AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಈ ಫೋಟೋಗಳನ್ನು ಮನೆಯಲ್ಲಿ ಇಡುವುದು, ಸಮಸ್ಯೆಯನ್ನು ನೀವೇ ಬರಮಾಡಿಕೊಂಡಂತೆ

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಫೋಟೋ ನೇತು ಹಾಕುವಾಗ ತಿಳಿದುಕೊಳ್ಳಬೇಕಾದ ಕೆಲವೊಂದು ಸಂಗತಿಗಳು ಇಲ್ಲಿವೆ. ಮನೆಯಲ್ಲಿ ಯಾವುದೇ ಚಿತ್ರವನ್ನು ಇರಿಸುವ ಮೊದಲು ದಿಕ್ಕು ಮತ್ತು ಸಮಯವನ್ನು ಪರಿಶೀಲಿಸುವುದು ಅಗತ್ಯವಾಗಿರುತ್ತದೆ. ಯಾಕೆಂದರೆ ವಾಸ್ತು ಶಾಸ್ತ್ರವು ಜೀವನದ ಸಂತೋಷ ಮತ್ತು ಸಮೃದ್ಧಿಗೆ ನೇರವಾಗಿ ಸಂಬಂಧಿಸಿದೆ.

Vastu Tips: ಈ ಫೋಟೋಗಳನ್ನು ಮನೆಯಲ್ಲಿ ಇಡುವುದು, ಸಮಸ್ಯೆಯನ್ನು ನೀವೇ ಬರಮಾಡಿಕೊಂಡಂತೆ
Vastu TipsImage Credit source: Pinterest
ಅಕ್ಷತಾ ವರ್ಕಾಡಿ
|

Updated on:Nov 25, 2023 | 3:00 PM

Share

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹಿಂದಿನಿಂದಲೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಮನೆ ನಿರ್ಮಾಣ ಮಾಡುವುದರಿಂದ ಹಿಡಿದು ಮನೆಯ ಅಲಂಕಾರದ ವರೆಗೂ ಯಾವ ದಿಕ್ಕು ಯಾವುದಕ್ಕೆ ಸೂಕ್ತ, ಯಾವುದು ಶುಭ? ಯಾವುದು ಅಶುಭ? ಎಂಬುದನ್ನು ವಾಸ್ತು ಶಾಸ್ತ್ರದಲ್ಲಿ ಸಾಕಷ್ಟು ಉಲ್ಲೇಖಗಳಿವೆ. ಆದ್ದರಿಂದ ಮನೆಯಲ್ಲಿ ಫೋಟೋ ನೇತು ಹಾಕುವಾಗ ವಾಸ್ತು ಶಾಸ್ತ್ರದ ಪ್ರಕಾರ ತಿಳಿದುಕೊಳ್ಳಬೇಕಾದ ಕೆಲವೊಂದು ಸಂಗತಿಗಳನ್ನು ಇಲ್ಲಿ ತಿಳಿದುಕೊಳ್ಳಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಯಾವುದೇ ಚಿತ್ರವನ್ನು ಇರಿಸುವ ಮೊದಲು ದಿಕ್ಕು ಮತ್ತು ಸಮಯವನ್ನು ಪರಿಶೀಲಿಸುವುದು ಅಗತ್ಯವಾಗಿರುತ್ತದೆ. ಯಾಕೆಂದರೆ ವಾಸ್ತು ಶಾಸ್ತ್ರವು ಜೀವನದ ಸಂತೋಷ ಮತ್ತು ಸಮೃದ್ಧಿಗೆ ನೇರವಾಗಿ ಸಂಬಂಧಿಸಿದೆ.

ಮನೆಯಲ್ಲಿ ಯಾವುದೇ ಚಿತ್ರಗಳನ್ನು ನೇತುಹಾಕಿದರೂ ಕೂಡ ಅವುಗಳನ್ನು ಹಗಲು ರಾತ್ರಿ ನೋಡುತ್ತೇವೆ. ಆದ್ದರಿಂದ, ಆ ಚಿತ್ರಗಳು ನಮ್ಮ ಜೀವನಶೈಲಿಯ ಮೇಲೆ ಆಳವಾದ ಪ್ರಭಾವ ಬೀರುತ್ತವೆ. ಆದ್ದರಿಂದ ಈ ಚಿತ್ರಗಳನ್ನು ಮನೆಯಲ್ಲಿ ನೇತು ಹಾಕಬೇಡಿ.

ಈ ಚಿತ್ರಗಳನ್ನು ಮನೆಯಲ್ಲಿ ನೇತು ಹಾಕಬೇಡಿ:

ಮಹಾಭಾರತದ ಕಥೆ ಸಾರುವ ಚಿತ್ರ:

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಮಹಾಭಾರತದ ಚಿತ್ರವನ್ನು ನೇತು ಹಾಕುವುದು ಅಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳನ್ನು ಹಾಕುವುದರಿಂದ ಮನೆಯಲ್ಲಿ ವೈಷಮ್ಯ ಮತ್ತು ಜಗಳ ಹೆಚ್ಚಾಗುತ್ತದೆ.

ಜಲಪಾತದ ಚಿತ್ರ:

ಮನೆಯಲ್ಲಿ ಹರಿಯುವ ಜಲಪಾತದ ಚಿತ್ರವನ್ನು ಹಾಕುವುದರಿಂದ ಆರ್ಥಿಕ ನಷ್ಟ ಉಂಟಾಗುತ್ತದೆ ಮತ್ತು ಮನಸ್ಸು ಅಸ್ಥಿರವಾಗಿರುತ್ತದೆ. ಅಂತಹ ಚಿತ್ರವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಈ ಚಿತ್ರಗಳನ್ನು ಹಾಕುವುದರಿಂದ ಖರ್ಚು ಹೆಚ್ಚಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಎಚ್ಚರಿಸುತ್ತಾರೆ.

ಯುದ್ಧದ ಫೋಟೋ:

ಯಾವುದೇ ಯುದ್ಧದ ಫೋಟೋವನ್ನು ಮನೆಯಲ್ಲಿ ಇರಿಸುವುದರಿಂದ ಕುಟುಂಬದಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ ಮತ್ತು ಕುಟುಂಬದ ಸಾಮರಸ್ಯವನ್ನು ಕಡಿಮೆ ಮಾಡುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ನಂಬಲಾಗಿದೆ.

ಮಗು ಅಳುತ್ತಿರುವ ಫೋಟೋ:

ಅಳುತ್ತಿರುವ ಮಗುವಿನ ಚಿತ್ರವನ್ನು ಹಾಕುವುದರಿಂದ ಮಾನಸಿಕ ತೊಂದರೆ ಉಂಟಾಗುತ್ತದೆ. ಇದರ ಹೊರತಾಗಿ ದುಃಖದ ವಾತಾವರಣವನ್ನು ಸೃಷ್ಟಿಸುವ ಯಾವುದೇ ಚಿತ್ರವನ್ನು ಮನೆಯಲ್ಲಿ ಇಡಬಾರದು.

ಇದನ್ನೂ ಓದಿ: ಆರ್ಥಿಕ ಸ್ಥಿತಿ ಸುಧಾರಿಸಲು ಲಾಫಿಂಗ್​​ ಬುದ್ಧನನ್ನು ಮನೆಯ ಯಾವ ಮೂಲೆಯಲ್ಲಿ ಇಡಬೇಕು?

ಲಕ್ಷ್ಮಿ ದೇವಿಯ ಫೋಟೋ:

ಲಕ್ಷ್ಮಿ ದೇವಿಯ ನಿಂತಿರುವ ಚಿತ್ರವನ್ನು ಮನೆಯಲ್ಲಿ ಇಡಬಾರದು. ಇದು ಆರ್ಥಿಕವಾಗಿ ನಷ್ಟಕ್ಕೆ ಕಾರಣವಾಗಬಹುದು. ಇದಲ್ಲದೇ ಲಕ್ಷ್ಮಿ ಕುಳಿತಿರುವ ಚಿತ್ರವನ್ನು ಪೂಜಾ ಕೋಣೆಯಲ್ಲಿ ಮಾತ್ರ ಇಡಬೇಕು.

ನಟರಾಜನ ಚಿತ್ರ:

ಮನೆಯಲ್ಲಿ ನಟರಾಜನ ಚಿತ್ರವನ್ನು ಹಾಕುವುದು ಅಶುಭವೆಂದು ಪರಿಗಣಿಸಲಾಗಿದೆ. ನಟರಾಜನ ನೃತ್ಯ ಪ್ರದರ್ಶನ ಮಾಡುವ ಚಿತ್ರ ಅಥವಾ ವಿಗ್ರಹವನ್ನು ಹಾಕುವುದು ವಿನಾಶದ ಸಂಕೇತವಾಗಿದೆ. ಆದ್ದರಿಂದ ಈ ಚಿತ್ರವನ್ನು ಮನೆಯಲ್ಲಿ ಇಡಬಾರದು ಎಂದು ವಾಸ್ತು ಶಾಸ್ತ್ರಜ್ಞರು ಎಚ್ಚರಿಸುತ್ತಾರೆ.

ಸಮಾಧಿ, ಹೊಡೆದಾಟದ ಚಿತ್ರ:

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಯಾವುದೇ ಸಮಾಧಿ ಅಥವಾ ಸಮಾಧಿಯ ಚಿತ್ರವನ್ನು ಇಡಬಾರದು. ಇದರಿಂದ ಕುಟುಂಬದ ಸದಸ್ಯರಿಗೆ ಹಾನಿಯಾಗಬಹುದು. ಇದಲ್ಲದೇ ಹಿಂಸೆ, ಬೇಟೆ ಅಥವಾ ಹೊಡೆದಾಟವನ್ನು ಬಿಂಬಿಸುವ ಚಿತ್ರಗಳನ್ನು ಮನೆಯಲ್ಲಿ ಇಡಬಾರದು. ಇಂತಹ ಚಿತ್ರವನ್ನು ಪೋಸ್ಟ್ ಮಾಡುವುದರಿಂದ ಕುಟುಂಬದಲ್ಲಿ ಉದ್ವಿಗ್ನತೆ ಉಂಟಾಗಿ ಸಂಕಷ್ಟದ ವಾತಾವರಣ ನಿರ್ಮಾಣವಾಗುತ್ತದೆ ಎನ್ನಲಾಗಿದೆ.

ಮುಳುಗುತ್ತಿರುವ ಹಡಗು:

ಮುಳುಗುತ್ತಿರುವ ಹಡಗು ಅಥವಾ ದೋಣಿಯ ಚಿತ್ರವನ್ನು ತಪ್ಪಾಗಿಯೂ ನಿಮ್ಮ ಮನೆಯಲ್ಲಿ ಹಾಕಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ನಂಬಲಾಗಿದೆ.

ಈ ಚಿತ್ರಗಳಲ್ಲದೆ ಹಾವು, ಪಾರಿವಾಳ, ಕೋತಿ, ಗೂಬೆ, ಕರಡಿ, ಹಂದಿ, ಹುಲಿ ಮತ್ತು ನರಿ ಇತ್ಯಾದಿ ಕೆಲವು ಪ್ರಾಣಿಗಳ ಚಿತ್ರಗಳನ್ನು ಮನೆಯಲ್ಲಿ ಇಡಬಾರದು. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಪರ್ವತಗಳ ಚಿತ್ರಗಳನ್ನು ಹಾಕುವುದು ಅಥವಾ ಸೂರ್ಯಾಸ್ತಮಾನವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅಂತಹ ಚಿತ್ರಗಳು ಜೀವನದಲ್ಲಿ ನಿರಾಶೆ ಮತ್ತು ಅವನತಿ ತರುತ್ತವೆ.‘

ಆಧ್ಯಾತ್ಮಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:46 pm, Sat, 25 November 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು