AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu for kitchen: ಮನೆಯಲ್ಲಿ ಪಾತ್ರೆಗಳನ್ನು ಮಗುಚಿ ಇಡಬಾರದು ಏಕೆ ಗೊತ್ತಾ?

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ಪಾತ್ರೆಗಳನ್ನು ಸರಿಯಾಗಿ ಇಡುವುದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪಾತ್ರೆಗಳನ್ನು ಮಗುಚಿ ಇಡಬಾರದು, ಏಕೆಂದರೆ ಇದು ನಕಾರಾತ್ಮಕತೆಯನ್ನು ಆಹ್ವಾನಿಸುತ್ತದೆ. ಚಪಾತಿ ಮಾಡುವ ತವಾ ಮತ್ತು ಕಾವಲಿಯನ್ನು, ಪಾತ್ರೆಗಳನ್ನು ಪಶ್ಚಿಮ ದಿಕ್ಕಿನಲ್ಲಿ ಇಡುವುದು ಉತ್ತಮ. ಜೊತೆಗೆ ಅಡುಗೆಮನೆಯನ್ನು ಸ್ವಚ್ಛವಾಗಿಡುವುದು ಅತ್ಯಗತ್ಯ.

Vastu for kitchen: ಮನೆಯಲ್ಲಿ ಪಾತ್ರೆಗಳನ್ನು ಮಗುಚಿ ಇಡಬಾರದು ಏಕೆ ಗೊತ್ತಾ?
Do Not Keep These Utensils Upside Down
ಅಕ್ಷತಾ ವರ್ಕಾಡಿ
|

Updated on: Apr 29, 2025 | 12:41 PM

Share

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರ ಎರಡರಲ್ಲೂ ಅಡುಗೆಮನೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯಲ್ಲಿ ಇಡುವ ವಸ್ತುಗಳನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಇಟ್ಟರೆ ಮಾತ್ರ ಆ ಮನೆಯಲ್ಲಿ ಸಕರಾತ್ಮಕ ಶಕ್ತಿ ಹರಡಲು ಸಾಧ್ಯ ಎಂದು ಹೇಳಲಾಗುತ್ತದೆ. ಅದರಂತೆ ಅಡುಗೆ ಪಾತ್ರೆಗಳನ್ನು ಯಾವ ಸ್ಥಿತಿಯಲ್ಲಿ ಇಡಬೇಕು ಎಂಬುದರ ಕುರಿತು ವಾಸ್ತುವಿನಲ್ಲ ಕಾಲಕಾಲಕ್ಕೆ ಉಲ್ಲೇಖಿಸಲಾಗಿದೆ. ಅವುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅಡುಗೆಮನೆಯಲ್ಲಿ ಬಳಸುವ ಪಾತ್ರೆಗಳನ್ನು ತಲೆಕೆಳಗಾಗಿ ಅಂದರೆ ಮುಗುಚಿ ಇಡಬಾರದು. ಪಾತ್ರೆಗಳನ್ನು ತಲೆಕೆಳಗಾಗಿ ಇಡುವುದರಿಂದ ನಕಾರಾತ್ಮಕತೆ ಬರುತ್ತದೆ. ಹೀಗೆ ಮಾಡುವುದು ಮನೆಯಲ್ಲಿ ಆರ್ಥಿಕ ನಷ್ಟ, ದುರದೃಷ್ಟ ಮತ್ತು ವಿವಾದಗಳನ್ನು ಆಹ್ವಾನಿಸಿದಂತೆ ಎಂದು ವಾಸ್ತು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಇಷ್ಟು ಮಾತ್ರವಲ್ಲದೆ, ಚಪಾತಿ ಮಾಡುವ ಕಾವಲಿ, ತವಾ ಎಂದಿಗೂ ಮಗುಚಿ ಹಾಕಬಾರದು. ಹೀಗೆ ಮಾಡಿದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.ಸಾಲ ಹೆಚ್ಚಾಗಬಹುದು ಜೀವನದಲ್ಲಿ ಬಡತನವನ್ನು ಎದುರಿಸಬೇಕಾಗಬಹುದು. ಅದು ಕೆಲಸದಲ್ಲಿ ಅಡೆತಡೆಗಳನ್ನು ಉಂಟುಮಾಡಬಹುದು. ಹೀಗೆ ಮಾಡುವುದರಿಂದ, ವೈವಾಹಿಕ ಜೀವನದಲ್ಲಿ ಬಿರುಕು, ದೇಶೀಯ ಜಗಳಗಳು ಮತ್ತು ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳ ಸಾಧ್ಯತೆಯೂ ಹೆಚ್ಚಾಗುತ್ತದೆ.

ಇದನ್ನೂ ಓದಿ: ವಿವಾಹಿತ ಮಹಿಳೆಯರು ಈ ದಿನ ತಪ್ಪಿಯೂ ತಲೆ ಸ್ನಾನ ಮಾಡಬಾರದು!

ವಾಸ್ತು ತಜ್ಞರ ಪ್ರಕಾರ ಅಡುಗೆ ಮನೆಯಲ್ಲಿರುವ ಪಾತ್ರೆಗಳನ್ನು ಯಾವಾಗಲೂ ಪಶ್ಚಿಮ ದಿಕ್ಕಿನಲ್ಲಿಯೇ ಇಡಬೇಕು. ಈ ದಿಕ್ಕಿನಲ್ಲಿ ಪಾತ್ರೆಗಳನ್ನು ಇಡುವುದು ಉತ್ತಮ. ಇದು ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಪರಿಗಣಿಸಲಾಗಿದೆ. ಜೊತೆಗೆ ರಾತ್ರಿ ಅಡುಗೆ ಮಾಡಿದ ಪಾತ್ರೆಗಳನ್ನು ರಾತ್ರಿಯೇ ತೊಳೆದಿದೆ. ಜೊತೆಗೆ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ