AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತು ಸಲಹೆ ಪಾಲಿಸುತ್ತಾರೆ. ಆದರೆ ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಈ ಬಗ್ಗೆ ನಿರ್ಲಕ್ಷ್ಯಿಸಬಾರದು ಎಂದು ಎಚ್ಚರಿಸುತ್ತಾರೆ.

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ!
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on: Dec 23, 2025 | 11:18 AM

Share

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡಾ ವಾಸ್ತುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತುವಿನ ಸಲಹೆಯನ್ನು ಪಾಲಿಸುತ್ತಾರೆ. ಆದರೆ ಅನೇಕ ಜನರು ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಅದನ್ನು ಎಂದಿಗೂ ತಪ್ಪು ದಿಕ್ಕಿನಲ್ಲಿ ಇಡಬಾರದು ಎಂದು ಎಚ್ಚರಿಸುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಕಸದ ಬುಟ್ಟಿಯನ್ನು ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಇಡಲೇಬಾರದು. ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ದಿಕ್ಕುಗಳು ದೇವತೆಗಳಿಗೆ ಸಂಬಂಧಿಸಿವೆ. ಆದ್ದರಿಂದ, ಈ ಎರಡು ದಿಕ್ಕುಗಳಲ್ಲಿ ಕಸದ ಬುಟ್ಟಿಯನ್ನು ಇಡುವುದರಿಂದ ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತವೆ.

ಅದೇ ರೀತಿ, ಯಾವುದೇ ಸಂದರ್ಭದಲ್ಲಿ ಮುಖ್ಯ ದ್ವಾರದಲ್ಲಿ ಅಥವಾ ಸ್ನಾನಗೃಹದಲ್ಲಿ ಕಸದ ಬುಟ್ಟಿಯನ್ನು ಇಡಬಾರದು. ಇದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮುಖ್ಯ ದ್ವಾರದಲ್ಲಿ ಅಥವಾ ಸ್ನಾನಗೃಹದಲ್ಲಿ ಕಸದ ಬುಟ್ಟಿಯನ್ನು ಇಡುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಇದು ಮನೆಯೊಳಗೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ವಾಸ್ತು ಶಾಸ್ತ್ರದ ಪ್ರಕಾರ, ಧನಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸಬೇಕು, ಆದ್ದರಿಂದ ಪಶ್ಚಿಮ ಅಥವಾ ನೈಋತ್ಯ ದಿಕ್ಕಿನಲ್ಲಿ ಕಸದ ತೊಟ್ಟಿಯನ್ನು ಇಡುವುದು ತುಂಬಾ ಶುಭ. ಇದು ಮನೆಯೊಳಗಿನ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಶಾಂತಿಯನ್ನು ತರುತ್ತದೆ. ಇದು ಕುಟುಂಬದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ