AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2025: ಯುಗಾದಿ ಹಬ್ಬದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?

ಈ ವರ್ಷ ಯುಗಾದಿ ಹಬ್ಬ ಮಾರ್ಚ್ 30ರ ಭಾನುವಾರ ಆಚರಿಸಲಾಗುತ್ತಿದೆ. ಈ ಶುಭ ದಿನದಂದು ಮನೆ ಸ್ವಚ್ಛವಾಗಿಟ್ಟುಕೊಳ್ಳುವುದು, ಹೊಸ ಬಟ್ಟೆ ಧರಿಸುವುದು, ದೇವರ ಪೂಜೆ ಮತ್ತು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದೇಳುವುದು ಮುಂತಾದ ಶುಭ ಕಾರ್ಯಗಳನ್ನು ಮಾಡಬೇಕು. ಜಗಳವಾಡುವುದು, ಹಣಕಾಸಿನ ವ್ಯವಹಾರಗಳು, ಮಾಂಸಾಹಾರ ಮತ್ತು ಮದ್ಯಪಾನ, ಕೂದಲು ಮತ್ತು ಉಗುರು ಕತ್ತರಿಸುವುದು, ಹರಿದ ಬಟ್ಟೆ ಧರಿಸುವುದು ಮುಂತಾದ ಕೆಲಸಗಳನ್ನು ಮಾಡಬಾರದು.

Ugadi 2025: ಯುಗಾದಿ ಹಬ್ಬದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?
Ugadi
ಅಕ್ಷತಾ ವರ್ಕಾಡಿ
| Edited By: |

Updated on:Mar 29, 2025 | 5:51 PM

Share

ಈ ವರ್ಷ ಅಂದರೆ 2025ರ ಯುಗಾದಿ ಹಬ್ಬ ಮಾರ್ಚ್ 30ರಂದು ಭಾನುವಾರ ಆಚರಿಸಲಾಗುತ್ತಿದೆ. ಇದು ಹಿಂದೂಗಳಿಗೆ ಹೊಸ ವರ್ಷದ ಆರಂಭ. ಕರ್ನಾಟಕದ ಬಹುಭಾಗದ ಜನರು ಮತ್ತು ಆಂಧ್ರ ಪ್ರದೇಶದವರು ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಯುಗಾದಿ ಹಬ್ಬದ ದಿನದಂದು, ಪೂಜೆ ಸಲ್ಲಿಸಲು ಶುಭ ಸಮಯವೆಂದರೆ ಬೆಳಿಗ್ಗೆ 5 ರಿಂದ 7.30 ರವರೆಗೆ. ಅಲ್ಲದೆ ಬೆಳಿಗ್ಗೆ 9 ರಿಂದ 11.30 ರವರೆಗೆ. ಆದ್ದರಿಂದ ಈ ಶುಭ ದಿನದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಯುಗಾದಿಯಂದು ಮಾಡಬೇಕಾದ ಶುಭ ಕೆಲಸಗಳು ಯಾವುವು?

  • ಯುಗಾದಿಯನ್ನು ಶುಭ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಹಿಂದಿನ ದಿನ ಮನೆಯನ್ನು ಸ್ವಚ್ಛಗೊಳಿಸಬೇಕು.
  • ಯುಗಾದಿಯಂದು ಬ್ರಾಹ್ಮಿ ಮುಹೂರ್ತದಲ್ಲಿ ಏಳಬೇಕು
  • ಮನೆಯನ್ನು ಸ್ವಚ್ಛಗೊಳಿಸಿ ಮತ್ತು ದೈನಂದಿನ ಕೆಲಸಗಳನ್ನು ಪೂರ್ಣಗೊಳಿಸಿ. ನಿಮ್ಮ ಮನೆಯನ್ನು ಹೂವಿನಿಂದ ಜೊತೆಗೆ ಮಾವಿನ ಎಲೆಯ ತೋರಣದಿಂದ ಅಲಂಕರಿಸಿ.
  • ನೀವು ನಿಮ್ಮ ಕೂದಲಿಗೆ ಎಳ್ಳೆಣ್ಣೆಯನ್ನು ಹಚ್ಚಿ ನಂತರ ಸ್ನಾನದ ನೀರಿಗೆ ಒಂದು ಚಿಟಿಕೆ ಅರಿಶಿನವನ್ನು ಸೇರಿಸಿ ಸ್ನಾನ ಮಾಡಿ.
  • ಹೊಸ ಬಟ್ಟೆಗಳನ್ನು ಧರಿಸಬೇಕು. ನಿಮ್ಮ ಹಣೆಯ ಮೇಲೆ ಕುಂಕುಮ ಇರಲಿ.
  • ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸಿ.

ಇದನ್ನೂ ಓದಿ: ಸೂರ್ಯಗ್ರಹಣದ ಸಮಯದಲ್ಲಿ ಈ ಒಂದು ಮಂತ್ರ ಪಠಿಸಿ; ವೃತ್ತಿ-ವ್ಯವಹಾರದಲ್ಲಿ ಜಯ ಸಿಗಲಿದೆ

ಯುಗಾದಿಯಂದು ತಪ್ಪಾಗಿ ಕೂಡ ಮಾಡಬಾರದ ಕೆಲಸಗಳಿವು:

ಯುಗಾದಿ ಹಬ್ಬವು ಹಿಂದೂಗಳಿಗೆ ಹೊಸ ವರ್ಷದ ಆರಂಭ. ಆದ್ದರಿಂದ ವರ್ಷದ ಮೊದಲ ದಿನ ನೀವು ಏನು ಮಾಡುತ್ತಿರೋ ಅದೇ ವರ್ಷ ಪೂರ್ತಿ ಇರುತ್ತದೆ. ಆದ್ದರಿಂದ ವರ್ಷದ ಮೊದಲ ದಿನವನ್ನು ಸಂತೋಷದಿಂದ ಕಳೆಯಿರಿ.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ
  • ಯುಗಾದಿಯಂದು, ತಪ್ಪಾಗಿಯಾದರೂ ಇತರರೊಂದಿಗೆ ಜಗಳವಾಡಬೇಡಿ ಅಥವಾ ವಾದಿಸಬೇಡಿ.
  • ಹಣ ಕೊಡುವುದು ಅಥವಾ ಸಾಲ ಪಡೆಯುವುದು ಮುಂತಾದ ಕೆಲಸಗಳನ್ನು ಸಹ ಮಾಡಬೇಡಿ.
  • ಯುಗಾದಿಯಂದು ತಾಮಸಿಕ ಆಹಾರವನ್ನು ಸೇವಿಸಬೇಡಿ. ಮಾಂಸ ತಿನ್ನಬೇಡಿ ಅಥವಾ ಮದ್ಯಪಾನ ಮಾಡಬೇಡಿ.
  • ಕೂದಲು ಕತ್ತರಿಸುವುದು ಅಥವಾ ಉಗುರು ಕತ್ತರಿಸುವುದು ಕೂಡ ಒಳ್ಳೆಯದಲ್ಲ.
  • ಯುಗಾದಿಯಂದು ಹರಿದ ಬಟ್ಟೆಗಳನ್ನು ಧರಿಸಬೇಡಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:49 am, Fri, 28 March 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?