AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಯುಗಾದಿ ಹಬ್ಬದ ದಿನ ಏನು ಮಾಡಬೇಕು, ಮಾಡಬಾರದು?

ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡುತ್ತಾರೆ. ಧರ್ಮಗ್ರಂಥಗಳ ಪ್ರಕಾರ, ಹಬ್ಬದ ದಿನ ದೇವರನ್ನು ಭಕ್ತಿಯಿಂದ ಪೂಜಿಸಿ ಕೆಲವು ಕ್ರಮಗಳನ್ನು ಅನುಸರಿಸುವ ಮೂಲಕ, ವರ್ಷಪೂರ್ತಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡು ಎಂದು ದೇವರ ಆಶೀರ್ವಾದವನ್ನು ಬೇಡುತ್ತಾರೆ. ಆದರೆ ಇದೆಲ್ಲದರ ಜೊತೆಗೆ ಹಬ್ಬದ ದಿನ ಯಾವ ಕಾರ್ಯಗಳನ್ನು ಮಾಡಬೇಕು ಮತ್ತು ಮಾಡಬಾರದು ಎಂಬ ವಿಷಯಗಳನ್ನು ತಿಳಿದುಕೊಂಡಿರಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Ugadi 2024: ಯುಗಾದಿ ಹಬ್ಬದ ದಿನ ಏನು ಮಾಡಬೇಕು, ಮಾಡಬಾರದು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 08, 2024 | 6:10 PM

Share

ಪ್ರತಿ ವರ್ಷ ಹಿಂದೂ ಧರ್ಮದಲ್ಲಿ, ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ದಿನದಂದು ಅಂದರೆ ಈ ಬಾರಿ ಎ. 9 ರಂದು ಮಂಗಳವಾರ ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡುತ್ತಾರೆ. ಧರ್ಮಗ್ರಂಥಗಳ ಪ್ರಕಾರ, ಹಬ್ಬದ ದಿನ ದೇವರನ್ನು ಭಕ್ತಿಯಿಂದ ಪೂಜಿಸಿ ಕೆಲವು ಕ್ರಮಗಳನ್ನು ಅನುಸರಿಸುವ ಮೂಲಕ, ವರ್ಷಪೂರ್ತಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡು ಎಂದು ದೇವರ ಆಶೀರ್ವಾದವನ್ನು ಬೇಡುತ್ತಾರೆ. ಆದರೆ ಇದೆಲ್ಲದರ ಜೊತೆಗೆ ಹಬ್ಬದ ದಿನ ಯಾವ ಕಾರ್ಯಗಳನ್ನು ಮಾಡಬೇಕು ಮತ್ತು ಮಾಡಬಾರದು ಎಂಬ ವಿಷಯಗಳನ್ನು ತಿಳಿದುಕೊಂಡಿರಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯುಗಾದಿ ಹಬ್ಬದ ದಿನ ಈ ಕೆಲಸ ಮಾಡಿ;

ಹೊಸ ವರ್ಷದ ಮೊದಲ ದಿನದ ಬೆಳಿಗ್ಗೆ ಪೂಜೆಯನ್ನು ಮುಗಿಸಿ ಬಳಿಕ, ಇಡೀ ಮನೆಗೆ ಗಂಗಾ ಜಲ ಸಿಂಪಡಿಸಿ. ಇದಾದ ಬಳಿಕ ದುರ್ಗಾ ಮಾತೆಯನ್ನು ಧ್ಯಾನಿಸಿ. ಹೀಗೆ ಮಾಡುವುದರಿಂದ, ಮನೆಯಲ್ಲಿ ಸಂತೋಷ, ಸಮೃದ್ಧಿ ಯಾವಾಗಲೂ ಇರುತ್ತದೆ ಜೊತೆಗೆ ನಿಮ್ಮ ಇಡೀ ವರ್ಷ ಉತ್ತಮವಾಗಿರುತ್ತದೆ. ಹಬ್ಬದ ದಿನ ಬ್ರಹ್ಮ ಮುಹೂರ್ತದಲ್ಲಿ ಎದ್ದು ನಿತ್ಯಕ್ರಮಗಳನ್ನು ಪಾಲಿಸಿ. ದೇವರ ಬಳಿ ಹೂವು, ಧೂಪದ್ರವ್ಯ, ತುಪ್ಪದ ದೀಪ ಇತ್ಯಾದಿ ವಸ್ತುಗಳಿಂದ ದೇವರ ಮನೆಯನ್ನು ಸಿಂಗರಿಸಿ. ಮೊದಲು ಗಣೇಶನನ್ನು ಪೂಜಿಸಿ. ನಂತರ ‘ಓಂ ಬ್ರಹ್ಮನೇ ನಮಃ’ ಮಂತ್ರವನ್ನು 108 ಬಾರಿ ಪಠಿಸಿ. ಈ ದಿನ ಬೇವಿನ ಎಲೆಗಳನ್ನು ಪುಡಿ ಮಾಡಿ, ಅದಕ್ಕೆ ಬೆಲ್ಲವನ್ನು ಸೇರಿಸಿ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ, ವ್ಯಕ್ತಿಯ ಆರೋಗ್ಯವು ವರ್ಷಪೂರ್ತಿ ಉತ್ತಮವಾಗಿರುತ್ತದೆ ಮತ್ತು ದೈಹಿಕ ನೋವಿದ್ದರೂ ಸಹ ದೂರವಾಗುತ್ತದೆ.

ಇದನ್ನೂ ಓದಿ: ಚೈತ್ರ ನವರಾತ್ರಿಯ ಸಮಯದಲ್ಲಿ ಯಾವ ದಿನ ಯಾವ ದೇವಿಯ ಆರಾಧನೆ ಮಾಡಬೇಕು?

ಹಬ್ಬದ ದಿನ ತಪ್ಪಾಗಿಯೂ ಈ ಕೆಲಸಗಳನ್ನು ಮಾಡಬೇಡಿ;

ಯುಗಾದಿ ಹಬ್ಬದ ದಿನವನ್ನು ಅತ್ಯಂತ ಪವಿತ್ರ ದಿನವೆಂದು ಹೇಳಲಾಗುತ್ತದೆ. ಈ ದಿನ ಯಾವುದೇ ರೀತಿಯ ಮಾಂಸಾಹಾರಗಳನ್ನು ಸೇವನೆ ಮಾಡಬೇಡಿ. ಈ ದಿನ ನಿಮ್ಮ ಉಗುರುಗಳನ್ನು ಕತ್ತರಿಸಬೇಡಿ ಅಥವಾ ನಿಮ್ಮ ಗಡ್ಡ, ಮೀಸೆ ಅಥವಾ ಕೂದಲನ್ನು ಕತ್ತರಿಸಬೇಡಿ. ಯುಗಾದಿ ಹಬ್ಬದ ಪೂಜೆಯ ಸಮಯದಲ್ಲಿ ಮಲಗಬೇಡಿ. ಈ ಕೆಲಸಗಳನ್ನು ತಪ್ಪಿ, ಮಾಡಿದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದಲ್ಲದೆ, ನಿಮ್ಮ ಆಸೆಗಳು ಸಹ ಈಡೇರದೆಯೇ ಉಳಿಯಬಹುದು. ಹಾಗಾಗಿ ಈ ತಪ್ಪುಗಳನ್ನು ಮಾಡಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!