AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ನಿಮ್ಮ ಕುಟುಂಬ ಆರೋಗ್ಯವಾಗಿರಲು ಈ ವಾಸ್ತು ಸಲಹೆಯನ್ನು ಅಳವಡಿಸಿಕೊಳ್ಳಿ

ಕೆಲವು ಸಲ ಎಷ್ಟೇ ಪ್ರಯತ್ನ ಪಟ್ಟರೂ ಕೂಡ, ಒಂದರ ನಂತರ ಒಂದು ಕಾಯಿಲೆಗಳು ಬರುತ್ತಲೇ ಇರುತ್ತವೆ. ನೀವು ಸಹ ಈ ರೀತಿಯ ಸಮಸ್ಯೆಯನ್ನು ಎದುರಿಸಿರಬಹುದು ಇದಕ್ಕೆ ಕಾರಣ ನಿಮ್ಮ ಮನೆಯ ವಾಸ್ತು ದೋಷವೂ ಆಗಿರಬಹುದು. ವಾಸ್ತು ಶಾಸ್ತ್ರದ ಕೆಲವು ಸಲಹೆಗಳನ್ನು ತಿಳಿದುಕೊಂಡು ಅದನ್ನು ಪಾಲಿಸುವುದರಿಂದ, ನಿಮ್ಮ ಮನೆಯಿಂದ ರೋಗಗಳನ್ನು ದೂರವಿಡಬಹುದು. ಹಾಗಾದರೆ ಉತ್ತಮ ಆರೋಗ್ಯ ಪಡೆದುಕೊಳ್ಳಲು ಯಾವ ರೀತಿಯ ವಾಸ್ತು ಸಲಹೆಗಳನ್ನು ಪಾಲಿಸಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

Vastu Tips: ನಿಮ್ಮ ಕುಟುಂಬ ಆರೋಗ್ಯವಾಗಿರಲು ಈ ವಾಸ್ತು ಸಲಹೆಯನ್ನು ಅಳವಡಿಸಿಕೊಳ್ಳಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 16, 2024 | 5:55 PM

Share

ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಸಂತೋಷದ ಜೀವನವನ್ನು ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಅದಕ್ಕೂ ಮೊದಲು ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ಆರೋಗ್ಯವಾಗಿರುವುದು ಮುಖ್ಯವಾಗುತ್ತದೆ. ಅನೇಕ ಬಾರಿ, ಎಷ್ಟೇ ಪ್ರಯತ್ನ ಪಟ್ಟರೂ ಕೂಡ, ಒಂದರ ನಂತರ ಒಂದು ಕಾಯಿಲೆಗಳು ಬರುತ್ತಲೇ ಇರುತ್ತವೆ. ನೀವು ಸಹ ಈ ರೀತಿಯ ಸಮಸ್ಯೆಯನ್ನು ಎದುರಿಸಿರಬಹುದು ಇದಕ್ಕೆ ಕಾರಣ ನಿಮ್ಮ ಮನೆಯ ವಾಸ್ತು ದೋಷವೂ ಆಗಿರಬಹುದು. ವಾಸ್ತು ಶಾಸ್ತ್ರದ ಕೆಲವು ಸಲಹೆಗಳನ್ನು ತಿಳಿದುಕೊಂಡು ಅದನ್ನು ಪಾಲಿಸುವುದರಿಂದ, ನಿಮ್ಮ ಮನೆಯಿಂದ ರೋಗಗಳನ್ನು ದೂರವಿಡಬಹುದು. ಹಾಗಾದರೆ ಉತ್ತಮ ಆರೋಗ್ಯ ಪಡೆದುಕೊಳ್ಳಲು ಯಾವ ರೀತಿಯ ವಾಸ್ತು ಸಲಹೆಗಳನ್ನು ಪಾಲಿಸಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಉತ್ತಮ ಆರೋಗ್ಯಕ್ಕಾಗಿ ಈ ವಾಸ್ತು ಸಲಹೆಗಳನ್ನು ಅನುಸರಿಸಿ;

ವಾಸ್ತು ಶಾಸ್ತ್ರದ ಪ್ರಕಾರ, ಕುಟುಂಬದಲ್ಲಿರುವ ಪ್ರತಿಯೊಬ್ಬರ ಆರೋಗ್ಯ ಕಾಪಾಡಿಕೊಳ್ಳಲು, ಮುಖ್ಯವಾಗಿ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪರಿಚಲನೆ ಇರಬೇಕು. ಹಾಗಾಗಿ ಮನೆಯ ಮುಖ್ಯ ಬಾಗಿಲು ಮತ್ತು ಹೊಸ್ತಿಲು ಸರಿಯಾದ ಸ್ಥಿತಿಯಲ್ಲಿರುವಂತೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅಂದರೆ ಮುಖ್ಯ ದ್ವಾರದಲ್ಲಿ ಯಾವುದೇ ರೀತಿಯ ಕೊಳಕು ಇರದಂತೆ ನೋಡಿಕೊಳ್ಳಬೇಕು. ಏಕೆಂದರೆ ಮನೆಯ ಬಾಗಿಲಿನಲ್ಲಿ ಧೂಳು, ಕಸ ಇದ್ದಲ್ಲಿ ನಕಾರಾತ್ಮಕ ಶಕ್ತಿ ಮನೆಯನ್ನು ತುಂಬಿಕೊಳ್ಳುತ್ತದೆ ಇವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ. ಹಾಗಾಗಿ ಮನೆಯ ಮುಖ್ಯ ದ್ವಾರದ ಮೇಲೆ ಓಂ ಮತ್ತು ಸ್ವಸ್ತಿಕ ಚಿಹ್ನೆಗಳನ್ನು ಬಿಡಿಸುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಕುಟುಂಬದಲ್ಲಿರುವವರ ಆರೋಗ್ಯಕ್ಕಾಗಿ, ಮನೆಯ ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮನೆಯನ್ನು ಪ್ರತಿದಿನ ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮನೆಯಲ್ಲಿ ಜೇಡರ ಬಲೆ ಕಟ್ಟಲು ಬಿಡಬಾರದು. ಇವು ಮಾನಸಿಕ ಒತ್ತಡವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ.

ಬೆಳಿಗ್ಗೆ ಕಿಟಕಿ ಮತ್ತು ಬಾಗಿಲುಗಳನ್ನು ತೆರೆಯಿರಿ;

ಉತ್ತಮ ಆರೋಗ್ಯಕ್ಕಾಗಿ, ನೀವು ಮನೆಯ ಬಾಗಿಲಿನಲ್ಲಿ ಚಿಕ್ಕ ಘಂಟೆ ಅಥವಾ ವಿಂಡ್ ಚೈನ್ ಅನ್ನು ಇಡಬಹುದು ಇದು ಗಾಳಿ ಮನೆಗೆ ಪ್ರವೇಶಿಸುವಾಗ ಸಕಾರಾತ್ಮಕ ಶಬ್ದ ಎಲ್ಲಾ ಕಡೆಗಳಲ್ಲೂ ವ್ಯಾಪಿಸಿಕೊಳ್ಳುವಂತೆ ಮಾಡುತ್ತದೆ. ಬೆಳಿಗ್ಗೆ ಮನೆಯ ಎಲ್ಲಾ ಕಿಟಕಿ ಮತ್ತು ಬಾಗಿಲುಗಳನ್ನು ತೆರೆಯಬೇಕು, ಇದನ್ನು ಮಾಡುವುದರಿಂದ ತಾಜಾ ಗಾಳಿ ಮತ್ತು ಸೂರ್ಯನ ಕಿರಣಗಳು ಮನೆಯನ್ನು ಪ್ರವೇಶಿಸುತ್ತವೆ, ಇದು ಮನೆಯಲ್ಲಿನ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ.

ಕನ್ನಡಿಯನ್ನು ಮಲಗುವ ಕೋಣೆಯಲ್ಲಿ ಇಡಬೇಡಿ;

ಮಲಗುವ ಕೋಣೆಯಲ್ಲಿ ಕನ್ನಡಿಯನ್ನು ಎಂದಿಗೂ ಹಾಸಿಗೆಯ ಮುಂದೆ ಇಡಬಾರದು ಮತ್ತು ಮಲಗುವಾಗ ಕನ್ನಡಿಯನ್ನು ನೋಡದಂತೆ ವಿಶೇಷ ಕಾಳಜಿ ವಹಿಸಬೇಕು. ಮಲಗುವಾಗ ನಿಮ್ಮ ದೇಹದ ಯಾವುದೇ ಭಾಗವು ಗೋಚರಿಸದ ಸ್ಥಳದಲ್ಲಿ ಕನ್ನಡಿಯನ್ನು ಇಡಬೇಕು. ಇನ್ನು ಮಲಗುವ ಕೋಣೆಯಲ್ಲಿ ಕನ್ನಡಿ ಇದ್ದಲ್ಲಿ, ರಾತ್ರಿ ಮಲಗುವಾಗ ಅದನ್ನು ಒಂದು ಬಟ್ಟೆಯಿಂದ ಮುಚ್ಚಿಡಿ.

ಇದನ್ನೂ ಓದಿ: ಸಂಜೆ ಸಮಯದಲ್ಲಿ ಈ ಕೆಲಸ ಮಾಡಿ, ಶ್ರೀಮಂತರಾಗುವುದು ಖಂಡಿತ

ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗಬೇಡಿ;

ರಾತ್ರಿ ಮಲಗುವಾಗ ಉತ್ತರ ದಿಕ್ಕಿನ ಕಡೆಗೆ ಎಂದಿಗೂ ತಲೆಯಿಟ್ಟು ಮಲಗಬಾರದು. ಹಾಗೆ ಮಾಡುವುದರಿಂದ ನಿದ್ರೆಗೆ ಅಡ್ಡಿಯಾಗುತ್ತದೆ ಮತ್ತು ನಿದ್ರಾಹೀನತೆಗೆ ಕಾರಣವಾಗಬಹುದು ಎಂದು ನಂಬಲಾಗಿದೆ. ಉತ್ತರ ದಿಕ್ಕಿನಲ್ಲಿ ದೀರ್ಘಕಾಲ ಮಲಗುವುದು ತಲೆನೋವು ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು