AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulsi Puja 2024: ತುಳಸಿ ಪೂಜೆಯ ಶುಭ ಮುಹೂರ್ತ ಮತ್ತು ಪೂಜೆ ವಿಧಾನದ ಬಗ್ಗೆ ತಿಳಿಯಿರಿ

ಹಿಂದೂ ಧರ್ಮದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ತುಳಸಿ ಪೂಜೆ ಕೂಡಾ ಒಂದು. ಪ್ರತಿವರ್ಷ ಕಾರ್ತಿಕ ಮಾಸದ ದ್ವಾದಶಿ ತಿಥಿಯಂದು ತುಳಸಿ ಪೂಜೆ ಅಥವಾ ತುಳಸಿ ವಿವಾಹವನ್ನು ಮಾಡಲಾಗುತ್ತದೆ. ಈ ಬಾರಿ ತುಳಸಿ ಪೂಜೆ ಯಾವಾಗ? ಈ ಪೂಜೆಯ ಶುಭ ಮುಹೂರ್ತ ಮತ್ತು ಆಚರಣೆಗಳ ಬಗ್ಗೆ ತಿಳಿಯೋಣ.

Tulsi Puja 2024: ತುಳಸಿ ಪೂಜೆಯ ಶುಭ ಮುಹೂರ್ತ ಮತ್ತು ಪೂಜೆ ವಿಧಾನದ ಬಗ್ಗೆ ತಿಳಿಯಿರಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 12, 2024 | 3:15 PM

Share

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿಯ ಮಾರನೇ ದಿನವಾದ ದ್ವಾದಶಿಯಂದು ಈ ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ಈ ಬಾರಿ ನವೆಂಬರ್‌ 13 ರಂದು ತುಳಸಿ ಪೂಜೆಯನ್ನು ಆಚರಿಸಲಾಗುತ್ತದೆ. ಹಾಗಾದರೆ ಹಿಂದೂ ಧರ್ಮದಲ್ಲಿ ತುಳಸಿ ಪೂಜೆಯ ಮಹತ್ವವೇನು? ಈ ಪೂಜೆಯ ಶುಭ ಮುಹೂರ್ತ ಮತ್ತು ಪೂಜೆ ವಿಧಿವಿಧಾನಗಳ ಬಗ್ಗೆ ತಿಳಿಯಿರಿ.

ತುಳಸಿ ಪೂಜೆಯ ಶುಭ ಮುಹೂರ್ತ:

ದೃಕ್‌ ಪಂಚಾಂಗದ ಪ್ರಕಾರ ಈ ಬಾರಿ ತುಳಸಿ ಪೂಜೆ ಅಥವಾ ತುಳಸಿ ವಿವಾಹವನ್ನು ನವೆಂಬರ್‌ 13, ಬುಧವಾರದಂದು ಆಚರಿಸಲಾಗುತ್ತದೆ. ನವೆಂಬರ್‌ 12 ಸಂಜೆ 04:04 ಕ್ಕೆ ದ್ವಾದಶಿ ತಿಥಿ ಆರಂಭವಾಗಿ ನವೆಂಬರ್‌ 13 ರ ಮಧ್ಯಾಹ್ನ 1:01 ಕ್ಕೆ ದ್ವಾದಶಿ ತಿಥಿ ಕೊನೆಗೊಳ್ಳುತ್ತದೆ.

ತುಳಸಿ ಪೂಜೆಯ ವಿಧಾನ:

ಏಕಾದಶಿ ಅಥವಾ ದೇವುತಾನಿ ಏಕಾದಶಿಯ ದಿನದಂದು ಮುಂಜಾನೇ ಬೇಗ ಎದ್ದು ಪುಣ್ಯ ಸ್ನಾನ ಮಾಡಿ, ಶುಭ್ರ ಬಟ್ಟೆ ತೊಟ್ಟು ಬಳಿಕ ತುಳಸಿ ಕಟ್ಟೆಯನ್ನು ಮದುವಣಗಿತ್ತಿಯಂತೆ ಅಲಂಕರಿಸಬೇಕು. ತುಳಸಿ ಕಟ್ಟೆಗೆ ಚಪ್ಪರ ನಿರ್ಮಾಣ ಮಾಡಿ ಅರಶಿನ ಕುಂಕುಮಗಳಿಂದ ಹಾಗೂ ಹೂವುಗಳಿಂದ ಕಟ್ಟೆಯನ್ನು ಸಿಂಗರಿಸಿ ಮಂಗಳ ದ್ರವ್ಯಗಳಿಂದ ಪೂಜಿಸಬೇಕು. ಮತ್ತು ತುಳಸಿ ಕಟ್ಟೆ ಮುಂದೆ ರಂಗೋಲಿ ಬಿಡಿಸಬೇಕು. ನಂತರ ವಿಷ್ಣುವಿನ ಸ್ವರೂಪವಾಗಿ ಬೆಟ್ಟದ ನೆಲ್ಲಿಕಾಯಿ ಗಿಡ ಅಥವಾ ಕೃಷ್ಣ, ರಾಮನ ಫೋಟೋ ಇಲ್ಲವೇ ಸಾಲಿಗ್ರಾಮದ ಕಲ್ಲನ್ನು ತುಳಸಿ ಗಿಡದ ಪಕ್ಕ ಇಟ್ಟು ಹೂವು ಹಣ್ಣುಗಳಿಂದ ಅಲಂಕರಿಸಬೇಕು. ನಂತರ ದೇವರ ಭಾವಚಿತ್ರ ಅಥವಾ ನೆಲ್ಲಿ ಗಿಡ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಬೇಡು. ಹೀಗೆ ವಿಷ್ಣು ಮತ್ತು ತುಳಸಿ ವಿವಾಹವನ್ನು ಭಕ್ತರು ಶ್ರದ್ಧಾಪೂರ್ವಕವಾಗಿ ಆಚರಿಸುತ್ತಾರೆ. ಮತ್ತು ಊರಿನಿಂದ ಊರಿಗೆ ತುಳಸಿ ವಿವಾಹದ ಆಚರಣೆಯ ವಿಧಾನ ಭಿನ್ನವಾಗಿರುತ್ತದೆ.

ತುಳಸಿ ಪೂಜೆಯ ಮಹತ್ವ:

ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ಅಥವಾ ತುಳಸಿ ವಿವಾಹಕ್ಕೆ ಅದರದ್ದೇ ಆದ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ತುಳಸಿ ಮತ್ತು ವಿಷ್ಣುವಿನ ರೂಪವಾದ ಸಾಲಿಗ್ರಾಮಕ್ಕೆ ಮದುವೆ ಮಾಡಿದರೆ ಭಕ್ತರ ಹಿಂದಿನ ಜನ್ಮದ ಎಲ್ಲಾ ಪಾಪಗಳು ನಾಶವಾಗುತ್ತದೆ ಎಂಬ ನಂಬಿಕೆಯಿದೆ. ಅಲ್ಲದೆ ತುಳಸಿ ಪೂಜೆಯನ್ನು ಮಾಡುವುದರಿಂದ ವೈವಾಹಿಕ ಜೀವನದಲ್ಲಿ ಉಂಟಾಗುವ ಕಲಹಗಳು ದೂರವಾಗುತ್ತದೆ. ದಾಂಪತ್ಯ ಜೀವನದಲ್ಲಿ ಪ್ರೀತಿ, ಸಂತೋಷ ಹೆಚ್ಚಾಗುತ್ತದೆ ಮತ್ತು ಮದುವೆಯಾಗದವರಿಗೆ ಶೀಘ್ರವೇ ಕಂಕಣಭಾಗ್ಯ ಕೂಡಿ ಬರುತ್ತದೆ ಎಂದು ನಂಬಿಕೆಯೂ ಇದೆ.

ತುಳಸಿ ವಿವಾಹದ ಕುರಿತ ಕಥೆ:

ದಂತಕಥೆಯ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿ ಗಿಡದ ರೂಪ ಪಡೆದಿರುವುದು. ವೃಂದಾ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿದ್ದಳು. ಈಕೆ ವಿಷ್ಣುವಿನ ಮಹಾನ್‌ ಭಕ್ತೆ ಮಾತ್ರವಲ್ಲದೆ ಮಹಾನ್‌ ಪತಿವ್ರತೆಯಾಗಿದ್ದಳು. ಇದೇ ಕಾರಣಕ್ಕೆ ಮೂರು ಲೋಕಕ್ಕೂ ಉಪಟಳ ನೀಡುತ್ತಿದ್ದ ಜಲಂಧರನನ್ನು ಸೋಲಿಸುವುದು ದೇವಾನುದೇವತೆಗಳಿಗೆ ಅಸಾಧ್ಯವಾಗಿತ್ತು. ಈ ಸಂದರ್ಭದಲ್ಲಿ ಶಿವನು ಏನು ಮಾಡುವುದೆಂದು ವಿಷ್ಣುವಿನ ಮೊರೆ ಹೋಗುತ್ತಾನೆ. ಆಗ ವಿಷ್ಣುವು ಜಲಂಧರ ರೂಪ ತಾಳಿ ವೃಂದಾಳ ಬಳಿಗೆ ಬಂದು ಮೋಹಿಸಿ ಆಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಾನೆ. ಈ ಸಂಧರ್ಭದಲ್ಲಿ ಶಿವನು ಜಲಂಧರ ರಾಜನನ್ನು ಸಂಹರಿಸುತ್ತಾನೆ. ಇತ್ತ ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ವಿಷ್ಣುವಿಗೆ ವೃಂದಾ ಕಪ್ಪು ಕಲ್ಲಾಗಿ ಹೋಗು ಎಂದು ಶಾಪ ನೀಡುವುದಲ್ಲದೆ ತನ್ನ ಚಾರಿತ್ರ್ಯಕ್ಕೆ ಧಕ್ಕೆಯುಂಟಾದ್ದರಿಂದ ಪಾಪಕ್ಕೆ ಪ್ರಾಯಶ್ಚಿತವಾಗಿ ಸತಿ ಸಹಗಮನವಾದಳು. ಅದೇ ಬೂದಿಯಿಂದ ತುಳಸಿ ಗಿಡ ಹುಟ್ಟಿತು. ವೃಂದಾಳ ಪಾತಿವ್ರತ್ಯಕ್ಕೆ ಹಾನಿ ತಂದಿದ್ದನ್ನು ಸರಿಪಡಿಸಲು ವಿಷ್ಣುವು ತುಳಸಿಯನ್ನು ವಿವಾಹವಾದನು. ಅಂದಿನಿಂದ ಪ್ರತಿವರ್ಷ ಕಾರ್ತಿಕ ಮಾಸದ ಏಕಾದಶಿಯ ದಿನ ಸಾಲಿಗ್ರಾಮ ಹಾಗೂ ತುಳಸಿ ಗಿಡಕ್ಕೆ ವಿವಾಹ ನೆರವೇರಿಸುವ ಸಂಪ್ರದಾಯವನ್ನು ಪಾಲಿಸುತ್ತಾ ಬರಲಾಗುತ್ತಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ