Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?

ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ಕೆಲವು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ನಿಮ್ಮ ಕಾರಿನಲ್ಲಿ ಯಾವ ವಸ್ತುವನ್ನು ಇಡುವುದು ಶುಭ? ಹಾಗೂ ಅಶುಭಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?
Vastu Tips For Car
Image Credit source: Pinterest

Updated on: Dec 07, 2023 | 11:02 AM

ನಮ್ಮ ಪುಟ್ಟ ಕುಟುಂಬಕ್ಕೊಂದು ಕಾರು ಬೇಕು ಎಂಬುದು ಎಲ್ಲರ ಕನಸು. ಅಂದರಂತೆಯೇ ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ವಾಸ್ತು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಹೀಗೆ ಮಾಡುವುದರಿಂದ ನಕಾರಾತ್ಮಕತೆ ದೂರವಾಗುತ್ತದೆ ಎಂಬ ನಂಬಿಕೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ನಿಮ್ಮ ಕಾರಿನಲ್ಲಿ ಇಡುವುದು ತುಂಬಾ ಒಳ್ಳೆಯದು. ಜೊತೆಗೆ ಯಾವ ವಸ್ತುವನ್ನು ಇಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಕಾರಿನಲ್ಲಿ ದೇವರ ಮೂರ್ತಿ ಇಡುವುದು ಶುಭವೇ?

ಸಾಮಾನ್ಯವಾಗಿ ಎಲ್ಲರೂ ತಮ್ಮ ಕಾರಿನಲ್ಲಿ ಕೆಲವು ದೇವರ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಕಾಣಬಹುದು. ವಾಸ್ತು ಶಾಸ್ತ್ರದ ಪ್ರಕಾರ ಗಣೇಶನ ಸಣ್ಣ ವಿಗ್ರಹವನ್ನು ಕಾರಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಗಣೇಶನಿಗೆ ಕೇತುವಿನ ಸಂಬಂಧವಿದೆ. ಹಾಗಾಗಿ ಕಾರಿನಲ್ಲಿ ಗಣೇಶನ ಮೂರ್ತಿ ಇದ್ದರೆ ಅಪಘಾತಗಳ ಸಮಸ್ಯೆ ದೂರವಾಗುತ್ತದೆ. ಅದೂ ಅಲ್ಲದೆ ಗಾಳಿಯಲ್ಲಿ ತೂಗಾಡುತ್ತಿರುವ ಹನುಮಂತನ ಮೂರ್ತಿಯನ್ನು ಕಾರಿನಲ್ಲಿ ಪ್ರತಿಷ್ಠಾಪಿಸುವುದು ಶುಭ. ಕಾರಿನಲ್ಲಿ ಪ್ರಯಾಣಿಸುವಾಗ ಎದುರಾಗುವ ಎಲ್ಲಾ ತೊಂದರೆಗಳನ್ನು ಹನುಮಂತ ನಿವಾರಿಸುತ್ತಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಈ ಫೋಟೋಗಳನ್ನು ಮನೆಯಲ್ಲಿ ಇಡುವುದು, ಸಮಸ್ಯೆಯನ್ನು ನೀವೇ ಬರಮಾಡಿಕೊಂಡಂತೆ

ಈ ವಸ್ತುಗಳನ್ನು ಕಾರಿನಲ್ಲಿ ಇಡಿ:

ಸಾರಯುಕ್ತ ತೈಲ:

ಕಾರಿನಲ್ಲಿ ಸಣ್ಣ ಬಾಟಲಿಯ ಸಾರಯುಕ್ತ ತೈಲವನ್ನು ಇಟ್ಟುಕೊಳ್ಳುವುದು ವಾಸ್ತು ಪ್ರಕಾರ ಧನಾತ್ಮಕತೆಯ ಸಂಕೇತವಾಗಿದೆ. ಮನಸ್ಸನ್ನು ಶಾಂತಗೊಳಿಸುತ್ತದೆ. ಇದರ ಸುವಾಸನೆಯು ಕಾರು ಪ್ರಯಾಣಿಕರನ್ನು ಸುಸ್ತಾಗದಂತೆ ಮಾಡುತ್ತದೆ. ಜೊತೆಗೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಆಮೆ ಆಟಿಕೆ:

ಕಾರಿನಲ್ಲಿ ಸಣ್ಣ ಆಮೆ ಆಟಿಕೆ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಆಮೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಾರಿನಲ್ಲಿ ಇಡಬಾರದ ವಸ್ತುಗಳು:

ಯಾವುದೇ ಮುರಿದ ವಸ್ತುಗಳನ್ನು ಕಾರಿನಲ್ಲಿ ಇಡಬೇಡಿ. ಕಾರಿನ ಕಿಟಕಿಗಳು, ಕಾರ್ಪೆಟ್, ಸೀಟುಗಳನ್ನು ಯಾವಾಗಲೂ ಸ್ವಚ್ಛವಾಗಿಡಿ. ಇದು ನಿಮಗೆ ಶಾಂತಿಯನ್ನು ನೀಡುತ್ತದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us