AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಸೂರ್ಯಾಸ್ತದ ಸಮಯದಲ್ಲಿ ಈ ಕೆಲಸಗಳನ್ನು ಮಾಡಬೇಡಿ

ಸೂರ್ಯಾಸ್ತದ ಸಮಯದಲ್ಲಿ ಕೆಲವು ಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ ಇದೆ. ಇಲ್ಲವಾದಲ್ಲಿ ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಕಷ್ಟಪಟ್ಟು ಕೆಲಸ ಮಾಡಿದರೂ, ಶುಭ ಫಲಗಳು ಪ್ರಾಪ್ತವಾಗುವುದಿಲ್ಲ. ಸಣ್ಣ ತಪ್ಪುಗಳು ಸಹ ಸಂತೋಷ, ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ಇಂತಹ ಕಾರ್ಯಗಳನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಹಾಗಾದರೆ ಸೂರ್ಯಾಸ್ತದ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

Vastu Tips: ಸೂರ್ಯಾಸ್ತದ ಸಮಯದಲ್ಲಿ ಈ ಕೆಲಸಗಳನ್ನು ಮಾಡಬೇಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 01, 2024 | 10:14 AM

Share

ಜನರು ತಮ್ಮ ಮನೆಗಳಲ್ಲಿ ಸದಾಕಾಲ ಸಂತೋಷ, ಸಮೃದ್ಧಿ ಇರಬೇಕು ಎಂದು ಬಯಸುತ್ತಾರೆ. ಆದರೆ ಅದನ್ನು ಗಳಿಸುವುದರ ಜೊತೆಗೆ ಕಾಪಾಡಿಕೊಳ್ಳುವುದು ಕೂಡ ತುಂಬಾ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮಗೆ ಅರಿವಿಲ್ಲದಂತೆ ಕೆಲವು ತಪ್ಪುಗಳನ್ನು ಮಾಡುತ್ತೇವೆ ಇದು ನಮ್ಮ ಮನೆಯ ನೆಮ್ಮದಿಯನ್ನು ಹಾಳು ಮಾಡುತ್ತದೆ. ಅದರಲ್ಲಿಯೂ ಸೂರ್ಯಾಸ್ತದ ಸಮಯದಲ್ಲಿ ಕೆಲವು ಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ ಇದೆ. ಇಲ್ಲವಾದಲ್ಲಿ ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಕಷ್ಟಪಟ್ಟು ಕೆಲಸ ಮಾಡಿದರೂ, ಶುಭ ಫಲಗಳು ಪ್ರಾಪ್ತವಾಗುವುದಿಲ್ಲ. ಸಣ್ಣ ತಪ್ಪುಗಳು ಸಹ ಸಂತೋಷ, ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ಇಂತಹ ಕಾರ್ಯಗಳನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಹಾಗಾದರೆ ಸೂರ್ಯಾಸ್ತದ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಸಂಜೆ ಊಟ ಮಾಡಬೇಡಿ

ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯಾಸ್ತದ ಸಮಯದಲ್ಲಿ ಆಹಾರವನ್ನು ಸೇವಿಸಬಾರದು. ಈ ಸಮಯದಲ್ಲಿ ಆಹಾರವನ್ನು ಸೇವಿಸುವುದರಿಂದ ವ್ಯಕ್ತಿಯು ಮುಂದಿನ ಜನ್ಮದಲ್ಲಿ ಪ್ರಾಣಿಗಳ ರೂಪದಲ್ಲಿ ಜನಿಸುತ್ತಾನೆ. ಇದಲ್ಲದೆ, ಈ ಸಮಯದಲ್ಲಿ ಯಾವುದೇ ಆರೋಗ್ಯವಂತ ವ್ಯಕ್ತಿಯು ಮಲಗಬಾರದು. ಹೀಗೆ ಮಾಡುವುದರಿಂದ, ಮನೆಯಲ್ಲಿ ಇಟ್ಟ ಹಣವು ತ್ವರಿತವಾಗಿ ವ್ಯಯವಾಗುತ್ತದೆ ಮತ್ತು ಹಣಕಾಸಿನ ಸಮಸ್ಯೆಗಳಿಂದಾಗಿ ಜೀವನದಲ್ಲಿ ಅನೇಕ ರೀತಿಯಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.

ಸೂರ್ಯಾಸ್ತದ ಸಮಯದಲ್ಲಿ ದೇವರನ್ನು ಪೂಜಿಸಿ

ಸೂರ್ಯ ಮುಳುಗುವ ಸಮಯದಲ್ಲಿ ದೇವರನ್ನು ಪೂಜಿಸುವುದರಿಂದ ಶುಭ ಫಲಗಳು ದೊರೆಯುತ್ತದೆ. ಈ ಸಮಯದಲ್ಲಿ ನಿಮ್ಮ ಲೈಂಗಿಕ ಬಯಕೆಯನ್ನು ನಿಯಂತ್ರಣದಲ್ಲಿಡಬೇಕು. ಸೂರ್ಯಾಸ್ತದ ಸಮಯದಲ್ಲಿ ಜನಿಸಿದ ಮಗು ಜೀವನದಲ್ಲಿ ಅನೇಕ ತೊಂದರೆಗಳನ್ನು ಎದುರಿಸುತ್ತದೆ ಎಂದು ನಂಬಲಾಗಿದೆ. ಶಾಸ್ತ್ರದಲ್ಲಿ ಈ ಸಮಯದಲ್ಲಿ ವೇದ ಮತ್ತು ಶಾಸ್ತ್ರಗಳನ್ನು ಅಧ್ಯಯನ ಮಾಡಬಾರದು. ಈ ಸಮಯದಲ್ಲಿ ಧ್ಯಾನ ಮಾಡುವುದು ಉತ್ತಮವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಕಷ್ಟ ಬಂದರೆ ಏನು ಮಾಡಬೇಕು? ಚಾಣಕ್ಯನ ಈ ನೀತಿ ಹೇಳೋದೇನು?

ಮರೆತು ಉಗುರುಗಳನ್ನು ಕತ್ತರಿಸಬೇಡಿ

ಸೂರ್ಯಾಸ್ತದ ಸಮಯದಲ್ಲಿ ಹಣದ ವಹಿವಾಟುಗಳನ್ನು ಯಾವಾಗಲೂ ತಪ್ಪಿಸಬೇಕು. ಇಲ್ಲವಾದಲ್ಲಿ ಮನೆಯಲ್ಲಿ ಹಣದ ಕೊರತೆ ಉಂಟಾಗುತ್ತದೆ ಮತ್ತು ಆರ್ಥಿಕ ಸ್ಥಿತಿ ಚೆನ್ನಾಗಿರುವುದಿಲ್ಲ. ಇದೆಲ್ಲದರ ಜೊತೆಗೆ ಸೂರ್ಯಾಸ್ತವಾಗುವ ಸಮಯದಲ್ಲಿ ಉಗುರು ಮತ್ತು ಕೂದಲನ್ನು ಎಂದಿಗೂ ಕತ್ತರಿಸಬಾರದು. ಏಕೆಂದರೆ ಇದರಿಂದಲೇ ಜನರು ಅನೇಕ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ