AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu for Wedding Cards: ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ಮುನ್ನ ಈ ವಾಸ್ತು ನಿಯಮ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಮದುವೆ ಆಮಂತ್ರಣ ಪತ್ರಿಕೆಗಳು ಸಖತ್​ ಟ್ರೆಂಡಿಯಾಗಿರುತ್ತವೆ. ಇದಕ್ಕಾಗಿ ಸಾವಿರಾರೂ ರೂಪಾಯಿ ಹಣ ಖರ್ಚು ಮಾಡುವುದು ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಯಾವುದೇ ಹೊಸ ಟ್ರೆಂಡ್​ ಬಂದರೂನು ಅದರಲ್ಲಿ ವಾಸ್ತು ನಿಯಮ ಪಾಲಿಸುವುದು ಅಗತ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ಮದುವೆಯ ಆಮಂತ್ರಣ ಪತ್ರಿಕೆ ಹೇಗಿರಬೇಕು, ಅದರಲ್ಲಿ ಯಾವ ಬಣ್ಣ, ಪದ ಮತ್ತು ಚಿಹ್ನೆಗಳು ಇರಬೇಕು ಎಂಬುದನ್ನು ವಾಸ್ತು ಶಾಸ್ತ್ರ ವಿವರಿಸುತ್ತದೆ.

Vastu for Wedding Cards: ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ಮುನ್ನ ಈ ವಾಸ್ತು ನಿಯಮ ತಿಳಿದುಕೊಳ್ಳಿ
ಮದುವೆಯ ಆಮಂತ್ರಣ ಪತ್ರಿಕೆ
ಅಕ್ಷತಾ ವರ್ಕಾಡಿ
|

Updated on:Jan 21, 2026 | 2:08 PM

Share

ಸನಾತನ ಧರ್ಮದ ಗ್ರಂಥಗಳಲ್ಲಿ ಮದುವೆ ಸೇರಿದಂತೆ 16 ಸಂಸ್ಕಾರಗಳನ್ನು ವಿವರಿಸಲಾಗಿದೆ. ಅವುಗಳಲ್ಲಿ ವಿವಾಹವನ್ನು ಮಾನವನ ಜೀವನದ ಅತ್ಯಂತ ಪವಿತ್ರ ಮತ್ತು ಮಹತ್ವದ ಹಂತವೆಂದು ಪರಿಗಣಿಸಲಾಗುತ್ತದೆ. ಈ ಕಾರಣಕ್ಕೇ ಮದುವೆಯ ಆಮಂತ್ರಣ ಪತ್ರಿಕೆಗೂ ವಿಶೇಷ ಮಹತ್ವವಿದೆ. ಅದು ಕೇವಲ ಆಮಂತ್ರಣ ಪತ್ರವಲ್ಲ, ಬದಲಾಗಿ ಹೊಸ ಜೀವನದ ಆರಂಭವನ್ನು ಘೋಷಿಸುವ ಮೊದಲ ಅಧಿಕೃತ ಸಂದೇಶವಾಗಿದೆ.

ಪ್ರಾಚೀನ ವಾಸ್ತು ಶಾಸ್ತ್ರವು ಜೀವನದ ಎಲ್ಲ ಹಂತಗಳಿಗೂ ಮಾರ್ಗದರ್ಶನ ನೀಡುವ ವಿಜ್ಞಾನವಾಗಿದೆ. ಮದುವೆಯ ಆಮಂತ್ರಣ ಪತ್ರಿಕೆ ಹೇಗಿರಬೇಕು, ಅದರಲ್ಲಿ ಯಾವ ಬಣ್ಣಗಳು, ಪದಗಳು ಮತ್ತು ಚಿಹ್ನೆಗಳು ಇರಬೇಕು ಎಂಬುದನ್ನು ಸಹ ವಾಸ್ತು ಶಾಸ್ತ್ರ ವಿವರಿಸುತ್ತದೆ. ವಾಸ್ತು ನಿಯಮಗಳನ್ನು ಪಾಲಿಸಿ ತಯಾರಿಸಿದ ಮದುವೆಯ ಕಾರ್ಡ್‌ಗಳು ಮನೆಗೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತವೆ ಎಂದು ನಂಬಲಾಗಿದೆ.

ಮದುವೆಯ ಆಮಂತ್ರಣ ಪತ್ರಿಕೆ ಬಣ್ಣ:

ವಾಸ್ತು ಶಾಸ್ತ್ರದ ಪ್ರಕಾರ ಮದುವೆಯ ಆಮಂತ್ರಣ ಪತ್ರಿಕೆ ಕೆಂಪು, ಹಳದಿ, ಕೇಸರಿ ಅಥವಾ ಕೆನೆ ಬಣ್ಣಗಳನ್ನು ಬಳಸುವುದು ಅತ್ಯಂತ ಶುಭಕರ. ಕೆಂಪು ಬಣ್ಣವು ಪ್ರೀತಿ, ಶಕ್ತಿ ಮತ್ತು ವೈವಾಹಿಕ ಬಂಧನದ ಸಂಕೇತವಾಗಿದೆ. ಹಳದಿ ಮತ್ತು ಕೇಸರಿ ಬಣ್ಣಗಳು ಶುಭಾರಂಭ ಮತ್ತು ಸಮೃದ್ಧಿಯನ್ನು ಸೂಚಿಸುತ್ತವೆ. ಆದರೆ ಕಪ್ಪು ಅಥವಾ ಗಾಢ ಕಂದು ಬಣ್ಣಗಳನ್ನು ಮದುವೆಯ ಕಾರ್ಡ್‌ನಲ್ಲಿ ಬಳಸುವುದನ್ನು ತಪ್ಪಿಸಬೇಕು. ಈ ಬಣ್ಣಗಳನ್ನು ನಕಾರಾತ್ಮಕತೆ ಮತ್ತು ದುಃಖದ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ:

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ದೇವರ ಚಿತ್ರಗಳು ಅಥವಾ ಶುಭ ಚಿಹ್ನೆಗಳು ಇರಬೇಕು. ವಿಶೇಷವಾಗಿ ಗಣೇಶನ ಚಿತ್ರವನ್ನು ಸೇರಿಸುವುದು ಅತ್ಯಂತ ಅಗತ್ಯವೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಿಘ್ನ ನಿವಾರಕನಾದ ಗಣೇಶನ ಆಶೀರ್ವಾದವಿಲ್ಲದೆ ಯಾವುದೇ ಶುಭ ಕಾರ್ಯ ಪೂರ್ಣವಾಗುವುದಿಲ್ಲ ಎಂಬ ನಂಬಿಕೆ ಇದೆ. ಇದಷ್ಟೇ ಅಲ್ಲದೆ, ಸ್ವಸ್ತಿಕ ಮತ್ತು ಕಲಶದಂತಹ ಶುಭ ಚಿಹ್ನೆಗಳನ್ನು ಮದುವೆಯ ಕಾರ್ಡ್‌ನಲ್ಲಿ ಬಳಸುವುದು ಒಳಿತು. ಇವುಗಳು ಸಕಾರಾತ್ಮಕ ಶಕ್ತಿಯನ್ನು ಹರಡಿ, ದಾಂಪತ್ಯ ಜೀವನ ಸುಗಮವಾಗಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಅತಿಯಾಗಿ ವಿಚಿತ್ರ ಅಥವಾ ಗೊಂದಲಕಾರಿ ವಿನ್ಯಾಸಗಳನ್ನು ಬಳಸುವುದನ್ನು ತಪ್ಪಿಸುವುದು ಉತ್ತಮ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಬಳಸುವ ಪದಗಳು:

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಬಳಸುವ ಪದಗಳು ಬಹಳ ಮಹತ್ವದ್ದಾಗಿವೆ. ಭಾಷೆ ಶುದ್ಧವಾಗಿರಬೇಕು ಮತ್ತು ಪದಗಳು ಮೃದುವಾಗಿರಬೇಕು. ಕಠಿಣ, ಭಾರವಾದ ಅಥವಾ ನಕಾರಾತ್ಮಕ ಅರ್ಥ ನೀಡುವ ಪದಗಳನ್ನು ಬಳಸದಿರುವುದು ಒಳಿತು. ಯುದ್ಧ, ದುಃಖ ಅಥವಾ ಖಿನ್ನತೆಯನ್ನು ಸೂಚಿಸುವ ಚಿತ್ರಗಳು ಅಥವಾ ಪದಗಳು ಕಾರ್ಡ್‌ನಲ್ಲಿ ಇರಬಾರದು. ಶುಭ ಮುಹೂರ್ತ, ದಿನಾಂಕ ಮತ್ತು ಸಮಯವನ್ನು ಸ್ಪಷ್ಟವಾಗಿ ಮತ್ತು ತಪ್ಪಿಲ್ಲದಂತೆ ಮುದ್ರಿಸಬೇಕು. ಪರಂಪರೆಯ ಪ್ರಕಾರ, ಮೊದಲ ಮದುವೆಯ ಕಾರ್ಡ್ ಅನ್ನು ಕುಟುಂಬದ ದೇವತೆ ಅಥವಾ ಗಣೇಶನಿಗೆ ಸಮರ್ಪಿಸುವುದು ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ.

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿಯ ಫೋಟೋ:

ಇತ್ತೀಚಿನ ದಿನಗಳಲ್ಲಿ ಅನೇಕರು ಮದುವೆಯ ಕಾರ್ಡ್‌ನಲ್ಲಿ ವಧು-ವರರ ಫೋಟೋಗಳನ್ನು ಮುದ್ರಿಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ. ಕಾರ್ಡ್‌ನಲ್ಲಿ ವಧು-ವರರ ಚಿತ್ರವನ್ನು ಹಾಕುವುದು ಕಣ್ಣಿಗೆ ಕಟ್ಟುವಂತೆ ಮಾಡುತ್ತದೆ ಮತ್ತು ಅನಗತ್ಯ ದೃಷ್ಟಿದೋಷಕ್ಕೆ ಕಾರಣವಾಗಬಹುದು ಎಂಬ ನಂಬಿಕೆ ಇದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Wed, 21 January 26

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು