AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿ ವಿವಾಹ ಯಾಕೆ ಅಷ್ಟೊಂದು ವಿಶೇಷ? ತುಳಸಿಗೂ ವಿಷ್ಣುವಿಗೂ ಸಂಬಂಧ ಹೇಗೆ?

ಕಾರ್ತಿಕ ಮಾಸದ ಪ್ರಮುಖ ಹಬ್ಬವಾದ ತುಳಸಿ ವಿವಾಹದ ಇತಿಹಾಸ, ಆಚರಣೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಈ ಲೇಖನ ವಿವರಿಸುತ್ತದೆ. ತುಳಸಿ ಮತ್ತು ವಿಷ್ಣುವಿನ ಸಂಬಂಧ, ಚಾತುರ್ಮಾಸ್ಯದ ಅಂತ್ಯ, ಮತ್ತು ನೆಲ್ಲಿಕಾಯಿ ಭಕ್ಷಣದ ಪದ್ಧತಿಯ ಬಗ್ಗೆ ತಿಳಿಯಿರಿ. ಈ ಹಬ್ಬದಲ್ಲಿ ನಡೆಯುವ ವಿವಿಧ ಪೂಜೆಗಳು ಮತ್ತು ವಿಧಿವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ತುಳಸಿ ವಿವಾಹ ಯಾಕೆ ಅಷ್ಟೊಂದು ವಿಶೇಷ? ತುಳಸಿಗೂ ವಿಷ್ಣುವಿಗೂ ಸಂಬಂಧ ಹೇಗೆ?
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 12, 2024 | 7:05 PM

Share

ಕಾರ್ತಿಕ ಮಾಸದ ಹಬ್ಬಗಳಲ್ಲಿ ತುಳಸೀ ವಿವಾಹ ಅಥವಾ ತುಳಸೀ ಪೂಜೆ ವಿಶೇಷ. ಪ್ರತಿ ಭಾರತೀಯರೂ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಇದು ರಾತ್ರಿ ಆಚರಿಸುವ ಹಬ್ಬ. ಏಕಾದಶೀ ತಿಥಿಯಂದು ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಮಾಡುತ್ತಾರೆ. ಇದನ್ನು ಉತ್ಥಾನ ದ್ವಾದಶೀ ಎಂದೂ ಕರೆಯುವುದುಂಟು. ಶಯನೈಕಾದಶಿಯಂದು ಮಲಗಿದ ವಿಷ್ಣು ಇಂದು ಏಳುತ್ತಾನೆ.‌ ಹಾಗಾಗಿ ಇದನ್ನು ಪ್ರಬೋಧಿನೀ ಏಕಾದಾಶೀ ಎಂದೂ ಕರೆಯುತ್ತಾರೆ.

ತುಳಸಿಗೂ ವಿಷ್ಣುವಿಗೂ ಸಂಬಂಧ..

ಜಲಂಧರ ಎನ್ನುವ ರಾಕ್ಷಸನನ್ನು ವಿವಾಹವಾದವಳು ವೃಂದಾ. ಆಕೆಯೇ ತುಳಸೀ.‌ ಜಲಂಧರನಿಂದ ಲೋಕಕ್ಕೆ ಕಂಟಕವೊದಗಿ ಬಂದಿತು. ಆ ಕಾರಣಕ್ಕೆ ಮಹಾವಿಷ್ಣು ಜಲಂಧರನ‌ ರೂಪ ಧರಿಸಿ ನಿಜವಾದ ಜಲಂಧರನನ್ನು ಸಂಹರಿಸಿದ. ಅನಂತರ ತನ್ನ ರೂಪವನ್ನು ತೋರಿಸುತ್ತಾನೆ. ಕೋಪಗೊಂಡ ವೃಂದಾ ಮಹಾವಿಷ್ಣುವಿಗೆ ಶಾಪವನ್ನು ಕೊಡುತ್ತಾಳೆ. ನಿನಗೂ ಪತ್ನಿ ವಿಯೋಗವಾಗಲಿ ಎಂದು. ಶಾಪದ‌‌ ಫಲವಾಗಿ ರಾಮನ‌ ಅವತರಾದಲ್ಲಿ‌ ವಿಯೋಗವೂ ಆಯಿತು.

ವೃಂದೆಯೂ ಮತ್ತೆ ತುಳಸೀ ರೂಪವನ್ನು ತಾಳುತ್ತಾಳೆ. ಮಹಾವಿಷ್ಣುವೂ ಸಾಲಗ್ರಾಮ ರೂಪದಲ್ಲಿ ನೆಲೆಸುತ್ತಾನೆ. ಮಹಾವಿಷ್ಣುವಿಗೆ ವೃಂದಾಳ ಪಾತಿವ್ರತ್ಯ ಇಷ್ಟವಾಗುತ್ತದೆ. ಆದರೆ ಲೋಕಕಂಟಕ ಜಲಂಧರನನ್ನು ಸಂಹರಿಸದೇ ಬೇರೆ ಉಪಾಯವಿರಲಿಲ್ಲ. ಅದಕ್ಕಾಗಿ ತುಳಸಿಯನ್ನು ವಿವಾಹವಾಗುತ್ತಾನೆ. ಮುಂದೆ ಸಾಲಗ್ರಾಮದ ರೂಪದಲ್ಲಿ ಇರುವ ಮಹಾವಿಷ್ಣುವಿಗೆ ತುಳಸಿ ಪ್ರಿಯವಾದುದಾಗುತ್ತದೆ. ಇದರ ಒಂದು ವಿವಾಹವನ್ನು ತುಳಸಿಯ ಜೊತಡ ನೆಲ್ಲಿಕಾಯಿಯನ್ನು ಇಟ್ಟು ಪೂಜಿಸುವ ಕ್ರಮ ಬಂದಿದೆ. ಇಲ್ಲಿಂದ ಮನುಷ್ಯರ ವಿವಾಹಗಳು ನಡೆಯಬೇಕು ನಡೆಯುತ್ತದೆ ಎನ್ನುವುದು ಸಂಪ್ರದಾಯ.

ಚಾತುರ್ಮಾಸ್ಯ ಸಮಾಪ್ತಿ

ಈ ದಿನವನ್ನು ಚಾತುರ್ಮಾಸ್ಯದ ಕೊನೆಯ ದಿನ ಎಂದೂ ಹೇಳುತ್ತಾರೆ. ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ‌ ಏಕಾದಶಿಗೆ ನಾಲ್ಕು ತಿಂಗಳು. ಇದನ್ನೇ ಮಹಾವಿಷ್ಣುವಿನ ಯೋಗ ನಿದ್ರೆಯ ಅವಧಿಯಾದ ಕಾರಣ ಸಂನ್ಯಾಸಿಗಳು ಗೃಹಸ್ಥರು ಚಾತುರ್ಮಾಸ್ಯ ವ್ರತವನ್ನು ಆಚರಿಸುವುದು.

ನೆಲ್ಲಿ ಕಾಯಿ ಭಕ್ಷಣ

ಈ ದಿನದಿಂದ ನೆಲ್ಲಿಕಾಯಿಯನ್ನು ತಿನ್ನುವ ಪದ್ದತಿ ಇದೆ. ಇನ್ನು ನೆಲ್ಲಿ ಕಾಯಿ ಬೆಳವಣಿಗೆಯಾಗಿ ಸ್ವಾದಿಷ್ಟವಾಗುತ್ತದೆ.

ತುಳಸಿಯ ಸುತ್ತ ದೀಪವನ್ನು ಬೆಳಗಿ, ತುಳಸಿ ಕಟ್ಟೆಯ ಎದುರು ಸುಂದರ ರಂಗವಲ್ಲಿ ಹಾಕಿ, ವಿವಿಧ ಭಕ್ಷಗಳನ್ನು ಮಾಡಿ, ತುಳಸೀ ವಿವಾಹವನ್ನು ಮಾಡುವುದು. ರಾತ್ರಿ ಸಮಯದಲ್ಲಿ ಹರಿ ದಿನವಾದ ದ್ವಾದಶಿ ಇರಬೇಕು.

– ಲೋಹಿತ ಹೆಬ್ಬಾರ್ – 8762924271

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು