AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?

ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ಕೆಲವು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ನಿಮ್ಮ ಕಾರಿನಲ್ಲಿ ಯಾವ ವಸ್ತುವನ್ನು ಇಡುವುದು ಶುಭ? ಹಾಗೂ ಅಶುಭಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?
Vastu Tips For CarImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 07, 2023 | 11:02 AM

ನಮ್ಮ ಪುಟ್ಟ ಕುಟುಂಬಕ್ಕೊಂದು ಕಾರು ಬೇಕು ಎಂಬುದು ಎಲ್ಲರ ಕನಸು. ಅಂದರಂತೆಯೇ ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ವಾಸ್ತು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಹೀಗೆ ಮಾಡುವುದರಿಂದ ನಕಾರಾತ್ಮಕತೆ ದೂರವಾಗುತ್ತದೆ ಎಂಬ ನಂಬಿಕೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ನಿಮ್ಮ ಕಾರಿನಲ್ಲಿ ಇಡುವುದು ತುಂಬಾ ಒಳ್ಳೆಯದು. ಜೊತೆಗೆ ಯಾವ ವಸ್ತುವನ್ನು ಇಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಕಾರಿನಲ್ಲಿ ದೇವರ ಮೂರ್ತಿ ಇಡುವುದು ಶುಭವೇ?

ಸಾಮಾನ್ಯವಾಗಿ ಎಲ್ಲರೂ ತಮ್ಮ ಕಾರಿನಲ್ಲಿ ಕೆಲವು ದೇವರ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಕಾಣಬಹುದು. ವಾಸ್ತು ಶಾಸ್ತ್ರದ ಪ್ರಕಾರ ಗಣೇಶನ ಸಣ್ಣ ವಿಗ್ರಹವನ್ನು ಕಾರಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಗಣೇಶನಿಗೆ ಕೇತುವಿನ ಸಂಬಂಧವಿದೆ. ಹಾಗಾಗಿ ಕಾರಿನಲ್ಲಿ ಗಣೇಶನ ಮೂರ್ತಿ ಇದ್ದರೆ ಅಪಘಾತಗಳ ಸಮಸ್ಯೆ ದೂರವಾಗುತ್ತದೆ. ಅದೂ ಅಲ್ಲದೆ ಗಾಳಿಯಲ್ಲಿ ತೂಗಾಡುತ್ತಿರುವ ಹನುಮಂತನ ಮೂರ್ತಿಯನ್ನು ಕಾರಿನಲ್ಲಿ ಪ್ರತಿಷ್ಠಾಪಿಸುವುದು ಶುಭ. ಕಾರಿನಲ್ಲಿ ಪ್ರಯಾಣಿಸುವಾಗ ಎದುರಾಗುವ ಎಲ್ಲಾ ತೊಂದರೆಗಳನ್ನು ಹನುಮಂತ ನಿವಾರಿಸುತ್ತಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಈ ಫೋಟೋಗಳನ್ನು ಮನೆಯಲ್ಲಿ ಇಡುವುದು, ಸಮಸ್ಯೆಯನ್ನು ನೀವೇ ಬರಮಾಡಿಕೊಂಡಂತೆ

ಈ ವಸ್ತುಗಳನ್ನು ಕಾರಿನಲ್ಲಿ ಇಡಿ:

ಸಾರಯುಕ್ತ ತೈಲ:

ಕಾರಿನಲ್ಲಿ ಸಣ್ಣ ಬಾಟಲಿಯ ಸಾರಯುಕ್ತ ತೈಲವನ್ನು ಇಟ್ಟುಕೊಳ್ಳುವುದು ವಾಸ್ತು ಪ್ರಕಾರ ಧನಾತ್ಮಕತೆಯ ಸಂಕೇತವಾಗಿದೆ. ಮನಸ್ಸನ್ನು ಶಾಂತಗೊಳಿಸುತ್ತದೆ. ಇದರ ಸುವಾಸನೆಯು ಕಾರು ಪ್ರಯಾಣಿಕರನ್ನು ಸುಸ್ತಾಗದಂತೆ ಮಾಡುತ್ತದೆ. ಜೊತೆಗೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಆಮೆ ಆಟಿಕೆ:

ಕಾರಿನಲ್ಲಿ ಸಣ್ಣ ಆಮೆ ಆಟಿಕೆ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಆಮೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಾರಿನಲ್ಲಿ ಇಡಬಾರದ ವಸ್ತುಗಳು:

ಯಾವುದೇ ಮುರಿದ ವಸ್ತುಗಳನ್ನು ಕಾರಿನಲ್ಲಿ ಇಡಬೇಡಿ. ಕಾರಿನ ಕಿಟಕಿಗಳು, ಕಾರ್ಪೆಟ್, ಸೀಟುಗಳನ್ನು ಯಾವಾಗಲೂ ಸ್ವಚ್ಛವಾಗಿಡಿ. ಇದು ನಿಮಗೆ ಶಾಂತಿಯನ್ನು ನೀಡುತ್ತದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ