AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishakh Purnima 2024: ವೈಶಾಖ ಪೂರ್ಣಿಮೆಯಂದು ಅರಳಿ ಮರವನ್ನು ಏಕೆ ಪೂಜಿಸಬೇಕು?

ಈ ಹುಣ್ಣಿಮೆಯಂದು ದಾನ ಮಾಡುವುದು ಮಾತ್ರವಲ್ಲ ಅರಳಿ ಮರವನ್ನು ಪೂಜಿಸುವುದಕ್ಕೂ ಕೂಡ ವಿಶೇಷ ಮಹತ್ವವನ್ನು ನೀಡಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ಈ ದಿನ ಅರಳಿ ಮರವನ್ನು ಪೂಜಿಸುವ ಮೂಲಕ, ಜನರು ವಿಷ್ಣುವಿನ ಆಶೀರ್ವಾದವನ್ನು ಪಡೆಯುತ್ತಾರೆ. ಅಲ್ಲದೆ ಗುರು ಗ್ರಹಕ್ಕೆ ಸಂಬಂಧ ಪಟ್ಟ ದೋಷಗಳಿದ್ದರೆ ಈ ದಿನ ಗಿಡಗಳನ್ನು ನೆಡುವ ಮೂಲಕ ಅದನ್ನು ಬಗೆಹರಿಸಿಕೊಳ್ಳಬಹುದು. ವರ್ಷದ ಎಲ್ಲಾ ಹನ್ನೆರಡು ಹುಣ್ಣಿಮೆಗಳು ವಿಶೇಷ ಮಹತ್ವವನ್ನು ಹೊಂದಿದೆ.

Vaishakh Purnima 2024: ವೈಶಾಖ ಪೂರ್ಣಿಮೆಯಂದು ಅರಳಿ ಮರವನ್ನು ಏಕೆ ಪೂಜಿಸಬೇಕು?
ಪ್ರೀತಿ ಭಟ್​, ಗುಣವಂತೆ
| Edited By: |

Updated on:May 20, 2024 | 6:09 PM

Share

ವೈಶಾಖ ಮಾಸದ ಹುಣ್ಣಿಮೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ಹುಣ್ಣಿಮೆಯನ್ನು ಅರಳಿ ಹುಣ್ಣಿಮೆ ಮತ್ತು ಬುದ್ಧ ಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಈ ವರ್ಷ ವೈಶಾಖ ಹುಣ್ಣಿಮೆಯನ್ನು ಮೇ 23 ರ ಗುರುವಾರದಂದು ಆಚರಣೆ ಮಾಡಲಾಗುತ್ತದೆ. ಈ ಪೂರ್ಣಿಮೆಯಂದು ದಾನ ಮಾಡುವುದು ಮಾತ್ರವಲ್ಲ ಅರಳಿ ಮರವನ್ನು ಪೂಜಿಸುವುದಕ್ಕೂ ಕೂಡ ವಿಶೇಷ ಮಹತ್ವವನ್ನು ನೀಡಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ಈ ದಿನ ಅರಳಿ ಮರವನ್ನು ಪೂಜಿಸುವ ಮೂಲಕ, ಜನರು ವಿಷ್ಣುವಿನ ಆಶೀರ್ವಾದವನ್ನು ಪಡೆಯುತ್ತಾರೆ. ಅಲ್ಲದೆ ಗುರು ಗ್ರಹಕ್ಕೆ ಸಂಬಂಧ ಪಟ್ಟ ದೋಷಗಳಿದ್ದರೆ ಈ ದಿನ ಗಿಡಗಳನ್ನು ನೆಡುವ ಮೂಲಕ ಅದನ್ನು ಬಗೆಹರಿಸಿಕೊಳ್ಳಬಹುದು. ವರ್ಷದ ಎಲ್ಲಾ ಹನ್ನೆರಡು ಹುಣ್ಣಿಮೆಗಳು ವಿಶೇಷ ಮಹತ್ವವನ್ನು ಹೊಂದಿದೆ. ಆದರೆ ವೈಶಾಖ ತಿಂಗಳಲ್ಲಿ ಮಾತ್ರ ಶ್ರೀ ಹರಿಯೊಂದಿಗೆ ಅರಳಿ ಮರವನ್ನು ಸಹ ಪೂಜಿಸಲಾಗುತ್ತದೆ, ಆದ್ದರಿಂದ ವೈಶಾಖ ಹುಣ್ಣಿಮೆಯನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ.

ಅರಳಿ ಮರವನ್ನು ಪೂಜಿಸುವುದರಿಂದ ಆಗುವ ಪ್ರಯೋಜನಗಳೇನು?

  1. ವೈಶಾಖ ಹುಣ್ಣಿಮೆಯಂದು ಅರಳಿ ಮರವನ್ನು ಪೂಜಿಸುವುದರಿಂದ ಜಾತಕದಲ್ಲಿ ಶನಿ, ಗುರು ಮತ್ತು ಇತರ ಗ್ರಹಕ್ಕೆ ಸಂಬಂಧ ಪಟ್ಟಂತೆ ಯಾವುದಾದರೂ ದೋಷವಿದ್ದಲ್ಲಿ ಪರಿಹಾರವಾಗುತ್ತದೆ.
  2. ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರು ಅರಳಿ ಮರದಲ್ಲಿ ವಾಸಿಸುತ್ತಾರೆ. ಬೆಳಿಗ್ಗೆ ಎದ್ದು, ಅದಕ್ಕೆ ನೀರನ್ನು ಅರ್ಪಿಸಿ, ಪೂಜೆ ಮಾಡಿ ದೀಪ ಹಚ್ಚುವುದರಿಂದ ಮೂರು ದೇವತೆಗಳ ಆಶೀರ್ವಾದ ಸಿಗುತ್ತದೆ.
  3. ಅರಳಿ ಮರದ ಮೇಲೆ ಹಾಲು ಮತ್ತು ಕಪ್ಪು ಎಳ್ಳನ್ನು ಅರ್ಪಿಸುವುದರಿಂದ ಪಿತೃದೋಷ ಇದ್ದಲ್ಲಿ ನಿವಾರಣೆಯಾಗುತ್ತದೆ ಜೊತೆಗೆ ಅವರ ಆಶೀರ್ವಾದ ಸಿಗುತ್ತದೆ.
  4. ಲಕ್ಷ್ಮೀ ದೇವಿಯು ಸೂರ್ಯೋದಯದ ನಂತರ ಅರಳಿ ಮರದಲ್ಲಿ ವಾಸ ಮಾಡುತ್ತಾಳೆ ಆದ್ದರಿಂದ ಸೂರ್ಯೋದಯದ ನಂತರ ಅರಳಿ ಮರವನ್ನು ಪೂಜಿಸುವುದು ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
  5. ಜಾತಕದಲ್ಲಿ ವಿಧವಾ ಯೋಗ ಇದ್ದರೆ, ಮೊದಲು ಅರಳಿ ಮರವನ್ನು ಶುಭ ಲಗ್ನದಲ್ಲಿ ಮದುವೆಯಾಗುವ ಮೂಲಕ, ವೈಧವ್ಯ ಯೋಗಕ್ಕೆ ಪರಿಹಾರ ನೀಡಲಾಗುತ್ತದೆ. ಈ ಸಂಪ್ರದಾಯ ಕೆಲವು ಭಾಗಗಳಲ್ಲಿ ರೂಢಿಯಲ್ಲಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:46 pm, Mon, 20 May 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್