ಸ್ಥಾನವಿದೆ. ಎಷ್ಟೇ ಪೂಜಿಸಿದರೂ ಮನೆಯಲ್ಲಿ ನೆಮ್ಮದಿ ಇಲ್ಲದಿದ್ದರೆ, ಅದು ತುಳಸಿ ಬಳಿ ಮಾಡುವ ಕೆಲವು ತಪ್ಪುಗಳಿಂದಾಗಿರಬಹುದು. ಶುದ್ಧತೆಯ ಜಾಗದಲ್ಲಿ ಅಶುದ್ಧತೆ ಪ್ರವೇಶಿಸಿದರೆ ದೇವರ ಕೃಪೆ ಕಡಿಮೆಯಾಗುತ್ತದೆ ಎಂದು ಧರ್ಮಶಾಸ್ತ್ರಗಳು ಎಚ್ಚರಿಸುತ್ತವೆ. ಹಾಗಾದರೆ, ತುಳಸಿ ಗಿಡದ ಬಳಿ ಯಾವ ತಪ್ಪುಗಳನ್ನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ.

Tulasi Puja: ಮನೆಯಲ್ಲಿ ತುಳಸಿ ಪೂಜೆ ಮಾಡಿದ್ರೂ ನೆಮ್ಮದಿ ಇಲ್ವಾ? ಹಾಗಾದ್ರೆ ನೀವು ತಿಳಿಯದೇ ಮಾಡ್ತಿರೋ ಈ ತಪ್ಪುಗಳೇ ಕಾರಣ!
ತುಳಸಿ ಪೂಜೆImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 19, 2026 | 9:12 AM

Share

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಹಾಗೂ ದೈವಿಕ ಸ್ಥಾನವಿದೆ. ಪ್ರತಿ ಮನೆಯ ಅಂಗಳದಲ್ಲಿರುವ ತುಳಸಿಗೆ, ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚಿ ಪೂಜಿಸುವುದು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಶ್ರೇಷ್ಠ ಸಂಪ್ರದಾಯವಾಗಿದೆ. ತುಳಸಿ ಇರುವ ಮನೆಯಲ್ಲಿ ಸಾಕ್ಷಾತ್ ಮಹಾಲಕ್ಷ್ಮಿ ದೇವಿ ನೆಲೆಸುತ್ತಾಳೆ ಮತ್ತು ಆ ಮನೆ ಯಾವಾಗಲೂ ಸುಖ-ಸಂಪತ್ತಿನಿಂದ ತುಂಬಿರುತ್ತದೆ ಎಂಬುದು ಹಿರಿಯರ ನಂಬಿಕೆ.

ಆದಾಗ್ಯೂ, ಕೆಲವು ಮನೆಗಳಲ್ಲಿ ತುಳಸಿ ಗಿಡವನ್ನು ಎಷ್ಟೇ ಭಕ್ತಿಯಿಂದ ಪೂಜಿಸಿದರೂ, ಎಷ್ಟೇ ಸುಂದರವಾಗಿ ಬೆಳೆಸಿದರೂ ಶಾಂತಿ ಇರುವುದಿಲ್ಲ. ನಿರಂತರ ಜಗಳಗಳು, ಮಕ್ಕಳಲ್ಲಿ ಏಕಾಗ್ರತೆಯ ಕೊರತೆ ಮತ್ತು ಮನಸ್ಸಿನಲ್ಲಿ ಸದಾ ಏನೋ ಒಂದು ಅಕಾರಣ ಚಿಂತೆ ಕಾಡುತ್ತಿರುತ್ತದೆ. ಇಷ್ಟೆಲ್ಲಾ ಪೂಜೆ ಮಾಡಿದ ನಂತರವೂ ಮನೆಯಲ್ಲಿ ತೃಪ್ತಿ ಸಿಗದಿದ್ದರೆ, ಅದಕ್ಕೆ ನಾವು ತಿಳಿಯದೇ ತುಳಸಿ ಕಟ್ಟೆಯ ಬಳಿ ಮಾಡುವ ಕೆಲವು ಸಣ್ಣ ತಪ್ಪುಗಳೇ ಕಾರಣವಾಗಿರಬಹುದು. ಶುದ್ಧತೆಯ ಜಾಗದಲ್ಲಿ ಅಶುದ್ಧತೆ ಪ್ರವೇಶಿಸಿದರೆ ದೇವರ ಕೃಪೆ ಕಡಿಮೆಯಾಗುತ್ತದೆ ಎಂದು ಧರ್ಮಶಾಸ್ತ್ರಗಳು ಎಚ್ಚರಿಸುತ್ತವೆ. ಹಾಗಾದರೆ, ತುಳಸಿ ಗಿಡದ ಬಳಿ ನಾವು ಯಾವ ತಪ್ಪುಗಳನ್ನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ.

ತುಳಸಿ ಕಟ್ಟೆಯ ಸುತ್ತ ಕಸ, ತ್ಯಾಜ್ಯ ಇಡಬೇಡಿ:

ಇತ್ತೀಚಿನ ದಿನಗಳಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಅಥವಾ ನಿರ್ಲಕ್ಷ್ಯದಿಂದಾಗಿ ಅನೇಕರು ತುಳಸಿಯ ಪಕ್ಕದಲ್ಲೇ ತಾತ್ಕಾಲಿಕವಾಗಿ ಕಸದ ತೊಟ್ಟಿಗಳು, ಹಳೆಯ ವಸ್ತುಗಳು ಅಥವಾ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಇಡುತ್ತಾರೆ. ಇದು ಅತಿ ದೊಡ್ಡ ತಪ್ಪು. ತುಳಸಿ ಕೇವಲ ಸಸ್ಯವಲ್ಲ, ಆಕೆ ಭಗವಾನ್ ವಿಷ್ಣುವಿನ ಪ್ರೀತಿಯ ಪವಿತ್ರ ರೂಪ. ತುಳಸಿಯ ಸುತ್ತಮುತ್ತ ಚಪ್ಪಲಿಗಳು, ಹಳೆಯ ಬಟ್ಟೆಗಳು ಅಥವಾ ಮುರಿದ ವಸ್ತುಗಳನ್ನು ಇಡುವುದರಿಂದ ಆ ಜಾಗದ ಪಾವಿತ್ರ್ಯತೆ ಕೆಡುತ್ತದೆ ಮತ್ತು ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.

ಗಿಡ ಒಣಗದಂತೆ ನೋಡಿಕೊಳ್ಳಿ:

ತುಳಸಿ ಗಿಡವು ಯಾವಾಗಲೂ ಹಸಿರಾಗಿರುವಂತೆ ನೋಡಿಕೊಳ್ಳುವುದು ಮನೆಯ ಯಜಮಾನನ ಜವಾಬ್ದಾರಿ. ನಮ್ಮ ನಿರ್ಲಕ್ಷ್ಯದಿಂದಾಗಿ ತುಳಸಿ ಗಿಡ ಒಣಗಿ ಹೋದರೆ, ಅದು ಮನೆಯಲ್ಲಿನ ಆಧ್ಯಾತ್ಮಿಕ ಶಕ್ತಿ ಕ್ಷೀಣಿಸುತ್ತಿದೆ ಎಂಬುದರ ಸಂಕೇತವಾಗಿದೆ. ಆದ್ದರಿಂದ ಪ್ರತಿದಿನ ನಿಯಮಿತವಾಗಿ ನೀರು ಹಾಕಿ ಗಿಡವನ್ನು ಹಸನ್ಮುಖಿಯಾಗಿ ಇಡಬೇಕು.

ಸೂರ್ಯಾಸ್ತದ ನಂತರ ಎಲೆ ಕತ್ತರಿಸಬೇಡಿ:

ಸೂರ್ಯ ಮುಳುಗಿದ ನಂತರ ಅಥವಾ ರಾತ್ರಿಯ ಸಮಯದಲ್ಲಿ ತುಳಸಿ ಎಲೆಗಳನ್ನು ಕತ್ತರಿಸುವುದು ಅಥವಾ ಗಿಡವನ್ನು ಮುಟ್ಟುವುದು ಅತ್ಯಂತ ಅಶುದ್ಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಆ ಸಮಯದಲ್ಲಿ ದೈವಿಕ ಶಕ್ತಿಗಳು ವಿಶ್ರಾಂತಿ ಪಡೆಯುತ್ತವೆ ಎಂಬ ನಂಬಿಕೆಯಿದೆ.

ತುಳಸಿ ಬಳಿ ಕುಳಿತು ಅಳಬೇಡಿ, ವಾದ ಮಾಡಬೇಡಿ:

ತುಳಸಿ ಗಿಡದ ಬಳಿ ಕುಳಿತು ಅಳಬಾರದು, ದುಃಖಿಸಬಾರದು ಅಥವಾ ಕೋಪದಿಂದ ಇತರರನ್ನು ಶಪಿಸಬಾರದು. ಇತ್ತೀಚಿನ ದಿನಗಳಲ್ಲಿ ಅನೇಕರು ಫೋನ್‌ಗಳಲ್ಲಿ ಜಗಳ ಆಡುತ್ತಾ, ವಾದ ಮಾಡುತ್ತಾ ತುಳಸಿ ಕೋಟೆಯ ಸುತ್ತ ತಿರುಗಾಡುತ್ತಾರೆ. ತುಳಸಿಯು ಸಕಾರಾತ್ಮಕ ಶಕ್ತಿಯನ್ನು (Positive Energy) ಆಕರ್ಷಿಸುವ ಕೇಂದ್ರವಾಗಿದೆ. ನಾವು ಅಲ್ಲಿ ನಕಾರಾತ್ಮಕ ಭಾವನೆಗಳನ್ನು ವ್ಯಕ್ತಪಡಿಸಿದರೆ, ಮನೆಯಲ್ಲಿ ಆತಂಕ ಮತ್ತು ಅಶಾಂತಿ ಮತ್ತಷ್ಟು ಹೆಚ್ಚಾಗುತ್ತದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಪ್ರಾರ್ಥನೆ ಮಾಡುವ ಸರಿಯಾದ ಕ್ರಮ ಯಾವುದು?

ದೇವರೆದುರು ಪ್ರಾರ್ಥಿಸುವಾಗ, “ನನಗೆ ಈ ತೊಂದರೆಗಳನ್ನು ಏಕೆ ನೀಡಿದೆ?” ಎಂದು ಹತಾಶೆಯಿಂದ ಕೇಳಬಾರದು. ಬದಲಾಗಿ, ಪೂರ್ಣ ನಂಬಿಕೆಯಿಂದ “ಎಂತಹ ಕಷ್ಟ ಬಂದರೂ ಎದುರಿಸುವ ಧೈರ್ಯವನ್ನು ದೇವರು ನನಗೆ ನೀಡುತ್ತಾನೆ” ಎಂದು ಧನಾತ್ಮಕವಾಗಿ ಕೇಳಿಕೊಳ್ಳಬೇಕು.

ನೆಮ್ಮದಿಗಾಗಿ ಪ್ರತಿ ಶುಕ್ರವಾರ ಹೀಗೆ ಮಾಡಿ:

  • ಪ್ರತಿ ಶುಕ್ರವಾರ ಸಂಜೆ ತುಳಸಿ ಕಟ್ಟೆಯ ಸುತ್ತಮುತ್ತಲಿನ ಜಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ.
  • ಮನೆಯಲ್ಲಿ ಲಕ್ಷ್ಮಿ ಅಷ್ಟೋತ್ತರ ಅಥವಾ ಸ್ತೋತ್ರಗಳನ್ನು ಹಾಕಿ, ತುಳಸಿ ದೇವಿಗೆ ಸಣ್ಣ ತುಪ್ಪದ ದೀಪವನ್ನು ಬೆಳಗಿಸಿ.
  • ದೀಪ ಹಚ್ಚುವ ಸಮಯದಲ್ಲಿ ಮನೆಯಲ್ಲಿರುವ ಸದಸ್ಯರೆಲ್ಲರೂ ಯಾವುದೇ ಜಗಳವಿಲ್ಲದೆ ಶಾಂತಿಯುತವಾಗಿ, ಪ್ರೀತಿಯಿಂದ ಒಟ್ಟಿಗೆ ಮಾತನಾಡಬೇಕು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು