AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಡಬಹುದೇ? ಶಾಸ್ತ್ರಗಳು ಹೇಳುವುದೇನು?

ತುಳಸಿ ಗಿಡ ಹಿಂದೂ ಧರ್ಮದಲ್ಲಿ ಪವಿತ್ರವಾಗಿದ್ದು, ಈ ಗಿಡದಲ್ಲಿ ಮಹಾಲಕ್ಷ್ಮಿ ನೆಲೆಸಿದ್ದಾಳೆ ಎಂಬ ನಂಬಿಕೆಯಿದೆ. ವಾಸ್ತು ಪ್ರಕಾರ ಇದು ಮನೆಗೆ ಸಕಾರಾತ್ಮಕ ಶಕ್ತಿ, ಸಂಪತ್ತು ತರುತ್ತದೆ. ಒಂದಕ್ಕಿಂತ ಹೆಚ್ಚು ಗಿಡಗಳನ್ನು (ಬೆಸ ಸಂಖ್ಯೆಯಲ್ಲಿ) ಇಡಬಹುದು. ಪೂರ್ವ ಅಥವಾ ಈಶಾನ್ಯ ದಿಕ್ಕು ಶ್ರೇಷ್ಠ. ಶುದ್ಧ ಸ್ಥಳದಲ್ಲಿಟ್ಟು, ಭಾನುವಾರ ಹೊರತುಪಡಿಸಿ ಪ್ರತಿದಿನ ನೀರು ಹಾಕಿ ಆರೈಕೆ ಮಾಡುವುದು ಶುಭ ಫಲ ನೀಡುತ್ತದೆ.

Vastu Tips: ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಡಬಹುದೇ? ಶಾಸ್ತ್ರಗಳು ಹೇಳುವುದೇನು?
ತುಳಸಿ ಗಿಡImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 25, 2026 | 7:04 AM

Share

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರ ಹಾಗೂ ಪೂಜನೀಯ ಎಂದು ಪರಿಗಣಿಸಲಾಗಿದೆ. ಬಹುತೇಕ ಪ್ರತಿಯೊಬ್ಬರ ಮನೆಯ ಅಂಗಳದಲ್ಲಿಯೂ ತುಳಸಿ ಕಟ್ಟೆಯಿದ್ದು, ಪ್ರತಿದಿನ ನಿಗದಿತ ಆಚರಣೆಗಳೊಂದಿಗೆ ಅದನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ತುಳಸಿ ಗಿಡದಲ್ಲಿ ಶ್ರೀ ಮಹಾಲಕ್ಷ್ಮಿಯು ವಾಸಿಸುತ್ತಾಳೆ. ಅಲ್ಲದೆ, ತುಳಸಿಯು ಶ್ರೀಹರಿ ವಿಷ್ಣುವಿಗೆ ಅತ್ಯಂತ ಪ್ರಿಯವಾದುದು. ಶಾಸ್ತ್ರೋಕ್ತವಾಗಿ ತುಳಸಿಯನ್ನು ಪೂಜಿಸುವ ಮನೆಯಲ್ಲಿ ಸದಾ ಸಂತೋಷ, ಸಮೃದ್ಧಿ ಹಾಗೂ ವಿಷ್ಣುವಿನ ವಿಶೇಷ ಅನುಗ್ರಹ ನೆಲೆಸಿರುತ್ತದೆ.

ವಾಸ್ತು ಶಾಸ್ತ್ರದಲ್ಲಿ ತುಳಸಿಯ ಮಹತ್ವ:

ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡಕ್ಕೆ ವಿಶೇಷ ಸ್ಥಾನ ನೀಡಲಾಗಿದೆ. ಪ್ರಾಚೀನ ಕಾಲದಿಂದಲೂ ಹಿಂದೂ ಸಂಪ್ರದಾಯದ ಅಮೂಲ್ಯ ಭಾಗವಾಗಿರುವ ಈ ಗಿಡವು, ಸುತ್ತಮುತ್ತಲಿನ ಪರಿಸರವನ್ನು ಶುದ್ಧೀಕರಿಸುವುದಲ್ಲದೆ, ನಿರಂತರವಾಗಿ ಧನಾತ್ಮಕ (ಸಕಾರಾತ್ಮಕ) ಶಕ್ತಿಯನ್ನು ಆಕರ್ಷಿಸುತ್ತದೆ. ಆದರೆ ಹಲವರಲ್ಲಿ “ಒಂದಕ್ಕಿಂತ ಹೆಚ್ಚು ತುಳಸಿ ಗಿಡಗಳನ್ನು ಮನೆಯಲ್ಲಿ ನೆಡಬಹುದೇ?” ಎಂಬ ಗೊಂದಲವಿರುತ್ತದೆ.

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಡಬಹುದೇ?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡಗಳನ್ನು ನೆಡುವುದು ಖಂಡಿತವಾಗಿಯೂ ಶುಭ. ಆದರೆ ಹೀಗೆ ನೆಡುವಾಗ ಗಿಡಗಳ ಸಂಖ್ಯೆಯು 3, 5 ಅಥವಾ 7 ರಂತಹ ಬೆಸ ಸಂಖ್ಯೆಗಳಲ್ಲಿ (Odd Numbers) ಇರಬೇಕು. ನೆನಪಿಡಿ, ಅಗತ್ಯಕ್ಕಿಂತ ಹೆಚ್ಚು ಗಿಡಗಳನ್ನು ನೆಡಬಾರದು. ಹೆಚ್ಚು ಗಿಡಗಳಿದ್ದರೆ ಅವುಗಳ ಸರಿಯಾದ ಆರೈಕೆ ಮಾಡಲು ಸಾಧ್ಯವಾಗದೆ, ಪೂಜೆಯ ಪೂರ್ಣ ಫಲವನ್ನು ಕಳೆದುಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ತುಳಸಿ ಗಿಡ ನೆಡಲು ಸೂಕ್ತವಾದ ದಿಕ್ಕು ಯಾವುದು?

ತುಳಸಿ ಗಿಡದಿಂದ ಪೂರ್ಣ ಶುಭ ಫಲಗಳು ದೊರೆಯಬೇಕಾದರೆ ಅದನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದು ಅತ್ಯಗತ್ಯ. ಮನೆಯ ಪೂರ್ವ ಭಾಗದಲ್ಲಿ ತುಳಸಿ ನೆಡುವುದು ಅತ್ಯಂತ ಶ್ರೇಷ್ಠ. ಈಶಾನ್ಯ ದಿಕ್ಕಿನಲ್ಲಿ ಇಡುವುದು ಮನೆಗೆ ಲಕ್ಷ್ಮಿಯ ಅನುಗ್ರಹ ಮತ್ತು ಶಾಂತಿಯನ್ನು ತರುತ್ತದೆ. ಆದರೆ ತುಳಸಿ ಗಿಡವನ್ನು ಎಂದಿಗೂ ದಕ್ಷಿಣ ದಿಕ್ಕಿನಲ್ಲಿ ಇಡಬಾರದು. ಏಕೆಂದರೆ ದಕ್ಷಿಣವು ಪಿತೃಗಳ ಮತ್ತು ಯಮನ ದಿಕ್ಕಾಗಿದ್ದು, ಇಲ್ಲಿ ಇಡುವುದರಿಂದ ಹಾನಿಯಾಗಬಹುದು.

ಪಾಲಿಸಬೇಕಾದ ಮುಖ್ಯ ನಿಯಮಗಳು:

ತುಳಸಿ ಗಿಡವನ್ನು ಯಾವಾಗಲೂ ಮನೆಯ ಅಂಗಳ ಅಥವಾ ಬಾಲ್ಕನಿಯಂತಹ ಸ್ವಚ್ಛ ಮತ್ತು ಗಾಳಿ-ಬೆಳಕು ಬರುವ ಸ್ಥಳದಲ್ಲೇ ಇಡಬೇಕು. ಮನೆಯಲ್ಲಿರುವ ತುಳಸಿ ಗಿಡ ಎಂದಿಗೂ ಒಣಗಿಹೋಗಬಾರದು. ಭಾನುವಾರ ಮತ್ತು ಏಕಾದಶಿ ದಿನಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ದಿನಗಳಲ್ಲಿ ತುಳಸಿ ಗಿಡಕ್ಕೆ ತಪ್ಪದೇ ನಿಯಮಿತವಾಗಿ ನೀರನ್ನು ಸಮರ್ಪಿಸಬೇಕು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!