AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasant Panchami 2024: ವಸಂತ ಪಂಚಮಿಯ ದಿನ ಈ ವಸ್ತುಗಳನ್ನು ದಾನ ಮಾಡಿ, ಭವಿಷ್ಯವೇ ಬದಲಾಗುತ್ತೆ!

Basant Panchami 2024: ವಸಂತ ಪಂಚಮಿಯ ಸಂದರ್ಭದಲ್ಲಿ ನೀವು ಬಡ ಮಕ್ಕಳು ಮತ್ತು ಹಸಿದ ಜನರಿಗೆ ಅಗತ್ಯ ವಸ್ತುಗಳನ್ನು ದಾನ ಮಾಡಬಹುದು. ಈ ದಿನದಂದು ದಾನ ಮಾಡುವುದು ಸಹ ಬಹಳ ಮುಖ್ಯ. ಅಲ್ಲದೆ ವಿಶೇಷ ವಸ್ತುಗಳನ್ನು ದಾನ ಮಾಡುವ ಮೂಲಕ, ಜನರು ಶುಭ ಫಲಗಳನ್ನು ಪಡೆಯುತ್ತಾರೆ. ಹಾಗಾದರೆ ವಸಂತ ಪಂಚಮಿಯ ದಿನದಂದು ಯಾವ ವಸ್ತುಗಳನ್ನು ದಾನವಾಗಿ ನೀಡಬೇಕು ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ.

Vasant Panchami 2024: ವಸಂತ ಪಂಚಮಿಯ ದಿನ ಈ ವಸ್ತುಗಳನ್ನು ದಾನ ಮಾಡಿ, ಭವಿಷ್ಯವೇ ಬದಲಾಗುತ್ತೆ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 14, 2024 | 9:55 AM

Share

ಹಿಂದೂ ಧರ್ಮದಲ್ಲಿ ಜ್ಞಾನದ ದೇವತೆಯಾದ, ತಾಯಿ ಸರಸ್ವತಿಯ ಆರಾಧನೆ ಮಾಡುವ ಹಬ್ಬಗಳಲ್ಲಿ ಬಹಳ ಪ್ರಮುಖವಾದ ವಸಂತ ಅಥವಾ ಬಸಂತ್ ಪಂಚಮಿಯನ್ನು ಪ್ರತಿ ವರ್ಷ ಮಾಘ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಸಂತೋಷದಿಂದ ಆಚರಣೆ ಮಾಡಲಾಗುತ್ತದೆ. ಈ ದಿನ ತಾಯಿ ಸರಸ್ವತಿಯನ್ನು ಪೂಜಿಸುವ ಮೂಲಕ, ಜೀವನದಲ್ಲಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನವನ್ನು ಆಚರಣೆ ಮಾಡುವ ವ್ಯಕ್ತಿಗಳಿಗೆ ಸರಸ್ವತಿ ದೇವಿಯೂ ಪ್ರತಿ ಹೆಜ್ಜೆಗೂ ಬೆನ್ನೆಲುಬಾಗಿ ನಿಲ್ಲುತ್ತಾಳೆ ಎಂದು ನಂಬಲಾಗಿದೆ. ಹಾಗಾಗಿ ಈ ದಿನದಂದು ದಾನ ಮಾಡುವುದು ಸಹ ಬಹಳ ಮುಖ್ಯ. ವಸಂತ ಪಂಚಮಿಯಂದು ವಿಶೇಷ ವಸ್ತುಗಳನ್ನು ದಾನ ಮಾಡುವ ಮೂಲಕ, ಜನರು ಶುಭ ಫಲಗಳನ್ನು ಪಡೆಯುತ್ತಾರೆ. ಹಾಗಾದರೆ ವಸಂತ ಪಂಚಮಿಯ ದಿನದಂದು ಯಾವ ವಸ್ತುಗಳನ್ನು ದಾನವಾಗಿ ನೀಡಬೇಕು? ಇಲ್ಲಿದೆ ಮಾಹಿತಿ.

ಪುರಾಣಗಳ ಪ್ರಕಾರ, ವಸಂತ ಪಂಚಮಿಯ ಸಂದರ್ಭದಲ್ಲಿ ದಾನ ಮಾಡುವುದು ಶುಭ ಕಾರ್ಯಗಳಲ್ಲಿ ಒಂದಾಗಿದೆ. ಇದು ನಿಮಗೆ ಸರಸ್ವತಿ ದೇವಿಯನ್ನು ಪೂಜೆ ಮಾಡಿದಷ್ಟು ಪುಣ್ಯವನ್ನು ನೀಡುತ್ತದೆ. ಬಸಂತ್ ಅಥವಾ ವಸಂತ ಪಂಚಮಿಯ ದಿನವನ್ನು ಜ್ಞಾನದ ದೇವತೆಯಾದ ತಾಯಿ ಸರಸ್ವತಿಯ ಆರಾಧನೆ ಮಾಡುವುದರಿಂದ ಆಕೆಗೆ ಸಂಬಂಧಿಸಿದ ಅಥವಾ ಪ್ರೀಯವಾದ ವಸ್ತುಗಳನ್ನು ದಾನ ಮಾಡುವ ಮೂಲಕ ಶುಭ ಫಲಗಳನ್ನು ಪಡೆಯಬಹುದು ಜೊತೆಗೆ ಈ ಕಾರ್ಯದಿಂದ ಒಬ್ಬ ವ್ಯಕ್ತಿ ಅಗತ್ಯ ಇರುವ ಅನೇಕ ಜನರಿಗೆ ಸಹಾಯ ಮಾಡಬಹುದು. ಇದು ನಿಮಗೂ ಮತ್ತು ಸಮಾಜಕ್ಕೂ ಒಳ್ಳೆಯದು. ಇದೆಲ್ಲದರ ಹೊರತಾಗಿ ಇಂತಹ ಕೆಲಸಗಳು ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುತ್ತದೆ.

ವಸಂತ ಪಂಚಮಿಯಂದು ಈ ವಸ್ತುಗಳನ್ನು ದಾನ ಮಾಡಿ;

-ಈ ದಿನ ಪುಸ್ತಕ, ಪೆನ್ಸಿಲ್, ಪೆನ್ನು, ನೋಟ್ ಬುಕ್ ಗಳು ಮುಂತಾದ ಶಿಕ್ಷಣಕ್ಕೆ ಸಂಬಂಧಿಸಿದ ವಸ್ತುಗಳನ್ನು ಅಗತ್ಯ ಇರುವವರಿಗೆ ದಾನ ಮಾಡುವುದು ತುಂಬಾ ಒಳ್ಳೆಯದು. ಇದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ.

-ವಸಂತ ಪಂಚಮಿಯಂದು ಆಹಾರ ಪದಾರ್ಥಗಳನ್ನು ಬಡವರಿಗೆ ಅಥವಾ ಅಗತ್ಯ ಇರುವವರಿಗೆ ನೀಡುವುದು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಆಹಾರ ದಾನವು ಜನರಿಗೆ ಸಹಾಯ ಮಾಡಲು ಇರುವ ಪ್ರಮುಖ ದಾರಿಯಾಗಿದೆ. ಇದರಿಂದ ನಿಮಗೆ ಪುಣ್ಯ ಫಲ ಮತ್ತು ಇನ್ನೊಬ್ಬರಿಗೆ ಸಹಾಯ ಎರಡೂ ಕೆಲಸವೂ ಆಗುತ್ತದೆ.

-ಇನ್ನು ವಸಂತ ಅಥವಾ ಬಸಂತ್ ಪಂಚಮಿಯಂದು ಬಡವರಿಗೆ ಬಟ್ಟೆಗಳನ್ನು ನೀಡುವುದು ಸಹ ಉತ್ತಮ ದಾನವಾಗಿದೆ. ಇದು ಚಳಿಗಾಲವಾಗಲಿ ಅಥವಾ ಬೇಸಿಗೆ ಕಾಲವಾಗಲಿ ವಾತಾವರಣಕ್ಕೆ ತಕ್ಕಂತೆ ಸುರಕ್ಷತೆ ನೀಡುತ್ತದೆ.

-ತಾಯಿ ಸರಸ್ವತಿ ಹಳದಿ ಬಣ್ಣವನ್ನು ತುಂಬಾ ಇಷ್ಟಪಡುತ್ತಾಳೆ. ಹಾಗಾಗಿ ಇಂತಹ ವಿಶೇಷ ಸಂದರ್ಭದಲ್ಲಿ ಹಳದಿ ಬಣ್ಣದ ವಸ್ತುಗಳನ್ನು ದಾನ ಮಾಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಹಳದಿ ಬಣ್ಣವಿರುವ ಹಣ್ಣು, ಬಟ್ಟೆ ಅಥವಾ ಆಹಾರ ಪದಾರ್ಥಗಳನ್ನು ದಾನ ಮಾಡುವುದು ಶುಭವಾಗಿದೆ. ಅದಲ್ಲದೆ ಇದು ನಿಮ್ಮ ಪಾಪಗಳಿಂದ ಮುಕ್ತಿ ನೀಡುವ ಮೂಲಕ ಮುಂದಿನ ಭವಿಷ್ಯವನ್ನು ಸುಧಾರಿಸುತ್ತದೆ. ಶುಭ ಫಲಗಳನ್ನು ನೀಡುತ್ತದೆ.

ಇದನ್ನೂ ಓದಿ: ವಸಂತ ಪಂಚಮಿ ವ್ರತದ ನಿಯಮಗಳೇನು? ವ್ರತದಲ್ಲಿ ಏನನ್ನು ತಿನ್ನಬೇಕು?

-ಬಸಂತ್ ಅಥವಾ ವಸಂತ ಪಂಚಮಿಯನ್ನು ಆಚರಿಸುವ ಜನರು ದೇವಾಲಯ ಅಥವಾ ಇನ್ನಿತರ ಗುಡಿಗಳಲ್ಲಿ ಆಹಾರ, ಹಣ ಅಥವಾ ಇತರ ಅಗತ್ಯ ಧಾರ್ಮಿಕ ದೇಣಿಗೆಗಳನ್ನು ನೀಡಬಹುದು. ಇದು ನಿಮ್ಮ ಮತ್ತು ಕುಟುಂಬದ ಪ್ರಗತಿಗೆ ದೇವಿಯ ಆಶೀರ್ವಾದ ಸಿಗಲು ನೆರವಾಗುತ್ತದೆ.

-ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಸಸ್ಯಗಳನ್ನು ದಾನ ಮಾಡುವುದು ಸಹ ಬಹಳ ಮುಖ್ಯ ಎನಿಸಿಕೊಳ್ಳುತ್ತದೆ. ಇದು ಪರಿಸರವನ್ನು ರಕ್ಷಿಸಲು ಸಹಾಯ ಮಾಡುತ್ತದೆ ಜೊತೆಗೆ ಒಂದು ಸಸ್ಯವನ್ನು ನೆಟ್ಟು ಬೆಳೆಸಿದ ಪುಣ್ಯ ನಿಮಗೂ ಮತ್ತು ನಿಮ್ಮ ಪ್ರೀತಿ ಪಾತ್ರರಿಗೂ ದೊರೆಯುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ