AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯೊಳಗೆ ಚಪ್ಪಲಿ ಹಾಕಿಕೊಂಡು ಓಡಾಡುವ ಅಭ್ಯಾಸ ನಿಮಗಿದ್ಯಾ? ವಾಸ್ತು ಸಲಹೆ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಚಪ್ಪಲಿ ಹಾಕಿಕೊಂಡು ಓಡಾಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ, ಸಂತೋಷ ಮತ್ತು ಸಮೃದ್ಧಿ ದೂರವಾಗುತ್ತದೆ. ಅಡುಗೆಮನೆ ಅಥವಾ ಪೂಜಾ ಕೋಣೆಯಲ್ಲಿ ಪಾದರಕ್ಷೆ ಧರಿಸುವುದು ಗ್ರಹಗಳ ದುಷ್ಪರಿಣಾಮಗಳಿಗೆ ಕಾರಣವಾಗಬಹುದು. ಹಳೆಯ ಚಪ್ಪಲಿಗಳು ಶನಿ-ರಾಹು ಪ್ರಭಾವವನ್ನು ಆಕರ್ಷಿಸುತ್ತವೆ. ಸರಿಯಾದ ಜಾಗದಲ್ಲಿ ಚಪ್ಪಲಿಗಳನ್ನು ಇಟ್ಟುಕೊಳ್ಳುವ ಮೂಲಕ ಮನೆಯಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಸಬಹುದು.

Vasthu Tips: ಮನೆಯೊಳಗೆ ಚಪ್ಪಲಿ ಹಾಕಿಕೊಂಡು ಓಡಾಡುವ ಅಭ್ಯಾಸ ನಿಮಗಿದ್ಯಾ? ವಾಸ್ತು ಸಲಹೆ ಇಲ್ಲಿದೆ
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on: Nov 29, 2025 | 11:36 AM

Share

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ವಸ್ತುಗಳನ್ನು ಸರಿಯಾದ ಸ್ಥಳದಲ್ಲಿ ಸರಿಯಾದ ರೀತಿಯಲ್ಲಿ ಇರಿಸದಿದ್ದರೆ ನಕಾರಾತ್ಮಕ ಶಕ್ತಿ ಮನೆಯ ಸದಸ್ಯರ ಮೇಲೆ ಪ್ರಭಾವ ಬೀರಿ, ಜೀವನದಲ್ಲಿ ಸಂತೋಷವು ಕಣ್ಮರೆಯಾಗುತ್ತದೆ. ಅಂದರೆ ಕುಟುಂಬ ಕ್ರಮೇಣ ಬಡತನದತ್ತ ಸಾಗುತ್ತದೆ ಎಂದು ಹೇಳಲಾಗುತ್ತದೆ. ಅಂತಹ ವಾಸ್ತು ಶಾಸ್ತ್ರದಲ್ಲಿ ನಾವು ಧರಿಸುವ ಚಪ್ಪಲಿಗಳ ಬಗ್ಗೆಯೂ ನಿಯಮಗಳಿವೆ. ವಾಸ್ತು ಶಾಸ್ತ್ರಜ್ಞರು ಹೇಳುವಂತೆ ಚಪ್ಪಲಿಗಳನ್ನು ತಪ್ಪಾಗಿ ಇಡುವುದು, ಅಡುಗೆಮನೆ ಅಥವಾ ಪೂಜಾ ಕೋಣೆಯಲ್ಲಿ ಪಾದರಕ್ಷೆಗಳನ್ನು ಧರಿಸುವುದರಿಂದ ಅಶಾಂತಿ, ಅಡೆತಡೆಗಳು ಮತ್ತು ನಕಾರಾತ್ಮಕತೆ ಹೆಚ್ಚಾಗುತ್ತದೆ.

ಜ್ಯೋತಿಷಿ ಸಂಜೀತ್ ಕುಮಾರ್ ಮಿಶ್ರಾ ಅವರ ಪ್ರಕಾರ, ಅಡುಗೆಮನೆಗೆ ಶೂ ಧರಿಸಿ ಪ್ರವೇಶಿಸುವ ವ್ಯಕ್ತಿಯ ಮೇಲೆ ಗ್ರಹಗಳು ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಶೂಗಳು ಮಾತ್ರವಲ್ಲ, ಹೊರಗೆ ಧರಿಸುವ ಚಪ್ಪಲಿಗಳು ಸಹ ಈ ವರ್ಗಕ್ಕೆ ಸೇರುತ್ತವೆ. ನಿಮಗೆ ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದಿದ್ದರೆ ಅಡುಗೆಮನೆಗೆ ಬಳಸಲೆಂದೇ ಬೇರೆ ಚಪ್ಪಲಿಗಳನ್ನು ಇಟ್ಟುಕೊಳ್ಳಲು ಪ್ರಯತ್ನಿಸಿ ಅಥವಾ ಡೋರ್‌ಮ್ಯಾಟ್ ಬಳಸಿ.

ಇದನ್ನೂ ಓದಿ: ಮನೆಗೆ ಹೊಸ ವರ್ಷದ ಕ್ಯಾಲೆಂಡರ್ ತರುತ್ತಿದ್ದೀರಾ? ಹಾಗಿದ್ರೆ ಈ ವಿಷ್ಯ ತಿಳಿದುಕೊಳ್ಳಿ

ಹಳೆಯ ಚಪ್ಪಲಿಗಳು ಶನಿ ಮತ್ತು ರಾಹುವನ್ನು ಆಕರ್ಷಿಸುತ್ತವೆ. ಇದು ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ, ಯಾವಾಗಲೂ ಸ್ವಚ್ಛವಾದ ಬಟ್ಟೆ ಮತ್ತು ಚಪ್ಪಲಿ ಶೂಗಳನ್ನು ಧರಿಸುವುದರಿಂದ ನಿಮ್ಮ ವ್ಯಕ್ತಿತ್ವ ಸುಧಾರಿಸುತ್ತದೆ.

ಅನೇಕ ಜನರು ಹೊರಗೆಡೆ ಹಾಕಿಕೊಂಡು ಹೋಗಿದ್ದ ಚಪ್ಪಲಿಗಳನ್ನು ಮನೆಯೊಳಗೆ ಹಾಕಿಕೊಂಡು ಬಂದು ಹಾಸಿಗೆಯ ಬಳಿ ಅವುಗಳನ್ನು ತೆಗೆಯುತ್ತಾರೆ, ಅದು ಸರಿಯಲ್ಲ. ಶೆಲ್ಫ್‌ನಲ್ಲಿ ನಿರ್ದಿಷ್ಟ ಸ್ಥಳದಲ್ಲಿ ಶೂಗಳನ್ನು ಇರಿಸಿ. ತಲೆಯ ಬಳಿ ಶೂಗಳನ್ನು ಇಟ್ಟುಕೊಳ್ಳುವುದರಿಂದ ಮಾನಸಿಕ ಸಮಸ್ಯೆಗಳ ಜೊತೆಗೆ ಒತ್ತಡವೂ ಹೆಚ್ಚಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ