AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishakh Month 2024: ವೈಶಾಖ ಮಾಸದಲ್ಲಿ ಈ ವಿಷಯಗಳನ್ನು ಮರೆಯಬೇಡಿ!

ವೈಶಾಖದಲ್ಲಿ ನೀರನ್ನು ದಾನ ಮಾಡುವುದರಿಂದ, ವ್ಯಕ್ತಿಯ ಪ್ರತಿಯೊಂದು ಸಮಸ್ಯೆ ಮತ್ತು ದೋಷವು ದೂರವಾಗುತ್ತದೆ, ಜೀವನದ ಸದಾಕಾಲ ಸಂತೋಷ ಸಿಗುತ್ತದೆ ಎಂದು ನಂಬಲಾಗಿದೆ. ಇದಲ್ಲದೆ ವೈಶಾಖ ಮಾಸದಲ್ಲಿ ಮಾಡುವ ದಾನವು ವರ್ಷವಿಡೀ ಮಾಡಿದ ದಾನಕ್ಕೆ ಸಮನಾಗಿದೆ ಎಂದು ಹೇಳಲಾಗುತ್ತದೆ. ಹಾಗಾದರೆ ವೈಶಾಖ ಮಾಸದಲ್ಲಿ ಏನು ಮಾಡಬೇಕು ಮತ್ತು ಮಾಡಬಾರದು ಎಂದು ತಿಳಿದುಕೊಳ್ಳಿ.

Vaishakh Month 2024: ವೈಶಾಖ ಮಾಸದಲ್ಲಿ ಈ ವಿಷಯಗಳನ್ನು ಮರೆಯಬೇಡಿ!
ಸಾಮದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 24, 2024 | 11:20 AM

Share

ವೈಶಾಖ ಮಾಸದಲ್ಲಿ ಶಾಖ ಉತ್ತುಂಗದಲ್ಲಿರುತ್ತದೆ. ಇದು ಎ. 24 ರಿಂದ ಮೇ 23 ರವರೆಗೆ ಇರುತ್ತದೆ. ಹಾಗಾಗಿ ಈ ಸಮಯದಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಮತ್ತು ರಸಭರಿತ ಹಣ್ಣುಗಳನ್ನು ದಾನ ಮಾಡುವುದು ಶುಭವೆಂದು ಪರಿಗಣಿಸಲಾಗುತ್ತದೆ. ವೈಶಾಖದಲ್ಲಿ ನೀರನ್ನು ದಾನ ಮಾಡುವುದರಿಂದ, ವ್ಯಕ್ತಿಯ ಪ್ರತಿಯೊಂದು ಸಮಸ್ಯೆ ಮತ್ತು ದೋಷವು ದೂರವಾಗುತ್ತದೆ, ಜೀವನದ ಸದಾಕಾಲ ಸಂತೋಷ ಸಿಗುತ್ತದೆ ಎಂದು ನಂಬಲಾಗಿದೆ. ಇದಲ್ಲದೆ ವೈಶಾಖ ಮಾಸದಲ್ಲಿ ಮಾಡುವ ದಾನವು ವರ್ಷವಿಡೀ ಮಾಡಿದ ದಾನಕ್ಕೆ ಸಮನಾಗಿದೆ ಎಂದು ಹೇಳಲಾಗುತ್ತದೆ. ಹಾಗಾದರೆ ವೈಶಾಖ ಮಾಸದಲ್ಲಿ ಏನು ಮಾಡಬೇಕು ಮತ್ತು ಮಾಡಬಾರದು ಎಂದು ತಿಳಿದುಕೊಳ್ಳಿ.

ಯಾವ ರೀತಿಯ ವಸ್ತುಗಳನ್ನು ದಾನ ಮಾಡಬೇಕು?

ಈ ತಿಂಗಳು, ಸಾಧ್ಯವಾದಷ್ಟು ಪ್ರಾಣಿ ಮತ್ತು ಪಕ್ಷಿಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿ, ಮರ ಗಿಡಗಳಿಗೆ ನೀರು ಹಾಕುವುದನ್ನು ಕಡಿಮೆ ಮಾಡಬೇಡಿ. ಇನ್ನು ಅಗತ್ಯ ಇರುವವರಿಗೆ ಛತ್ರಿ, ಬೂಟು, ಚಪ್ಪಲಿ, ತಂಪಾದ ಪಾನೀಯಗಳನ್ನು ದಾನ ಮಾಡಿ. ಇದರಿಂದ ದೇವರ ಆಶೀರ್ವಾದ ಲಭಿಸುವುದಲ್ಲದೆ ನಿಮ್ಮಿಂದ ಕೆಲವರಿಗೆ ಸಹಾಯವಾಗುತ್ತದೆ. ಇದೆಲ್ಲದರಿಂದಾಗಿ ನಿಮಗೆ ಮತ್ತು ನಿಮ್ಮ ಕುಟುಂಬದವರಿಗೂ ಕೂಡ ಒಳ್ಳೆಯ ಫಲಗಳು ಸಿಗುತ್ತದೆ.

ಈ ಕ್ರಮಗಳನ್ನು ಪಾಲನೆ ಮಾಡಿ

ವೈಶಾಖ ಮಾಸದಲ್ಲಿ ಕರಿದ ಮತ್ತು ಮಸಾಲೆಯುಕ್ತ ಆಹಾರವನ್ನು ಆದಷ್ಟು ತಪ್ಪಿಸಿ, ಇದು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ದಿನದ ಒಂದು ಸಮಯ ಆಹಾರವನ್ನು ಸೇವನೆ ಮಾಡಿ. ಆಗದವರು ಹಣ್ಣು, ಆರೋಗ್ಯಕರ ಪಾನೀಯಗಳನ್ನು ಹೆಚ್ಚಾಗಿ ಸೇವನೆ ಮಾಡಿ. ದೇಹಕ್ಕೆ ಹೊಸ ಎಣ್ಣೆ ಅಥವಾ ಕ್ರಿಮ್ ಬಳಕೆ ಮಾಡುವುದನ್ನು ಕಡಿಮೆ ಮಾಡಿ. ನೆಲದ ಮೇಲೆ ಅಥವಾ ಚಾಪೆಯ ಮೇಲೆ ಮಲಗಿ.

ಈ ತಿಂಗಳು ವಿಷ್ಣುವಿಗೆ ವಿಶೇಷ ಪೂಜೆ ಮಾಡಬೇಕು. ಪ್ರತಿದಿನ ಸ್ನಾನ ಮಾಡಿದ ನಂತರ ತುಳಸಿ ಮತ್ತು ಕಿಚಡಿಯನ್ನು ದೇವರಿಗೆ ಅರ್ಪಿಸಿ ಎಳ್ಳಿನ ಪಂಚಕಜ್ಜಾಯ ಅಥವಾ ಎಳ್ಳು ಬೆರೆಸಿದ ಸಿಹಿ ತಿಂಡಿಗಳನ್ನು ದೇವರಿಗೆ ನೈವೇದ್ಯ ಮಾಡಿ ಬಳಿಕ ಪ್ರಸಾದವಾಗಿ ಸೇವನೆ ಮಾಡಿ. ಈ ಮಾಸದಲ್ಲಿ ಎಳ್ಳಿನ ಬೀಜಗಳ ಉಪಯೋಗ ಮಾಡಬೇಕು ಇದು ನಿಮ್ಮ ಆರೋಗ್ಯವನ್ನು ನಿಯಂತ್ರಣದಲ್ಲಿಡುತ್ತದೆ.

ಇದನ್ನೂ ಓದಿ: ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆ ಯಾವ ದಿಕ್ಕಿನಲ್ಲಿರಬೇಕು

ಇನ್ನು ವೈಶಾಖ ಮಾಸದಲ್ಲಿ ಬರುವ ಅಕ್ಷಯ ತೃತೀಯವು ಶುಭ ದಿನವಾಗಿದೆ. ಈ ದಿನ, ಶುಭ ಕಾರ್ಯಗಳನ್ನು ಮಾಡುವುದು, ಹೊಸ ಕೆಲಸವನ್ನು ಪ್ರಾರಂಭಿಸುವುದು, ಚಿನ್ನ-ಬೆಳ್ಳಿ, ವಾಹನ ಮುಂತಾದ ವಸ್ತುಗಳನ್ನು ಖರೀದಿಸುವುದರಿಂದ ಲಕ್ಷ್ಮೀ ದೇವಿಯು ಕೃಪಾಕಟಾಕ್ಷ ವರ್ಷಪೂರ್ತಿ ಇರುತ್ತದೆ ಎಂದು ನಂಬಲಾಗಿದೆ. ಜೊತೆಗೆ ವೈಶಾಖದಲ್ಲಿ ವಿಷ್ಣುವಿನ ಆರಾಧನೆಯ ಸಮಯದಲ್ಲಿ ಪ್ರತಿದಿನ “ಓಂ ಮಾಧವಾಯ ನಮಃ” ಎಂಬ ಮಂತ್ರವನ್ನು ಪಠಿಸಿ.

ಈ ತಿಂಗಳು, ಕಂಚಿನ ಪಾತ್ರೆಗಳಲ್ಲಿ ಆಹಾರ ಸೇವನೆ ಮಾಡಬೇಡಿ. ಬಿಸಿ ನೀರಿನಿಂದ ಸ್ನಾನ ಮಾಡಬಾರದು ಎಂಬುದನ್ನು ಮರೆಯಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ