AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಸಂಪತ್ತಿನ ದೇವತೆ ಲಕ್ಷ್ಮಿ, ಪ್ರಥಮ ಪೂಜಿತ ಗಣೇಶ ಮತ್ತು ಭಗವಾನ್ ಶಿವನ ವಿಗ್ರಹಗಳನ್ನು ಯಾವ ದಿಕ್ಕಿನಲ್ಲಿಟ್ಟರೆ ಹೆಚ್ಚು ಫಲ? ಈ ಬಗ್ಗೆ ವಾಸ್ತು ಶಾಸ್ತ್ರ ಏನು ಹೇಳುತ್ತೆ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ವಿಗ್ರಹಗಳನ್ನು ತಪ್ಪು ದಿಕ್ಕಿನಲ್ಲಿ ಇಟ್ಟರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಅಲ್ಲದೆ, ದೇವರು ಮತ್ತು ದೇವತೆಗಳ ಆರಾಧನೆಯನ್ನು ಸಹ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪ್ರತಿ ವಿಗ್ರಹವನ್ನು ಇಡಲು ಒಂದು ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ.

Vastu Tips: ಸಂಪತ್ತಿನ ದೇವತೆ ಲಕ್ಷ್ಮಿ, ಪ್ರಥಮ ಪೂಜಿತ ಗಣೇಶ ಮತ್ತು ಭಗವಾನ್ ಶಿವನ ವಿಗ್ರಹಗಳನ್ನು ಯಾವ ದಿಕ್ಕಿನಲ್ಲಿಟ್ಟರೆ ಹೆಚ್ಚು ಫಲ? ಈ ಬಗ್ಗೆ ವಾಸ್ತು ಶಾಸ್ತ್ರ ಏನು ಹೇಳುತ್ತೆ?
ಸಂಪತ್ತಿನ ದೇವತೆ ಲಕ್ಷ್ಮಿ
TV9 Web
| Edited By: |

Updated on: Jun 23, 2022 | 6:30 AM

Share

ಹಿಂದೂ ಧರ್ಮದಲ್ಲಿ, ದೇವರು ಮತ್ತು ದೇವತೆಗಳ ಪೂಜೆಗಾಗಿ ಮನೆಯಲ್ಲೇ ಪುಟ್ಟದೊಂದು ದೇವರ ಮನೆ ನಿರ್ಮಿಸಲಾಗಿರುತ್ತದೆ. ಮತ್ತು ಆ ದೇವರ ಮನೆಯಲ್ಲಿ ದೇವರ ವಿಗ್ರಹಗಳು(Lord Idol), ಪೂಜೆ ಸಾಮಾನು ಸೇರಿದಂತೆ ದೇವರಿಗೆ ಸಂಬಂಧ ಪಟ್ಟ ವಸ್ತುಗಳನ್ನು ಇಡಲಾಗುತ್ತೆ. ಮನೆಯಲ್ಲಿ ಇರಿಸಲಾಗಿರುವ ಈ ದೇವತೆಗಳ ವಿಗ್ರಹಗಳು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿಯನ್ನು ನೀಡುತ್ತವೆ. ಆದರೆ ದೇವರ ಮನೆಯಲ್ಲಿ ವಿಗ್ರಹಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ವಿಶೇಷ ಲಾಭಗಳನ್ನು ಪಡೆಯಬಹುದು ಎಂದು ವಾಸ್ತು ತಜ್ಞರು(Vastu Tips) ಅಭಿಪ್ರಾಯಪಟ್ಟಿದ್ದಾರೆ.

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ವಿಗ್ರಹಗಳನ್ನು ತಪ್ಪು ದಿಕ್ಕಿನಲ್ಲಿ ಇಟ್ಟರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಅಲ್ಲದೆ, ದೇವರು ಮತ್ತು ದೇವತೆಗಳ ಆರಾಧನೆಯನ್ನು ಸಹ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪ್ರತಿ ವಿಗ್ರಹವನ್ನು ಇಡಲು ಒಂದು ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ. ಹಾಗಾದ್ರೆ ಬನ್ನಿ ಸಂಪತ್ತಿನ ದೇವತೆ ಲಕ್ಷ್ಮಿ, ಪ್ರಥಮ ಪೂಜಿತ ಗಣೇಶ ಮತ್ತು ಭಗವಾನ್ ಶಿವನ ವಿಗ್ರಹಗಳನ್ನು ಯಾವ ದಿಕ್ಕಿನಲ್ಲಿ ಇಡುವುದು ಉತ್ತಮ ಎಂದು ತಿಳಿಯೋಣ. ಇದನ್ನೂ ಓದಿ: Banana plant: ಮನೆಯಲ್ಲಿ ಬಾಳೆ ಗಿಡ ಬೆಳೆಸಲು ಆಲೋಚಿಸುತ್ತಿದ್ದೀರಾ? ಮೊದಲು ಈ ವಾಸ್ತು ನಿಯಮಗಳನ್ನು ಪಾಲಿಸಿ

ಗಣೇಶನ ವಿಗ್ರಹ ಯಾವ ದಿಕ್ಕಿನಲ್ಲಿಟ್ಟರೆ ಉತ್ತಮ ಹಿಂದೂ ಧರ್ಮದಲ್ಲಿ, ಯಾವುದೇ ಮಂಗಳಕರ ಕೆಲಸವನ್ನು ಆರಂಭಿಸುವ ಮುನ್ನ ಗಣೇಶ ಪೂಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಗಣೇಶನ ಮೂರ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಇಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಗಣೇಶನ ವಿಗ್ರಹವನ್ನು ಮನೆಯ ಉತ್ತರ ದಿಕ್ಕಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಅದೇ ರೀತಿ, ಗಣೇಶನ ಸಿಂಧೂರ ಚಿತ್ರವನ್ನು ಹಾಕುವುದು ಒಳ್ಳೆಯದು ಎಂದು ಪರಿಗಣಿಸಲಾಗಿದೆ.

ಲಕ್ಷ್ಮಿ ದೇವತೆಗೆ ಯಾವ ದಿಕ್ಕಿನಲ್ಲಿಟ್ಟರೆ ಹೆಚ್ಚು ಫಲ ನಿಮ್ಮ ದೇವರ ಮನೆಯಲ್ಲಿ ಲಕ್ಷ್ಮಿ ಮತ್ತು ಗಣೇಶನಿಟ್ಟು ಪೂಜಿಸುವುದಕ್ಕಿಂತ ಆ ವಿಗ್ರಹಗಳನ್ನು ಸರಿಯಾದ ದಿಕ್ಕಿನಲ್ಲಿಟ್ಟು ಪೂಜೆ ಮಾಡಿದರೆ ಹೆಚ್ಚಿನ ಫಲ ಸಿಗುತ್ತದೆ. ದೇವರ ಮನೆಯಲ್ಲಿ ಇರಿಸಲಾಗಿರುವ ಲಕ್ಷ್ಮಿ ದೇವಿಯ ವಿಗ್ರಹವನ್ನು ಗಣೇಶನ ವಿಗ್ರಹದ ಬಲಭಾಗದಲ್ಲಿ ಇಡಬೇಕು. ಲಕ್ಷ್ಮಿಯು ಭಗವಾನ್ ಗಣೇಶನ ತಾಯಿ ಸ್ವರೂಪ. ಹೀಗಾಗಿ ತಾಯಿಯನ್ನು ಬಲಭಾಗದಲ್ಲಿ ಸ್ಥಾಪಿಸಬೇಕು.

ಶಿವಲಿಂಗಕ್ಕೆ ಯಾವ ದಿಕ್ಕು ಉತ್ತಮ ಕೆಲವರು ಮನೆಯಲ್ಲಿ ಚಿಕ್ಕ ಶಿವಲಿಂಗವನ್ನು ಇಟ್ಟುಕೊಂಡು ಪೂಜಿಸುತ್ತಾರೆ. ಅಂತಹವರು ಶಿವಲಿಂಗದ ಸರಿಯಾದ ದಿಕ್ಕನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಮನೆಯ ದೇವರ ಗುಡಿಯಲ್ಲಿ ಇರಿಸಲಾಗಿರುವ ಶಿವಲಿಂಗವು ಉತ್ತರಕ್ಕೆ ಮುಖ ಮಾಡಬೇಕು. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಬರುತ್ತದೆ.

ಮತ್ತಷ್ಟು ಅಧ್ಯಾತ್ಮಿಕ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ