AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಯುಗಾದಿ ಹಬ್ಬದ ದಿನ ಏನು ಮಾಡಬೇಕು, ಮಾಡಬಾರದು?

ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡುತ್ತಾರೆ. ಧರ್ಮಗ್ರಂಥಗಳ ಪ್ರಕಾರ, ಹಬ್ಬದ ದಿನ ದೇವರನ್ನು ಭಕ್ತಿಯಿಂದ ಪೂಜಿಸಿ ಕೆಲವು ಕ್ರಮಗಳನ್ನು ಅನುಸರಿಸುವ ಮೂಲಕ, ವರ್ಷಪೂರ್ತಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡು ಎಂದು ದೇವರ ಆಶೀರ್ವಾದವನ್ನು ಬೇಡುತ್ತಾರೆ. ಆದರೆ ಇದೆಲ್ಲದರ ಜೊತೆಗೆ ಹಬ್ಬದ ದಿನ ಯಾವ ಕಾರ್ಯಗಳನ್ನು ಮಾಡಬೇಕು ಮತ್ತು ಮಾಡಬಾರದು ಎಂಬ ವಿಷಯಗಳನ್ನು ತಿಳಿದುಕೊಂಡಿರಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Ugadi 2024: ಯುಗಾದಿ ಹಬ್ಬದ ದಿನ ಏನು ಮಾಡಬೇಕು, ಮಾಡಬಾರದು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 08, 2024 | 6:10 PM

Share

ಪ್ರತಿ ವರ್ಷ ಹಿಂದೂ ಧರ್ಮದಲ್ಲಿ, ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ದಿನದಂದು ಅಂದರೆ ಈ ಬಾರಿ ಎ. 9 ರಂದು ಮಂಗಳವಾರ ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡುತ್ತಾರೆ. ಧರ್ಮಗ್ರಂಥಗಳ ಪ್ರಕಾರ, ಹಬ್ಬದ ದಿನ ದೇವರನ್ನು ಭಕ್ತಿಯಿಂದ ಪೂಜಿಸಿ ಕೆಲವು ಕ್ರಮಗಳನ್ನು ಅನುಸರಿಸುವ ಮೂಲಕ, ವರ್ಷಪೂರ್ತಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡು ಎಂದು ದೇವರ ಆಶೀರ್ವಾದವನ್ನು ಬೇಡುತ್ತಾರೆ. ಆದರೆ ಇದೆಲ್ಲದರ ಜೊತೆಗೆ ಹಬ್ಬದ ದಿನ ಯಾವ ಕಾರ್ಯಗಳನ್ನು ಮಾಡಬೇಕು ಮತ್ತು ಮಾಡಬಾರದು ಎಂಬ ವಿಷಯಗಳನ್ನು ತಿಳಿದುಕೊಂಡಿರಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯುಗಾದಿ ಹಬ್ಬದ ದಿನ ಈ ಕೆಲಸ ಮಾಡಿ;

ಹೊಸ ವರ್ಷದ ಮೊದಲ ದಿನದ ಬೆಳಿಗ್ಗೆ ಪೂಜೆಯನ್ನು ಮುಗಿಸಿ ಬಳಿಕ, ಇಡೀ ಮನೆಗೆ ಗಂಗಾ ಜಲ ಸಿಂಪಡಿಸಿ. ಇದಾದ ಬಳಿಕ ದುರ್ಗಾ ಮಾತೆಯನ್ನು ಧ್ಯಾನಿಸಿ. ಹೀಗೆ ಮಾಡುವುದರಿಂದ, ಮನೆಯಲ್ಲಿ ಸಂತೋಷ, ಸಮೃದ್ಧಿ ಯಾವಾಗಲೂ ಇರುತ್ತದೆ ಜೊತೆಗೆ ನಿಮ್ಮ ಇಡೀ ವರ್ಷ ಉತ್ತಮವಾಗಿರುತ್ತದೆ. ಹಬ್ಬದ ದಿನ ಬ್ರಹ್ಮ ಮುಹೂರ್ತದಲ್ಲಿ ಎದ್ದು ನಿತ್ಯಕ್ರಮಗಳನ್ನು ಪಾಲಿಸಿ. ದೇವರ ಬಳಿ ಹೂವು, ಧೂಪದ್ರವ್ಯ, ತುಪ್ಪದ ದೀಪ ಇತ್ಯಾದಿ ವಸ್ತುಗಳಿಂದ ದೇವರ ಮನೆಯನ್ನು ಸಿಂಗರಿಸಿ. ಮೊದಲು ಗಣೇಶನನ್ನು ಪೂಜಿಸಿ. ನಂತರ ‘ಓಂ ಬ್ರಹ್ಮನೇ ನಮಃ’ ಮಂತ್ರವನ್ನು 108 ಬಾರಿ ಪಠಿಸಿ. ಈ ದಿನ ಬೇವಿನ ಎಲೆಗಳನ್ನು ಪುಡಿ ಮಾಡಿ, ಅದಕ್ಕೆ ಬೆಲ್ಲವನ್ನು ಸೇರಿಸಿ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ, ವ್ಯಕ್ತಿಯ ಆರೋಗ್ಯವು ವರ್ಷಪೂರ್ತಿ ಉತ್ತಮವಾಗಿರುತ್ತದೆ ಮತ್ತು ದೈಹಿಕ ನೋವಿದ್ದರೂ ಸಹ ದೂರವಾಗುತ್ತದೆ.

ಇದನ್ನೂ ಓದಿ: ಚೈತ್ರ ನವರಾತ್ರಿಯ ಸಮಯದಲ್ಲಿ ಯಾವ ದಿನ ಯಾವ ದೇವಿಯ ಆರಾಧನೆ ಮಾಡಬೇಕು?

ಹಬ್ಬದ ದಿನ ತಪ್ಪಾಗಿಯೂ ಈ ಕೆಲಸಗಳನ್ನು ಮಾಡಬೇಡಿ;

ಯುಗಾದಿ ಹಬ್ಬದ ದಿನವನ್ನು ಅತ್ಯಂತ ಪವಿತ್ರ ದಿನವೆಂದು ಹೇಳಲಾಗುತ್ತದೆ. ಈ ದಿನ ಯಾವುದೇ ರೀತಿಯ ಮಾಂಸಾಹಾರಗಳನ್ನು ಸೇವನೆ ಮಾಡಬೇಡಿ. ಈ ದಿನ ನಿಮ್ಮ ಉಗುರುಗಳನ್ನು ಕತ್ತರಿಸಬೇಡಿ ಅಥವಾ ನಿಮ್ಮ ಗಡ್ಡ, ಮೀಸೆ ಅಥವಾ ಕೂದಲನ್ನು ಕತ್ತರಿಸಬೇಡಿ. ಯುಗಾದಿ ಹಬ್ಬದ ಪೂಜೆಯ ಸಮಯದಲ್ಲಿ ಮಲಗಬೇಡಿ. ಈ ಕೆಲಸಗಳನ್ನು ತಪ್ಪಿ, ಮಾಡಿದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದಲ್ಲದೆ, ನಿಮ್ಮ ಆಸೆಗಳು ಸಹ ಈಡೇರದೆಯೇ ಉಳಿಯಬಹುದು. ಹಾಗಾಗಿ ಈ ತಪ್ಪುಗಳನ್ನು ಮಾಡಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ