AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಮನೆ ಕಟ್ಟುವಾಗ ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹೆಚ್ಚು ಜಾಗ ಖಾಲಿ ಬಿಡಬಾರದು ಯಾಕೆ?

ಡಾ. ಬಸವರಾಜ ಗುರೂಜಿಯವರ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಜಾಗವನ್ನು ಕಡಿಮೆ ಇಟ್ಟುಕೊಳ್ಳುವುದು ಮುಖ್ಯ ಎಂದು ತಿಳಿಸಿದ್ದಾರೆ. ಪೂರ್ವಕ್ಕೆ ಇಂದ್ರ, ಪಶ್ಚಿಮಕ್ಕೆ ಶನಿ, ಉತ್ತರಕ್ಕೆ ಕುಬೇರ ಮತ್ತು ದಕ್ಷಿಣಕ್ಕೆ ಯಮ ದೇವತೆಗಳ ಆವಾಸ ಎಂದು ನಂಬಲಾಗಿದೆ. ಈ ನಿಯಮ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ಸದಾ ನೆಲೆಸಿರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

Daily Devotional: ಮನೆ ಕಟ್ಟುವಾಗ ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹೆಚ್ಚು ಜಾಗ ಖಾಲಿ ಬಿಡಬಾರದು ಯಾಕೆ?
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on: Aug 01, 2025 | 10:34 AM

Share

ಸ್ವಂತ ಮನೆ ಹೊಂದಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಮನೆ ಕಟ್ಟುವುದು ಒಂದು ದೊಡ್ಡ ನಿರ್ಣಯ. ಅನೇಕ ಜನರು ತಮ್ಮ ಕನಸಿನ ಮನೆಯನ್ನು ನಿರ್ಮಿಸುವಾಗ ವಾಸ್ತು ಶಾಸ್ತ್ರ ತತ್ವಗಳನ್ನು ಪರಿಗಣಿಸುತ್ತಾರೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಜಾಗವನ್ನು ಕಡಿಮೆ ಇಟ್ಟುಕೊಳ್ಳುವುದರ ಮಹತ್ವವನ್ನು ವಿವರಿಸಿದ್ದಾರೆ.

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ನಾಲ್ಕು ದಿಕ್ಕುಗಳಿಗೂ ಸಮತೋಲನ ಅತ್ಯಗತ್ಯ. ಪೂರ್ವಕ್ಕೆ ಇಂದ್ರ, ಪಶ್ಚಿಮಕ್ಕೆ ಶನಿ, ಉತ್ತರಕ್ಕೆ ಕುಬೇರ ಮತ್ತು ದಕ್ಷಿಣಕ್ಕೆ ಯಮ ದೇವತೆಗಳ ಆವಾಸ ಎಂದು ನಂಬಲಾಗಿದೆ. ಹೀಗಾಗಿ, ಈ ದಿಕ್ಕುಗಳಿಗೆ ಸೂಕ್ತವಾದ ಪ್ರಮಾಣದ ಜಾಗವನ್ನು ನೀಡುವುದು ಅವಶ್ಯಕ. ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹೆಚ್ಚು ಜಾಗವನ್ನು ಖಾಲಿ ಬಿಡುವುದರಿಂದ ಅನೇಕ ಸಮಸ್ಯೆಗಳು ಉಂಟಾಗಬಹುದು ಎಂದು ಹೇಳಲಾಗಿದೆ. ಇದು ಆರೋಗ್ಯ ಸಮಸ್ಯೆಗಳು, ಭೂವಿವಾದಗಳು, ಹಣಕಾಸಿನ ತೊಂದರೆಗಳು ಮತ್ತು ಇತರ ಅನಾನುಕೂಲಗಳನ್ನು ತರಬಹುದು ಎಂದು ಗುರೂಜಿ ಹೇಳಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ದೇವರಿಗೆ ಆರತಿ ಮಾಡುವಾಗ ಕಣ್ಣು ಮುಚ್ಚಬಾರದು ಎಂದು ಹೇಳುವುದೇಕೆ? ಕಾರಣ ಇಲ್ಲಿದೆ

ಉತ್ತಮ ವಾಸ್ತು ಪರಿಹಾರಕ್ಕಾಗಿ, ಪೂರ್ವ ಮತ್ತು ಉತ್ತರ ದಿಕ್ಕುಗಳಲ್ಲಿ ಸ್ವಲ್ಪ ಹೆಚ್ಚು ಜಾಗವನ್ನು ಒದಗಿಸುವುದು ಉತ್ತಮ. ನೈರುತ್ಯ ದಿಕ್ಕು ಮನೆಯ ಮಧ್ಯಭಾಗದಲ್ಲಿರಬೇಕು. ಪಶ್ಚಿಮ ಮತ್ತು ದಕ್ಷಿಣ ದಿಕ್ಕುಗಳಲ್ಲಿ ಜಾಗವನ್ನು ಕಡಿಮೆ ಇಟ್ಟುಕೊಳ್ಳುವುದರಿಂದ ಸಮಸ್ಯೆಗಳನ್ನು ತಪ್ಪಿಸಬಹುದು. ಪೂರ್ವ ದಿಕ್ಕಿಗೆ ಸ್ವಲ್ಪ ಹೆಚ್ಚಿನ ಜಾಗವನ್ನು ಬಿಟ್ಟು ಉತ್ತರ ದಿಕ್ಕನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಇದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ಇರುತ್ತದೆ. ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತತ್ವಗಳನ್ನು ಪಾಲಿಸುವುದು ಮನೆಮಾಲೀಕರಿಗೆ ಸುಖ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ